chikmagalur; ಜಿಲ್ಲಾಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ;ಪ್ರತಿಭಟನೆ
Team Udayavani, Dec 31, 2023, 11:29 AM IST
ಚಿಕ್ಕಮಗಳೂರು: ಜಿಲ್ಲಾಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಬಾಣಂತಿ ಸಾವನ್ನಪ್ಪಿದ್ದಾಳೆಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಆವರಣದಲ್ಲಿ ಪ್ರತಿಭಟಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
22 ವರ್ಷದ ರಂಜಿತಾ ಬಾಯಿ ಅವರಿಗೆ ಶನಿವಾರ ಮಧ್ಯಾಹ್ನ ಹೆರಿಗೆ ಆಗಿದ್ದು ರಾತ್ರಿವೇಳೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮೃತಪಟ್ಟಿದ್ದಾಳೆ.
ಶನಿವಾರ ಮಧ್ಯಾಹ್ನ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಆದರೆ, ರಂಜಿತಾ ಬಾಯಿ ಆರೋಗ್ಯದಲ್ಲಿ ರಾತ್ರಿ ವೇಳೆ ಏರುಪೇರಾಗಿತ್ತು. ಈ ಬಗ್ಗೆ ಆಸ್ಪತ್ರೆ ವೈದ್ಯರಿಗೆ ಮಾಹಿತಿ ನೀಡಿದರೂ ಆಸ್ಪತ್ರೆ ಸಿಬ್ಬಂದಿ ಸ್ಪಂದಿಸಿಲ್ಲ, ಸಕಾಲದಲ್ಲಿ ವೈದ್ಯರು ಬಂದು ತಪಾಸಣೆ ಮಾಡಿಲ್ಲ. ಅಲ್ಲದೆ ಹೆರಿಗೆ ಮಾಡಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಹಣ ಕೇಳುತ್ತಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದರು.
ಇದನ್ನೂ ಓದಿ:SriLanka: ಶನಕ ನಾಯಕತ್ವ ಅಂತ್ಯ; ಲಂಕಾ ಏಕದಿನ- ಟಿ20 ತಂಡಕ್ಕೆ ಹೊಸ ನಾಯಕರ ಆಯ್ಕೆ
ಆಸ್ಪತ್ರೆ ಸಿಬ್ಬಂದಿ, ವೈದ್ಯರು ಸಕಾಲದಲ್ಲಿ ಬಾಣಂತಿಗೆ ಚಿಕಿತ್ಸೆ ನೀಡದ ಪರಿಣಾಮ ರಂಜಿತಾ ಬಾಯಿ ಮೃತಪಟ್ಟಿದ್ದಾಳೆಂದು ದೂರಿದ್ದಾರೆ.
ಬಾಣಂತಿ ಸಾವಿಗೆ ಕಾರಣರಾದವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಕರು ಆಗ್ರಹಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ವೈದ್ಯಾಧಿಕಾರಿಗಳು ಸೂಕ್ತ ಕ್ರಮದ ಭರವಸೆ ನೀಡಿದ್ದರಿಂದ ಸಂಬಂಧಿಕರು ಪ್ರತಿಭಟನೆ ಕೈಬಿಟ್ಟರು.
ರಂಜಿತಾ ಬಾಯಿ ಕಡೂರು ತಾಲೂಕಿನ ವಡರೇಹಳ್ಳಿ ತಾಂಡ್ಯದ ನಿವಾಸಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ