ಪ್ರಸವ ಪೂರ್ವ ಲಿಂಗಪತ್ತೆ ಅಪರಾಧ: ಪೂವಿತ


Team Udayavani, May 24, 2020, 1:21 PM IST

povita

ಚಿಕ್ಕಮಗಳೂರು: ಜಿಪಂ ಮಿನಿ ಸಭಾಂಗಣದಲ್ಲಿ ಸಿ.ಪಿ ಮತ್ತು ಪಿ.ಎನ್‌.ಡಿ.ಟಿ. ಜಿಲ್ಲಾ ಸಲಹಾ ಸಮಿತಿ ಸಭೆ ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಸ್‌. ಪೂವಿತ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿಕ್ಕಮಗಳೂರು: ಪ್ರಸವಪೂರ್ವ ಲಿಂಗಪತ್ತೆ ಹಾಗೂ ಹತ್ಯೆ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಎಸ್‌. ಪೂವಿತ ಹೇಳಿದರು. ಶುಕ್ರವಾರ ನಗರದ ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಸಿ.ಪಿ ಮತ್ತು ಪಿ.ಎನ್‌.ಡಿ.ಟಿ. ಜಿಲ್ಲಾ ಸಲಹ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಿ.ಪಿ. ಮತ್ತು ಪಿ.ಎನ್‌.ಡಿ.ಟಿ. ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರೊಂದಿಗೆ ಹೆಣ್ಣುಮಕ್ಕಳ ಅನುಪಾತ ಹೆಚ್ಚಿಸಿ ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತವನ್ನು ಸಮಗೊಳಿಸಬೇಕು. ಗಂಡು ಮಗು ಬೇಕು ಎನ್ನುವ ಪೋಷಕರ ಹಂಬಲ ಹಾಗೂ ಮೂಢನಂಬಿಕೆಗಳು ಹೆಣ್ಣು ಶಿಶು ಹತ್ಯೆಗೆ ಕಾರಣವಾಗಿದೆ. ಸಮಾಜದಲ್ಲಿ ಇದನ್ನು ಹೋಗಲಾಡಿಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ಯಾನಿಂಗ್‌ ಕೇಂದ್ರಗಳಿಗೆ ಸಮಿತಿ ಸದಸ್ಯರು ಅನಿರೀಕ್ಷಿತ ಭೇಟಿ ನೀಡುವುದರೊಂದಿಗೆ ಅವುಗಳ ನಿರ್ವಹಣೆ ಮತ್ತು
ತಪಾಸಣೆ ಮಾಡುವುದರೊಂದಿಗೆ ಅಕ್ರಮಗಳನ್ನು ತಡೆಯಬೇಕು ಎಂದರು. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಹಾಗೂ ಸರ್ಕಾರಿ ಸೇರಿ 53 ಸ್ಕ್ಯಾನಿಂಗ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ಸ್ಕ್ಯಾನಿಂಗ್‌ ಕೇಂದ್ರದವರು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.

ಸ್ಕ್ಯಾನಿಂಗ್‌ ಕೇಂದ್ರಗಳು ನೋಂದಾಯಿತ ವೃತ್ತಿಪರರು ಕಾಯ್ದೆಗಳ ಆಶಯಗಳ ವಿರುದ್ಧವಾಗಿ ನಡೆದುಕೊಂಡರೆ ಅವುಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳವುದರ ಜೊತೆಗೆ ನೋಂದಣಿಯನ್ನು ಅಮಾನತ್ತಿನಲ್ಲಿ ಇಡಲಾಗುವುದು ಎಂದರು. ಪ್ರಸವಪೂರ್ವ ಪರೀಕ್ಷೆಯನ್ನು ವರ್ಣತಂತುಗಳ ವೈಪರೀತ್ಯ, ಜನಟಿಕ್‌ ಮೆಟೋಪಾಲಿಸ್ಸ್ ಡಿಸಿಸ್ಸ್ ಸೇರಿದಂತೆ ಮತ್ತಿತರ ಕಾಯಿಲೆಗಳನ್ನು ಗುರುತಿಸಲು ಮಾಡಿಸಬೇಕೆ ಹೊರತು ಬೇರೆ ಯಾವುದಕ್ಕೂ ಪರೀಕ್ಷಿಸಬಾರದು ಎಂದರು.

ಎಲ್ಲಾ ಸ್ಕ್ಯಾನಿಂಗ್‌ ಕೇಂದ್ರಗಳಲ್ಲಿ ತಪಾಸಣೆ ಮಾಡುವಾಗ ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸ್‌, ಹ್ಯಾಂಡ್‌ಗ್ಲೌಸ್‌ ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದರು. ಯಾವುದೇ ಅಸ್ಪತ್ರೆ ಅಥವಾ ನರ್ಸಿಂಗ್‌ ಹೋಮ್‌ ಗಳಲ್ಲಿ ಲಿಂಗಪತ್ತೆ ಭ್ರೂಣಹತ್ಯೆ ನಡೆಯುತ್ತಿದೆ ಎಂಬ ಸುಳಿವು ಸಿಕ್ಕಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಹಾಗೂ ಮಹಿಳಾ ಸಹಾಯವಾಣಿ 1091 ಕ್ಕೆ ಉಚಿತ ಕರೆ ಮಾಡುವುದರೊಂದಿಗೆ ಮಾಹಿತಿ ನೀಡಬಹುದು ಎಂದರು.

ಸಭೆಯಲ್ಲಿ ಸಮಿತಿ ಅಧ್ಯಕ್ಷ ಡಾ| ರಾಮಕೃಷ್ಣ, ಸದಸ್ಯರಾದ ಡಾ| ಶುಭಾ ವಿಜಯ್‌, ಡಾ| ರವಿ ಶಂಕರ್‌, ನೇತ್ರಾವತಿ ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.