ರಾಗಿ ಖರೀದಿ ಹಣ ಶೀಘ್ರ ವಿಲೇವಾರಿ: ನೀಲಕಂಠಪ್ಪ
Team Udayavani, Jul 10, 2021, 3:20 PM IST
ಕಡೂರು: ತಾಲೂಕಿನ ರೈತರು ರಾಗಿ ಖರೀದಿ ಕೇಂದ್ರಕ್ಕೆ ನೀಡಿರುವ ರಾಗಿಯ ಹಣ ಈಗಾಗಲೇ ಸಾವಿರಾರು ರೈತರ ಖಾತೆಗೆ ಬಂದಿದೆ. ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಉಳಿದ ಹಣ ರೈತರಿಗೆ ಸಿಗುವುದು ತಡವಾಗಿದ್ದು ಶೀಘ್ರವೇ ರೈತರ ಖಾತೆಗೆ ಹಣ ವಿಲೇವಾರಿಯಾಗಲಿದೆ ಎಂದು ಬಿಜೆಪಿ ಮುಖಂಡ ಜಿಗಣೆಹಳ್ಳಿ ನೀಲಕಂಠಪ್ಪ ಹೇಳಿದರು.
ಪಟ್ಟಣದ ಸುರುಚಿ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 9 ಜಿಲ್ಲೆಗಳಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ. ಅದೇ ರೀತಿ ಶಾಸಕ ಬೆಳ್ಳಿಪ್ರಕಾಶ್ಅವರ ಒತ್ತಾಯದೊಂದಿಗೆ ಕಡೂರು ಎಪಿಎಂಸಿ ಆವರಣದಲ್ಲಿ ರಾಗಿ ಖರೀದಿ ಕೇಂದ್ರ ತೆರೆಯಲಾಗಿತ್ತು. ಕಡೂರು ರಾಗಿ ಖರೀದಿ ಕೇಂದ್ರದಲ್ಲಿ ಇದುವರೆಗೂ 18,619 ರೈತರಿಂದ 56 ಲಕ್ಷ ಕ್ವಿಂಟಾಲ್ ರಾಗಿ ಖರೀದಿಸಲಾಗಿದೆ. ರೈತರಿಗೆ ಸುಮಾರು 11 ಕೋಟಿ 79 ಲಕ್ಷ ಹಣವನ್ನು ಮಾರುಕಟ್ಟೆ ಪೆಡರೇಷನ್ ನೀಡಬೇಕಾಗಿದ್ದು ಈಗಾಗಲೇ ಮಾರ್ಚ್ ಅಂತ್ಯಕ್ಕೆ 5,849 ರೈತರ ಖಾತೆಗೆ 63 ಕೋಟಿ ಹಣ ಸಂದಾಯವಾಗಿದೆ ಎಂದರು.
ಕೊರೊನಾ ಮಹಾಮಾರಿ ಮತ್ತು ಮಾರುಕಟ್ಟೆಯ ಸ್ಥಳೀಯ ಲೆಕ್ಕ ನೋಡಿಕೊಳ್ಳುತ್ತಿದ್ದ ವ್ಯವಸ್ಥಾಪಕ ಕೊರೊನಾದಿಂದ ಮೃತಪಟ್ಟಿದ್ದರ ಪರಿಣಾಮ ಉಳಿದ ರೈತರ ಖಾತೆಗೆ ಹಣ ಬರುವುದು ತಡವಾಗಿದ್ದು ಇದನ್ನು ಅರಿತ ಶಾಸಕ ಹಾಗೂ ರಾಜ್ಯ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷ ಬೆಳ್ಳಿಪ್ರಕಾಶ್ ಅವರು ರಾಜ್ಯಸಹಕಾರ ಮಾರುಕಟ್ಟೆಯ ಫೆಡರೇಷನ್ ಅಧ್ಯಕ್ಷ ರಾಜೇಂದ್ರ ಕುಮಾರ್ ಹಾಗೂ ರಾಜ್ಯ ಉಪ ಸಂಪುಟ ಸಭೆಯಲ್ಲಿ ಬಾಕಿ ಹಣ ನೀಡಲು ಮಾಡಿದ ಮನವಿಗೆ ಸ್ಪಂದಿಸಿದ ಸರಕಾರ ಮತ್ತು ಫೆಡರೇಷನ್ ಅಧ್ಯಕ್ಷರು ಶೀಘ್ರವೇ ಬಾಕಿ ಇರುವ 12,770 ರೈತರಿಗೆ 125 ಕೋಟಿ ಹಣವನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದು ಅತಿ ಶೀಘ್ರವೇ ಹಣ ರೈತರ ಖಾತೆಗೆ ಜಮಾ ಆಗಲಿದೆ ಎಂದರು.
ಅನೇಕರು ಜಿಲ್ಲಾಧಿಕಾರಿಗಳಿಗೆ ರಾಜ್ಯ ಮಾರುಕಟ್ಟೆ ಫೆಡರೇಷನ್ಗೆ ದೂರು ನೀಡಿ ಹಣ ಬಿಡುಗಡೆ ಮಾಡಲು ಹೋರಾಟ ಮಾಡುತ್ತಿದ್ದೇವೆ ಎಂಬ ಪ್ರಚಾರ ಪಡೆಯುತ್ತಿದ್ದಾರೆ. ಶಾಸಕ ಬೆಳ್ಳಿಪ್ರಕಾಶ್ ಯಾವುದೇ ಪ್ರಚಾರವಿಲ್ಲದೇ ಹಣಬಿಡುಗಡೆಗೆ ತಮ್ಮದೇ ಆದ ರೀತಿಯಲ್ಲಿ ರೈತರಿಗೆ ನ್ಯಾಯ ನೀಡಲು ಮುಂದಾಗಿರುವುದನ್ನು ತಾಲೂಕಿನ ರೈತರ ಪರವಾಗಿ ಶ್ಲಾಘಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ