ಕಾಲೇಜು ಹಂತದಲ್ಲೇ ಸಾಧಿಸಿ ಭವಿಷ್ಯ ಭದ್ರಪಡಿಸಿಕೊಳ್ಳಿ
Team Udayavani, Sep 2, 2017, 2:57 PM IST
ಕೊಪ್ಪ: ಕಾಲೇಜು ಜೀವನ ನಮ್ಮ ಜೀವನದ ಮಹತ್ವದ ಘಟ್ಟ. ಉತ್ತಮ ಸಾಧನೆ ಮಾಡಿ ಭವಿಷ್ಯ ಸಾರ್ಥಕಗೊಳಿಸಿ ಎಂದು ಚಿತ್ರನಟ ಮಾ|ಆನಂದ್ ಹೇಳಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡಿದ್ದರಿಂದ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿಲ್ಲ. ನಂತರ ಕಾರಣಾಂತರದಿಂದ ವಿದ್ಯಾಭ್ಯಾಸ ಮುಂದುವರಿಸಲಾಗದೆ
ಚಿತ್ರರಂಗಕ್ಕೆ ಕಾಲಿಟ್ಟೆ. ಆದರೂ ಪದವಿ ಮಾಡಬೇಕೆಂಬ ಆಸಕ್ತಿಯಿಂದ ಬಿ.ಕಾಂ. ಮುಗಿಸಿದ್ದೇನೆ. ಆದರೆ ಇಂದಿಗೂ ನನ್ನ ಬಳಿ ದ್ವಿತೀಯ ಪಿಯುಸಿ ಸರ್ಟಿಕೇಟ್ ಇಲ್ಲ. ಇದರಿಂದ ಅನೇಕ ಕಡೆ ತೊಂದರೆ ಅನುಭವಿಸಿದ್ದೇನೆ. ನೀವು ಇಂತಹ ಸಂದಿಗ್ಧ ಸ್ಥಿತಿಯನ್ನು ಎದುರಿಸುವುದು ಬೇಡ. ಪ್ರತಿಯೊಬ್ಬನ ಜೀವನದ ಸಮಯ ಅಮೂಲ್ಯವಾದುದು. ಅದು ನಮ್ಮ ಭವಿಷ್ಯ ನಿರ್ಧರಿಸುತ್ತದೆ. ವಿಶ್ವಾಸದೊಂದಿಗೆ ಸಾಧನೆ ಮಾಡಿ. ಸವಾಲಾಗಿ ಸ್ವೀಕರಿಸಿ ಅಧ್ಯಯನ ಮಾಡಿದಾಗ ಯಶಸ್ಸು ಸಿದ್ಧಿಸುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಡಿ.ಎನ್. ಜೀವರಾಜ್, ಕಲಾವಿದರ ಜೀವನಶೈಲಿ ಸಾರ್ವಜನಿಕರ ಮೇಲೆ ಪರಿಣಾಮ ಬೀರುತ್ತದೆ. ಮಾ| ಆನಂದ್ ಉತ್ತಮ ಕಲಾವಿದ. ಚಲನಚಿತ್ರ, ಕಿರುತೆರೆ, ಟಿವಿಶೋಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಉತ್ತಮ
ಸಂದೇಶ ಕೊಟ್ಟಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆಯ ವಿಚಾರಗಳಿಗೆ ಹೆಚ್ಚು ಗಮನ ನೀಡದೇ ಓದಿಗೆ ಹೆಚ್ಚು ಒತ್ತು ನೀಡಿ ಎಂದರು.
ಸಮಾರಂಭದಲ್ಲಿ ಮಾ| ಆನಂದ್ ಹಾಗೂ ಶಾಸಕ ಡಿ.ಎನ್. ಜೀವರಾಜ್ ಅವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಆಂಡ್ ರೇಂಜರ್, ರೆಡ್ಕ್ರಾಸ್, ರೆಡ್ ರಿಬ್ಬನ್ ವೇದಿಕೆಗಳಿಗೆ ಚಾಲನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಎಸ್.ಎನ್.ರಾಮಸ್ವಾಮಿ. ಪಟ್ಟಣ ಪಂಚಾಯತ್ ಅಧ್ಯಕ್ಷೆ ವಾಣಿ ಸತೀಶ್ ಹೆಗ್ಡೆ, ಕಾಲೇಜು ಪ್ರಾಂಶುಪಾಲ ಅನಂತ್, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಹೊನಗಾರು ಶಿವಪ್ಪ, ನಾರ್ವೆ ಅಶೋಕ್, ರವಿಕುಮಾರ್, ಪ್ರಿಯಾ ಹರೀಶ್, ಉಪನ್ಯಾಸಕರಾದ ಡಿ.ಎಸ್. ಉದಯಕುಮಾರ್, ಪ್ರಸನ್ನಕುಮಾರ್, ಭಾಗ್ಯಲಕ್ಷ್ಮೀ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು