ಉಗ್ರರ ದಾಳಿ ಖಂಡಿಸಿ ವಕೀಲರ ಪ್ರತಿಭಟನೆ
Team Udayavani, Feb 17, 2019, 11:03 AM IST
ಕಡೂರು: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಸಿಆರ್ ಪಿಎಫ್ ಯೋಧರಿದ್ದ ಬಸ್ ಮೇಲೆ ದಾಳಿ ನಡೆಸಿ 44 ಯೋಧರ ಸಾವಿಗೆ ಕಾರಣರಾದವರನ್ನು ಕೂಡಲೆ ಬಂಧಿಸಿ, ಉಗ್ರಗಾಮಿಗಳಿಗೆ ಒತ್ತೇಜನ ನೀಡುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಒತ್ತಾಯಿಸಿ ತಾಲೂಕು ವಕೀಲರ ಸಂಘವು ಕಲಾಪಗಳನ್ನು ಬಹಿಷ್ಕರಿಸಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆಎಲ್ವಿ ವೃತ್ತದಲ್ಲಿ ಶನಿವಾರ ಮಾನವ ಸರಪಳಿ ನಿರ್ಮಿಸಿ ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಸಲ್ಲಿಸಿದರು. ಪೈಶಾಚಿಕ ಕೃತ್ಯ ಖಂಡಿಸಿದ ವಕೀಲರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೈನಿಕರ ರಕ್ಷಣೆ ಮತ್ತು ಹೆಚ್ಚಿನ ಅಧಿಕಾರ ನೀಡಬೇಕೆಂದು ಅಗ್ರಹಿಸಿದರು. ವಕೀಲರ ಸಂಘದ ಅಧ್ಯಕ್ಷ ಡಿ.ಎನ್.ಪ್ರಕಾಶ ಮಾತನಾಡಿ, ಇದೊಂದು ಆತ್ಯಂತ ದುರದೃಷ್ಟಕರ ಘಟನೆ. ನೂರಾರು ಕೋಟಿ ಜನರ ರಕ್ಷಿಸುವ ಸೈನಿಕರು ತಮ್ಮ ಜೀವವನ್ನು ಒತ್ತೆ ಇಟ್ಟು ಕಾರ್ಯನಿರ್ವಹಿಸುತ್ತಾರೆ. ಪಾಕಿಸ್ತಾನವು ಪದೇ ಪದೇ ತಂಟೆಗೆ ಬರುತ್ತದೆ. ಇದಕ್ಕೆ ಇತಿಶ್ರೀ ಹಾಡಬೇಕಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಕೀಲರು ಸಂಗ್ರಹಿಸಿದ್ದ 50 ಸಾವಿರ ರೂ.ಗಳನ್ನುಮಂಡ್ಯ ಜಿಲ್ಲೆಯ ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಲಾಗುವುದು ಎಂದು ತಿಳಿಸಿದರು.
ವಕೀಲರು ಕೆಎಲ್ವಿ ವೃತ್ತದಿಂದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಶೇಷಪ್ಪ, ಕಾರ್ಯದರ್ಶಿ ದಾದ ಕಲಂದರ್, ಪಿ.ಬಿ. ಶ್ರೀನಿವಾಸ, ಎಂ, ಸೋಮಶೇಖರ್, ಹಿರಿಯ ವಕೀಲರಾದ ಅಣ್ಣಪ್ಪ, ಜಯಣ್ಣ, ಗಿರೀಶ್, ರಾಜು, ರಾಜಶೇಖರ್ ಮಹಿಳಾ ವಕೀಲರು, ಯುವ ವಕೀಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ