ಪ್ರಸವ ಪೂರ್ವ ಲಿಂಗಪತ್ತೆ ಅಪರಾಧ: ಪೂವಿತ


Team Udayavani, May 24, 2020, 1:21 PM IST

povita

ಚಿಕ್ಕಮಗಳೂರು: ಜಿಪಂ ಮಿನಿ ಸಭಾಂಗಣದಲ್ಲಿ ಸಿ.ಪಿ ಮತ್ತು ಪಿ.ಎನ್‌.ಡಿ.ಟಿ. ಜಿಲ್ಲಾ ಸಲಹಾ ಸಮಿತಿ ಸಭೆ ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಎಸ್‌. ಪೂವಿತ ಅಧ್ಯಕ್ಷತೆಯಲ್ಲಿ ನಡೆಯಿತು.

ಚಿಕ್ಕಮಗಳೂರು: ಪ್ರಸವಪೂರ್ವ ಲಿಂಗಪತ್ತೆ ಹಾಗೂ ಹತ್ಯೆ ಮಾಡುವುದು ಕಾನೂನಿನಡಿ ಶಿಕ್ಷಾರ್ಹ ಅಪರಾಧ ಎಂದು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ಎಸ್‌. ಪೂವಿತ ಹೇಳಿದರು. ಶುಕ್ರವಾರ ನಗರದ ಜಿಪಂ ಮಿನಿ ಸಭಾಂಗಣದಲ್ಲಿ ನಡೆದ ಸಿ.ಪಿ ಮತ್ತು ಪಿ.ಎನ್‌.ಡಿ.ಟಿ. ಜಿಲ್ಲಾ ಸಲಹ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಿ.ಪಿ. ಮತ್ತು ಪಿ.ಎನ್‌.ಡಿ.ಟಿ. ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವುದರೊಂದಿಗೆ ಹೆಣ್ಣುಮಕ್ಕಳ ಅನುಪಾತ ಹೆಚ್ಚಿಸಿ ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತವನ್ನು ಸಮಗೊಳಿಸಬೇಕು. ಗಂಡು ಮಗು ಬೇಕು ಎನ್ನುವ ಪೋಷಕರ ಹಂಬಲ ಹಾಗೂ ಮೂಢನಂಬಿಕೆಗಳು ಹೆಣ್ಣು ಶಿಶು ಹತ್ಯೆಗೆ ಕಾರಣವಾಗಿದೆ. ಸಮಾಜದಲ್ಲಿ ಇದನ್ನು ಹೋಗಲಾಡಿಸಬೇಕು ಎಂದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಕ್ಯಾನಿಂಗ್‌ ಕೇಂದ್ರಗಳಿಗೆ ಸಮಿತಿ ಸದಸ್ಯರು ಅನಿರೀಕ್ಷಿತ ಭೇಟಿ ನೀಡುವುದರೊಂದಿಗೆ ಅವುಗಳ ನಿರ್ವಹಣೆ ಮತ್ತು
ತಪಾಸಣೆ ಮಾಡುವುದರೊಂದಿಗೆ ಅಕ್ರಮಗಳನ್ನು ತಡೆಯಬೇಕು ಎಂದರು. ಜಿಲ್ಲೆಯಲ್ಲಿ ಈಗಾಗಲೇ ಖಾಸಗಿ ಹಾಗೂ ಸರ್ಕಾರಿ ಸೇರಿ 53 ಸ್ಕ್ಯಾನಿಂಗ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ ಎಂದ ಅವರು, ಸ್ಕ್ಯಾನಿಂಗ್‌ ಕೇಂದ್ರದವರು ಸರ್ಕಾರದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದರು.

ಸ್ಕ್ಯಾನಿಂಗ್‌ ಕೇಂದ್ರಗಳು ನೋಂದಾಯಿತ ವೃತ್ತಿಪರರು ಕಾಯ್ದೆಗಳ ಆಶಯಗಳ ವಿರುದ್ಧವಾಗಿ ನಡೆದುಕೊಂಡರೆ ಅವುಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳವುದರ ಜೊತೆಗೆ ನೋಂದಣಿಯನ್ನು ಅಮಾನತ್ತಿನಲ್ಲಿ ಇಡಲಾಗುವುದು ಎಂದರು. ಪ್ರಸವಪೂರ್ವ ಪರೀಕ್ಷೆಯನ್ನು ವರ್ಣತಂತುಗಳ ವೈಪರೀತ್ಯ, ಜನಟಿಕ್‌ ಮೆಟೋಪಾಲಿಸ್ಸ್ ಡಿಸಿಸ್ಸ್ ಸೇರಿದಂತೆ ಮತ್ತಿತರ ಕಾಯಿಲೆಗಳನ್ನು ಗುರುತಿಸಲು ಮಾಡಿಸಬೇಕೆ ಹೊರತು ಬೇರೆ ಯಾವುದಕ್ಕೂ ಪರೀಕ್ಷಿಸಬಾರದು ಎಂದರು.

ಎಲ್ಲಾ ಸ್ಕ್ಯಾನಿಂಗ್‌ ಕೇಂದ್ರಗಳಲ್ಲಿ ತಪಾಸಣೆ ಮಾಡುವಾಗ ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್, ಸ್ಯಾನಿಟೈಸ್‌, ಹ್ಯಾಂಡ್‌ಗ್ಲೌಸ್‌ ಗಳನ್ನು ಕಡ್ಡಾಯವಾಗಿ ಬಳಸಬೇಕು ಎಂದರು. ಯಾವುದೇ ಅಸ್ಪತ್ರೆ ಅಥವಾ ನರ್ಸಿಂಗ್‌ ಹೋಮ್‌ ಗಳಲ್ಲಿ ಲಿಂಗಪತ್ತೆ ಭ್ರೂಣಹತ್ಯೆ ನಡೆಯುತ್ತಿದೆ ಎಂಬ ಸುಳಿವು ಸಿಕ್ಕಲ್ಲಿ ಮಕ್ಕಳ ಸಹಾಯವಾಣಿ 1098 ಗೆ ಹಾಗೂ ಮಹಿಳಾ ಸಹಾಯವಾಣಿ 1091 ಕ್ಕೆ ಉಚಿತ ಕರೆ ಮಾಡುವುದರೊಂದಿಗೆ ಮಾಹಿತಿ ನೀಡಬಹುದು ಎಂದರು.

ಸಭೆಯಲ್ಲಿ ಸಮಿತಿ ಅಧ್ಯಕ್ಷ ಡಾ| ರಾಮಕೃಷ್ಣ, ಸದಸ್ಯರಾದ ಡಾ| ಶುಭಾ ವಿಜಯ್‌, ಡಾ| ರವಿ ಶಂಕರ್‌, ನೇತ್ರಾವತಿ ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.