![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
ರೈತರಿಗೆ ಅಗತ್ಯ ಯಂತ್ರ ನೀಡಿ: ರಾಜೇಗೌಡ
Team Udayavani, Sep 15, 2020, 5:02 PM IST
![ರೈತರಿಗೆ ಅಗತ್ಯ ಯಂತ್ರ ನೀಡಿ: ರಾಜೇಗೌಡ](https://www.udayavani.com/wp-content/uploads/2020/09/CM-TDY-1-10-620x372.jpg)
ಎನ್. ಆರ್. ಪುರ: ಕೃಷಿ ಯಂತ್ರಧಾರೆ ಬಾಡಿಗೆ ಆಧಾರಿತ ಸೇವಾ ಕೇಂದ್ರದಲ್ಲಿ ರೈತರಿಗೆ ಅವಶ್ಯಕವಾಗಿರುವ ಯಂತ್ರಗಳನ್ನು ಬಾಡಿಗೆಗೆ ನೀಡಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ಇಲ್ಲಿನ ಕೃಷಿ ಇಲಾಖೆಯಲ್ಲಿ ಸೋಮವಾರ ನಡೆದ ಕೃಷಿ ಯಂತ್ರಧಾರೆ ಬಾಡಿಗೆ ಆಧಾರಿತ ಸೇವಾ ಕೇಂದ್ರ ಆರಂಭಿಸುವ ಬಗ್ಗೆ ನಡೆದ ಪೂರ್ವಭಾವಿಸಭೆಯಲ್ಲಿ ಅವರು ಮಾತನಾಡಿದರು.ಪ್ರತಿ ದಿನ ಬಾಡಿಗೆ ನೀಡುವಯಂತ್ರಗಳ ಬಗ್ಗೆ ದಾಖಲೆ ನಿರ್ವಹಿಸಬೇಕು. ಕೃಷಿ ಇಲಾಖೆಯವರು, ಕೃಷಿಕ ಸಮಾಜದವರು ಯಂತ್ರಗಳನ್ನುಬಾಡಿಗೆ ಪಡೆದವರು ಸಮರ್ಪಕವಾಗಿ ಬಳಸುತ್ತಿರುವ ಬಗ್ಗೆ ಸ್ಥಳ ಪರಿಶೀಲನೆನಡೆಸಬೇಕು. ಅಡಕೆ ಸಂಸ್ಕರಣೆಗೆ ಸಹಾಯಕವಾಗುವಂತಹ ಎಲ್ಲಾರೀತಿಯ ಯಂತ್ರಗಳು ರೈತರಿಗೆ ಬಾಡಿಗೆಗೆ ದೊರೆಯುವಂತೆ ನೋಡಿಕೊಳ್ಳಬೇಕು.ಬಾಡಿಗೆಯನ್ನು ಸ್ಥಳೀಯವಾಗಿಪಡೆಯುವ ಬಾಡಿಗೆ ದರಕ್ಕಿಂತ ಕಡಿಮೆ ಬಾಡಿಗೆ ಪಡೆಯಬೇಕೆಂದು ಸಲಹೆ ನೀಡಿದರು.
ತಾಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಲ್. ಶೆಟ್ಟಿ ಮಾತನಾಡಿ, ಬಾಡಿಗೆ ಕೇಂದ್ರದಲ್ಲಿ ಐಎಸ್ ಐ ಮುದ್ರೆ ಇರುವ ಯಂತ್ರಗಳು ಖರೀದಿಸಲು ಸೂಚಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಬಾಡಿಗೆದೊರೆಯುವಂತೆ ಮಾಡಬೇಕು.ಪಟ್ಟಣದ ಹೃದಯ ಭಾಗದಲ್ಲಿ ಸೇವಾ ಕೇಂದ್ರ ಆರಂಭಿಸಬೇಕೆಂದರು.
ಸಹಾಯಕ ಕೃಷಿ ಅಧಿಕಾರಿ ಸುಭಾಷ್ ಮಾತನಾಡಿ, ಜಿಲ್ಲೆಗೆ 2019- 20ನೇ ಸಾಲಿನಲ್ಲಿ 16 ಕೃಷಿ ಯಂತ್ರಧಾರೆ ಸೇವಾ ಕೇಂದ್ರ ಮಂಜೂರಾಗಿದ್ದು ಬಾಳೆಹೊನ್ನೂರು ಭಾಗದಲ್ಲಿ ಈ ಹಿಂದೆಆರಂಭಿಸಲಾಗಿದೆ. ಪ್ರಸ್ತುತ ಕಸಬಾ ಹೋಬಳಿ ವ್ಯಾಪ್ತಿಗೆ ಮಂಜೂರಾಗಿದೆ. ಸರ್ಕಾರ ಶೇಕಡ 75 ಸಹಾಯಧನ ನೀಡಲಿದೆ. ಉಳಿದ ಶೇಕಡ 25ರಷ್ಟು ಅನುದಾನ ಸಂಬಂಧಿ ಸಿದ ಏಜೆಸ್ಸಿಯವರು ಭರಿಸಬೇಕು ಎಂದರು.
ಕೃಷಿಕ ಸಮಾಜದ ಅಧ್ಯಕ್ಷ ವಿ. ನಿಲೇಶ್ ಮಾತನಾಡಿ, ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಕೃಷಿ ಯಂತ್ರಧಾರೆ ಸೇವಾ ಕೇಂದ್ರ ಆರಂಭಿಸುವ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ ಮಂಜೂರಾಗಿದ್ದುಇದನ್ನು ಪಟ್ಟಣದ ವ್ಯಾಪ್ತಿಯಲ್ಲಿ ಆರಂಭಿಸಬೇಕೆಂದರು. ಸಮೃದ್ಧಿ ಕೃಷಿ ಸ್ವಸಹಾಯ ಸಂಘದರಾಜೇಂದ್ರಕುಮಾರ್ ಮಾತನಾಡಿ, ತಾಲೂಕು ಕೇಂದ್ರದಲ್ಲಿ ಕೃಷಿ ಇಲಾಖೆಗೆ ಹೊಂದಿಕೊಂಡತೆ ಮಣ್ಣು ಪರೀಕ್ಷಾ ಕೇಂದ್ರ ಸ್ಥಾಪಿಸಲು ಕ್ರಮಕೈಗೊಳ್ಳಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ತಾಪಂ ಅಧ್ಯಕ್ಷೆ ಪ್ರೇಮಾ, ಜಿಲ್ಲಾ ಕೃಷಿಕ ಸಮಾಜದ ನಿರ್ದೇಶಕ ಜಾನಕೀರಾಂ.ತಾಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಸುಬ್ಬಣ್ಣ. ನಿರ್ದೇಶಕ ಬಸವರಾಜಪ್ಪ, ರೈತಮುಖಂಡ ವಿನಾಯಕ್ ಮಾಳೂರು ದಿಣ್ಣೆ , ಗಣೇಶ್ ಇದ್ದರು
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![Chikkamagaluru; ಮದಗದ ಕೆರೆ ಬಳಿಕ ಕೋಡಿ ಬಿದ್ದ ಅಯ್ಯನ ಕೆರೆ](https://www.udayavani.com/wp-content/uploads/2024/07/ayyana-kere-150x83.jpg)
Chikkamagaluru; ಮದಗದ ಕೆರೆ ಬಳಿಕ ಕೋಡಿ ಬಿದ್ದ ಅಯ್ಯನ ಕೆರೆ
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.