ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ ಕಲಿಸಿ


Team Udayavani, Sep 29, 2020, 5:13 PM IST

ರೈತ ವಿರೋಧಿ ಸರ್ಕಾರಕ್ಕೆ ಬುದ್ಧಿ  ಕಲಿಸಿ

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರನ್ನು ನಾಶ ಮಾಡಲು ಮುಂದಾಗಿದ್ದು, ಇಂತಹ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲಿ ಮತದಾದರೇ ಬುದ್ಧಿ ಕಲಿಸಬೇಕೆಂದು ರೈತ ಮುಖಂಡ ಗುರುಶಾಂತಪ್ಪ ಹೇಳಿದರು.

ಸೋಮವಾರ ರೈತ ಸಂಘಟನೆಗಳು ಕರೆ ನೀಡಿದ್ದ ರಾಜ್ಯ ಬಂದ್‌ ಹಿನ್ನೆಲೆಯಲ್ಲಿ ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು. ರೈತರು ಈಗಾಗಲೇ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸಬೇಕೇ ಹೊರತು ಕೃಷಿ ವ್ಯವಸ್ಥೆಯನ್ನು ಕಾರ್ಪೋರೆಟ್‌ ಕಂಪನಿಗಳ ವಶಕ್ಕೆ ನೀಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಭೂಮಿ ಖರೀದಿ ನಿರ್ಬಂಧ ತೆಗೆದು ಹಾಕಿ ತಿದ್ದುಪಡಿ ಕಾಯ್ದೆಯಲ್ಲಿ ವ್ಯಕ್ತಿ 450 ಎಕರೆ ಭೂಮಿ ಖರೀದಿ ಮಾಡಬಹುದಾಗಿದೆ. ಕೃಷಿಯೇತರ ಉದ್ದೇಶಕ್ಕೆ ಬಳಸಬಹುದಾಗಿದೆ. ಹಿಂದಿನ ಜಮೀನ್ದಾರಿ, ಪಾಳೆಗಾರಿಗೆ ವ್ಯವಸ್ಥೆ ಮತ್ತೆ ಬರಲಿದೆ ಎಂದರು.

ರೈತಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ತಿದ್ದುಪಡಿ ತರುವ ಮೂಲಕ ಬಂಡವಾಳಶಾಹಿಗಳ ತೆಕ್ಕೆಗೆ ನೀಡುತ್ತಿದೆ. ಕೃಷಿ ಉತ್ಪನ್ನಗಳಿಗೆ ಸ್ಪರ್ಧಾತ್ಮಕ ಬೆಲೆ ಸಿಗುತ್ತದೆ ಎಂದು ಸುಳ್ಳು ಹೇಳಿ, ವೈಜ್ಞಾನಿಕ ಬೆಲೆ ವಿಚಾರದಿಂದ ನುಣುಚಿಕೊಳ್ಳುತ್ತಿದೆ. 28 ಕೃಷಿ ಉತ್ಪನ್ನಗಳನ್ನು ಅಗತ್ಯ ವಸ್ತುಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಆಹಾರ ಭದ್ರತೆಗೆ ಪಟ್ಟುಬೀಳಲಿದೆ ಎಂದರು.

ಕಾಂಗ್ರೆಸ್‌ ಮುಖಂಡ ಎಂ.ಎಲ್‌. ಮೂರ್ತಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏನೇ ಮಾಡಿದರೂ ಆಲೋಚನೆ ಮಾಡದೆ ಮಾಡುತ್ತಾರೆ. ಚುನಾವಣೆ ವೇಳೆ ಮತದಾರರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು. ನಯಾ ಪೈಸೆಯೂ ಬರಲಿಲ್ಲ. ಜಿಎಸ್‌ಟಿಯಿಂದ ವ್ಯಾಪಾರಿಗಳಿಗೆ ಲಾಭವಾಗಲಿದೆ ಎಂದರು. ಆದರೆ, ವ್ಯಾಪಾರಿಗಳು ಜೆಎಸ್‌ಟಿ ಪಾವತಿ ಮಾಡಲೂ ಸಾಧ್ಯವಾಗುತ್ತಿಲ್ಲ. ಆಲೋಚನೆ ಮಾಡದೆ ಕೃಷಿ, ಎಪಿಎಂಸಿ, ಕಾರ್ಮಿಕ, ಭೂ ಸುಧಾರಣೆ ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ಕಾರ್ಪೋರೆಟ್‌ ಸಂಸ್ಥೆಗಳ ಋಣ ತೀರಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಪಿಐನ ಎಚ್‌.ಎಂ.ರೇಣುಕಾರಾಧ್‌ ಮಾತನಾಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ತನ್ನಿ ಎಂದು ಯಾರು ಬೇಡಿಕೆ ಇಟ್ಟಿದ್ದರು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.