ಅಡುಗೆ ಅನಿಲ ಸಕಾಲಕ್ಕೆ ಪೂರೈಸಿ

•ಸಿಲಿಂಡರ್‌ಗಾಗಿ ಪ್ರತಿನಿತ್ಯ ಅಲೆದಾಡಿದರೂ ಏಜೆನ್ಸಿಯವರು ಗಮನ ಹರಿಸುತ್ತಿಲ್ಲ

Team Udayavani, May 22, 2019, 8:46 AM IST

cb-01..

ಚಿಕ್ಕಮಗಳೂರು: ಅಡುಗೆ ಅನಿಲ ವಿತರಣೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಗ್ರಾಹಕರು ಜಿಲ್ಲಾಧಿಕಾರಿ ನಿವಾಸದ ಎದುರು ಗ್ರಾಹಕರು ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರು: ಅಡುಗೆ ಅನಿಲವನ್ನು ಸರಿಯಾಗಿ ಪೂರೈಕೆ ಮಾಡದಿರುವುದನ್ನು ಖಂಡಿಸಿ ಮಂಗಳವಾರ ಬೆಳಗ್ಗೆ ಗ್ರಾಹಕರು ಅಡುಗೆ ಅನಿಲ ಸಿಲಿಂಡರ್‌ಗಳನ್ನು ಜಿಲ್ಲಾಧಿಕಾರಿ ನಿವಾಸದ ಎದುರು ಇಟ್ಟು ಪ್ರತಿಭಟನೆ ನಡೆಸಿದರು.

ಇಂಡೇನ್‌ ಅಡುಗೆ ಅನಿಲವನ್ನು ಸರಬರಾಜು ಮಾಡುವ ಶಿವಾನಿಲ್ ಗ್ಯಾಸ್‌ ಏಜೆನ್ಸಿಯವರು ಅಡುಗೆ ಅನಿಲವನ್ನು ಸಮರ್ಪಕವಾಗಿ ಪೂರೈಸುತ್ತಿಲ್ಲ ಎಂದು ದೂರಿದ ಗ್ರಾಹಕರು, ಮಂಗಳವಾರ ಬೆಳಗ್ಗೆ ಸುಮಾರು 7.30ರ ಸಮಯದಲ್ಲಿ ಜಿಲ್ಲಾಧಿಕಾರಿ ನಿವಾಸದ ಎದುರು ಆಗಮಿಸಿ ಸಿಲಿಂಡರ್‌ಗಳನ್ನು ನಿವಾಸದ ಮುಂದಿಟ್ಟು ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ನಿವಾಸದ ಭದ್ರತೆಗೆ ನಿಯೋಜಿಸಲ್ಪಟ್ಟಿರುವ ಪೊಲೀಸರು ಪ್ರತಿಭಟನಾಕಾರರಿಗೆ ಜಿಲ್ಲಾಧಿಕಾರಿಗಳ ಕಚೇರಿಯು ಆರಂಭವಾದ ನಂತರ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವಂತೆ ತಿಳಿಸಿದಾಗ, ಅದಕ್ಕೆ ಒಪ್ಪದ ಸಾರ್ವಜನಿಕರು, ಈಗಲೇ ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ಸ್ವೀಕರಿಸಬೇಕು. ಅವರು ಮನವಿ ಸ್ವೀಕರಿಸುವವರೆಗೆ ಇಲ್ಲಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದರು.

ನಂತರ ಮನೆಯಿಂದ ಹೊರಬಂದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಸಾರ್ವಜನಿಕರ ಮನವಿ ಆಲಿಸಿದರು. ಜಿಲ್ಲಾಧಿಕಾರಿಗಳಿಗೆ ತನ್ನ ನೋವನ್ನು ತೋಡಿಕೊಂಡ ಗ್ರಾಹಕರು, ಶಿವಾನಿಲ್ ಗ್ಯಾಸ್‌ ಏಜೆನ್ಸಿಯವರು ಅಡುಗೆ ಅನಿಲವನ್ನು ಸರಿಯಾಗಿ ವಿತರಿಸುತ್ತಿಲ್ಲ. ಕಳೆದ ಮೂರು ದಿನಗಳಿಂದ ಪ್ರತಿನಿತ್ಯ ಗ್ಯಾಸ್‌ ಏಜೆನ್ಸಿಯ ಕಚೇರಿ ಹಾಗೂ ಗೋದಾಮಿಗೆ ಅಲೆದಾಡುತ್ತಿದ್ದೇವೆ. ಅವರ ಗೋದಾಮು ನಗರದ ಹೊರ ವಲಯದಲ್ಲಿದೆ. ಅಲ್ಲಿಗೆ ಆಟೋದಲ್ಲಿ ಹೋಗಿ ಬರಬೇಕು. ಅದಕ್ಕೆ ಆಟೋದವರು 200 ರೂ. ಬಾಡಿಗೆ ಪಡೆಯುತ್ತಾರೆ. ಸತತವಾಗಿ ಮೂರ ದಿನಗಳಿಂದ ಹೋಗಿ ಬರುತ್ತಿದ್ದು, ಆಟೋಗೆ 600 ರೂ. ಬಾಡಿಗೆ ಕೊಟ್ಟಿದ್ದೇವೆ. ಇಷ್ಟಾದರೂ ಅಡುಗೆ ಅನಿಲ ಸಿಕ್ಕಿಲ್ಲ. ಅಡುಗೆ ಅನಿಲ ಇಲ್ಲದೆ ಮನೆಯಲ್ಲಿ ಅಡುಗೆ ಸಿದ್ಧಪಡಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌, ಸಮಸ್ಯೆ ಇರುವ ಬಗ್ಗೆ ತಮಗೆ ಈವರೆಗೂ ಯಾರೂ ದೂರು ನೀಡಿಲ್ಲ. ಒಂದು ದೂರವಾಣಿ ಕರೆ ಮಾಡಿದ್ದರೂ ಸಮಸ್ಯೆ ಪರಿಹರಿಸಬಹುದಾಗಿತ್ತು. ಈಗಲೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರನ್ನು ಗೋದಾಮಿನ ಬಳಿ ಕಳುಹಿಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿವಾನಿಲ್ ಗ್ಯಾಸ್‌ ಏಜೆನ್ಸಿಯ ಗೋದಾಮಿನ ಬಳಿ ತೆರಳಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಎ.ಎಸ್‌.ಮಹೇಶ್ವರಪ್ಪ ಏಜೆನ್ಸಿಯವರಿಂದ ಅಡುಗೆ ಅನಿಲ ವಿತರಿಸಲು ಆಗಿರುವ ತೊಂದರೆ ಏನೆಂದು ವಿಚಾರಿಸಿದರು. ಏಜೆನ್ಸಿಯವರು ಕಳೆದ 2 ದಿನಗಳಿಂದ ಅಡುಗೆ ಅನಿಲ ಸಿಲಿಂಡರುಗಳು ಬಂದಿಲ್ಲ. ಇಂದು 2 ಲೋಡ್‌ ಸಿಲಿಂಡರ್‌ ಬರುತ್ತಿದ್ದು, ಇಂದು ವಿತರಿಸುವುದಾಗಿ ತಿಳಿಸಿದರು.

ಗೋದಾಮಿನ ಬಳಿ ಇದ್ದ ಗ್ರಾಹಕರುಗಳ ಹೆಸರುಗಳನ್ನು ಪಡೆದುಕೊಂಡ ಅಧಿಕಾರಿ, ಸಿಬ್ಬಂದಿಗಳು ಈ ಗ್ರಾಹಕರುಗಳ ಮನೆಗೆ ಇಂದೇ ಅಡುಗೆ ಅನಿಲವನ್ನು ವಿತರಿಸುವಂತೆ ಸೂಚನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಡಿ. ಎ.ಎಸ್‌.ಮಹೇಶ್ವರಪ್ಪ, ಶಿವಾನಿಲ್ ಗ್ಯಾಸ್‌ ಏಜೆನ್ಸಿಯವರ ಬಳಿ ಇರುವ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಇವರಿಗೆ ಸರಬರಾಜಾಗುತ್ತಿರುವ ಅಡುಗೆ ಅನಿಲ್ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಅಡುಗೆ ಅನಿಲ ವಿತರಣೆಯಲ್ಲಿ ಲೋಪವಾಗಿದೆ. ಇಂದು ಎಲ್ಲ ಮಾಹಿತಿಗಳನ್ನು ಪಡೆದುಕೊಳ್ಳಲಾಗಿದೆ. ಇವರಿಗೆ ಗ್ರಾಹಕರ ಸಂಖ್ಯೆ ಇರುವ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು. ಅವರು ಆದೇಶ ನೀಡಿದರೆ ಶಿವಾನಿಲ್ ಗ್ಯಾಸ್‌ ಏಜೆನ್ಸಿಯ ಕೆಲವು ಗ್ರಾಹಕರನ್ನು ಬೇರೆ ಏಜೆನ್ಸಿಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಗ್ರಾಹಕರಾದ ಅನಂತರಾಮಯ್ಯ, ಶಿವಶಂಕರ್‌, ಪುಟ್ಟರಾಜು, ಮಂಜುಳ, ಶಂಕರ್‌ ನಾಯಕ್‌, ಮಂಜುನಾತ್‌, ಮಾಸ್ತೇಗೌಡ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.