ಸಮನ್ವಯದಿಂದ ಪಶ್ಚಿಮಘಟ್ಟಗಳ ರಕ್ಷಣೆ ಮಾಡಿ

ಅರಣ್ಯ ಸಂರಕ್ಷಣೆಗೆ ಸರಕಾರದಿಂದ ಹೆಚ್ಚಿನ ಆರ್ಥಿಕ ನೆರವು ನೀಡಲಾಗುತ್ತಿದೆ: ರವಿ ಕುಶಾಲಪ್ಪ

Team Udayavani, Apr 21, 2022, 3:34 PM IST

western-ghats

ಚಿಕ್ಕಮಗಳೂರು: ಅರಣ್ಯ ಇಲಾಖೆ, ಕಂದಾಯ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಪಡೆ ಅಧ್ಯಕ್ಷ ರವಿಕುಶಾಲಪ್ಪ ಹೇಳಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಶ್ಚಿಮಘಟ್ಟ ಕಾರ್ಯ ಪಡೆ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ, ಅರಣ್ಯದ ಬಗ್ಗೆ ಅರಿವು ಮೂಡಿಸದೇ ಹೋದರೆ ಮುಂದಿನ ದಿನಗಳಲ್ಲಿ ಕಷ್ಟ ಎದುರಾಗಲಿದೆ. ವಿದ್ಯಾರ್ಥಿಗಳು, ಯುವಸಮೂಹಕ್ಕೆ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಗಳಾಗಬೇಕು. ಹೆಚ್ಚು ಗಿಡ ನೆಡುವ ಕಾರ್ಯಗಳಾಗಬೇಕು ಎಂದರು.

ಅರಣ್ಯ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಆರ್ಥಿಕ ನೆರವು ನೀಡುತ್ತಿದೆ. ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟಲು ಗಮನ ಹರಿಸಬೇಕಿದೆ. ಆನೆ ಹಾವಳಿ ತಪ್ಪಿಸಲು ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಬೇಕು. ಕಾಡಿನೊಳಗೆ ಅವುಗಳಿಗೆ ಆಹಾರ, ನೀರು ಮುಂತಾದ ಸೌಲಭ್ಯ ಒದಗಿಸುವ ಕಾರ್ಯವನ್ನು ಅರಣ್ಯ ಇಲಾಖೆ ಮಾಡಬೇಕು ಎಂದರು.

ಅರಣ್ಯ ಮೂಲನಿವಾಸಿಗಳಿಗೆ ನಿಯಮಾನು ಸಾರ ಸೌಲಭ್ಯಗಳನ್ನು ಒದಗಿಸಬೇಕು. ಕೆಳಹಂತದ ಅರಣ್ಯ ಸಿಬ್ಬಂದಿಗಳಿಗೆ ಸಮರ್ಪಕ ವಸತಿ ವ್ಯವಸ್ಥೆ ಕಲ್ಪಿಸಬೇಕು. ಸಕಾಲದಲ್ಲಿ ಅವರಿಗೆ ವೇತನ ಪಾವತಿಯಾಗಲು ಕ್ರಮವಹಿಸಬೇಕು. ರೈತರು ಜಮೀನುಗಳಲ್ಲಿ ಗಿಡಗಳನ್ನು ನೆಡಲು ಪ್ರೋತ್ಸಾಹಿಸಬೇಕು. ಇದಕ್ಕಾಗಿ ಪ್ರೋತ್ಸಾಹಧನವನ್ನು ನೀಡಲು ಸೂಚಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ.30 ಕ್ಕಿಂತಲೂ ಹೆಚ್ಚು ಅರಣ್ಯ ಪ್ರದೇಶವಿದೆ. ಅದರಲ್ಲಿ ಬೇರೆ ಬೇರೆ ವಿಭಾಗಗಳಿದ್ದು, ಜಿಲ್ಲೆಯಲ್ಲಿ ಮುಖ್ಯವಾದ ಹಾಗೂ ಇಲ್ಲಿಗೆ ಸೀಮಿತವಾದ ವಿಶೇಷ ಪ್ರಬೇಧದ ಮರ ಗಿಡಗಳು, ಪ್ರಾಣಿ ಪಕ್ಷಿಗಳಿವೆ. ಸಾಮಾಜಿಕ ಅರಣ್ಯ ವತಿಯಿಂದ ಪ್ರತೀ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಜೀವ ವೈವಿಧ್ಯತೆ ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಎನ್‌. ಇ.ಕಾಂತಿ ಸಭೆಗೆ ಮಾಹಿತಿ ನೀಡಿದರು.

2018-19 ಸಾಲಿನ ಹುಲಿ ಗಣತಿ ಪ್ರಕಾರ ಸುಮಾರು 35 ಹುಲಿಗಳು ಜಿಲ್ಲೆಯ ಅರಣ್ಯ ಗಳಲ್ಲಿವೆ. ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಸಸಿಗಳನ್ನು ವಿತರಣೆ ಮಾಡಿ ನಿರ್ವಹಣೆಗಾಗಿ ಮೂರು ವರ್ಷಗಳಿಗೆ ಧನ ಸಹಾಯ ನೀಡಲಾಗುತ್ತಿದೆ. 2018-19 ಸಾಲಿನಲ್ಲಿ ಸುಮಾರು 4,62,662 ಸಾವಿರ ಸಸಿಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಅರಣ್ಯಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಕರಣಗಳಿದ್ದು, ಅವುಗಳಲ್ಲಿ ಒತ್ತುವರಿ, ಶ್ರೀಗಂಧ ಮರ ಕಳ್ಳಸಾಗಣೆ, ವನ್ಯಮೃಗ ಬೇಟೆ ಸೇರಿದಂತೆ ಒಟ್ಟು 9,227 ಪ್ರಕರಣಗಳು ದಾಖಲಾಗಿದ್ದು, ಹಂತಹಂತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್‌ ಮಾತನಾಡಿ, ಅರಣ್ಯ ಮತ್ತು ಗೋಮಾಳ ಜಮೀನು ವಿಭಾಗಗಳಿದ್ದು, ಅರ್ಜಿಗಳನ್ನು ವಿಲೇವಾರಿ ಮಾಡುವ ಸಂದರ್ಭಗಳಲ್ಲಿ ತೊಂದರೆಯಾಗಬಹುದು ಎಂಬ ನಿಟ್ಟಿನಲ್ಲಿ ಯಾವ ವಿಭಾಗ ಎಂದು ಗುರುತಿಸಿ, ಸರ್ವೆ ಮಾಡಿ ಪ್ರತ್ಯೇಕಿಕರಣ ಮಾಡಲಾಗುತ್ತದೆ. ದಾಖಲೆಯಲ್ಲಿ ಅರಣ್ಯ ಎಂದು ದಾಖಲಾಗಿವೆ. ಅಂತಹ ಜಮೀನಿನಲ್ಲಿ ಜನವಸತಿ, ಶಾಲೆ, ಆಸ್ಪತ್ರೆ, ವಿವಿಧ ಕಟ್ಟಡಗಳಿವೆ ಅದನ್ನು ಏನು ಮಾಡಬೇಕು ಎನ್ನುವ ಸಮಸ್ಯೆ ಎದುರಾಗುತ್ತದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.