ಕೃತಿ ನಾಟಕ ರೂಪಕ್ಕೆ ತರುವುದು ಸವಾಲು


Team Udayavani, Apr 7, 2021, 8:06 PM IST

ghghghghghvhg

ಕೊಟ್ಟಿಗೆಹಾರ : ಮೂಲಕೃತಿಗೆ ಚ್ಯುತಿ ಬಾರದಂತೆ ಕೃತಿಯೊಂದನ್ನು ನಾಟಕ ರೂಪಕ್ಕೆ ತಂದು ಅಭಿನಯಿಸುವುದು ಸವಾಲಿನ ಕೆಲಸವಾಗಿದೆ ಎಂದು ಲೇಖಕಿ ರಾಜೇಶ್ವರಿ ತೇಜಸ್ವಿ ಹೇಳಿದರು.

ಸೋಮವಾರ ರಾತ್ರಿ ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನದಲ್ಲಿ ನಡೆದ ನುಡಿನಮನ ಹಾಗೂ ಎಂಕ್ಟನ ಪುಂಗಿ ನಾಟಕ ಪ್ರದರ್ಶನದಲ್ಲಿ ಅವರು ಮಾತನಾಡಿದರು. ತೇಜಸ್ವಿಯವರ ಕಥೆಯನ್ನು ಕಲಾವಿದರು ನಾಟಕದಲ್ಲಿ ನಟಿಸಿ ಎಲ್ಲಿಯೂ ಕಥೆಗೆ ಚ್ಯುತಿ ಬಾರದಂತೆ ನಟಿಸಿರುವುದು ಶ್ಲಾಘನೀಯ. ನಿರ್ದೇಶಕರು ಎಲ್ಲಿಯೂ ಕಥೆಯನ್ನು ತಿರುವುಗೊಳಿಸದೆ ನಾಟಕವನ್ನು ದೃಶ್ಯರೂಪಕದಲ್ಲಿ ಕಟ್ಟಿಕೊಟ್ಟಿರುವುದು ಅರ್ಥಪೂರ್ಣ ಎಂದರು.

ಸಾಹಿತಿ ಡಾ| ಪ್ರದೀಪ್‌ ಕೆಂಜಿಗೆ ಮಾತನಾಡಿ, ಎಂಕ್ಟನ ಪುಂಗಿ ಕತೆಯ ಮೂಲಕ ತೇಜಸ್ವಿಯವರು ನಿರ್ಲಕ್ಷ್ಯಕೊಳ್ಳಗಾದ ಭಾರತದ ಸಮುದಾಯದ, ಮುಖ್ಯವಾಹಿನಿಯಲ್ಲಿರದ ಜನಾಂಗದ ಅಭಿವ್ಯಕ್ತಿಯಾಗಿ ಈ ಕತೆಯನ್ನು ಕಟ್ಟಿಕೊಟ್ಟಿದ್ದಾರೆ. ಜೊತೆಗೆ ಹಾವು ಹಿಡಿಯುವ ಕಲೆಯ ಹಿಂದಿನ ಜ್ಞಾನವನ್ನು ಕಲಾತ್ಮಕವಾಗಿ ಕಟ್ಟಿಕೊಟ್ಟಿದ್ದಾರೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಸಿ.ರಮೇಶ್‌ ಮಾತನಾಡಿ, ತೇಜಸ್ವಿಯವರ ಆಶಯದಂತೆ ತೇಜಸ್ವಿ ಪ್ರತಿಷ್ಠಾನದ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು ತೇಜಸ್ವಿ ಓದು, ಫೋಟೋಗ್ರಫಿ ಶಿಬಿರ ಮುಂತಾದ ಕಾರ್ಯಕ್ರಮಗಳ ಮೂಲಕ ಪ್ರತಿಷ್ಠಾನದಲ್ಲಿ ನಿರಂತರ ಚಟುವಟಿಕೆಗಳ ತಾಣವಾಗಿದೆ ಎಂದರು.

ಎಂಕ್ಟನ ಪುಂಗಿ ನಾಟಕ ನಿರ್ದೇಶಕ ಎಸ್‌. ಪ್ರವೀಣ್‌ ಮಾತನಾಡಿ, ಮೂಲಕಥೆಗೆ ಚ್ಯುತಿ ಬಾರದಂತೆ ಸಿಕ್ಕಿದ ನಾಟಕವನ್ನು ರೂಪಿಸಲಾಗಿದ್ದು ದೃಶ್ಯ ಶಬ್ದ ಹಾಗೂ ಅಭಿನಯದ ವಿವಿಧ ಸಾಧ್ಯತೆಗಳನ್ನು ಬಳಸಿಕೊಂಡು ನಾಟಕವನ್ನು ಪರಿಣಾಮಕಾರಿ ಪ್ರದರ್ಶಿಸುವ ಪ್ರಯತ್ನ ಇದಾಗಿದೆ ಎಂದರು.

ಕೊಪ್ಪದ ರಂಗಬಿಂಬ ತಂಡದ ವತಿಯಿಂದ ತೇಜಸ್ವಿ ಕಥೆಯಾಧಾರಿತ ನಾಟಕ “ಎಂಕ್ಟನ ಪುಂಗಿ’ ಪ್ರದರ್ಶಿಸಲಾಯಿತು. ಚಿತ್ರ ಕಲಾವಿದರಾದ ಸುರೇಶ್‌ಚಂದ್ರ ದತ್ತ, ಬಾಪು ದಿನೇಶ್‌, ಪುಸ್ತಕ ಪ್ರಕಾಶನದ ರಾ‚ಘವೇಂದ್ರ, ಕ್ಷೇತ್ರ ಶಿಕ್ಷಣಾಧಿ ಕಾರಿ ಹೇಮಂತ್‌ ರಾಜ್‌, ಕಲಾವಿದರಾದ ಜಿನೇಶ್‌ ಇರ್ವತ್ತೂರು, ನಿರಂಜನ್‌, ಎಚ್‌.ಎಸ್‌. ಜಗದೀಶ್‌, ಎಚ್‌.ಎಂ. ಸುಬ್ಬಣ್ಣ, ಶಾಂತಾರಾಮ್‌, ರಾಘವೇಂದ್ರ ಹರಿಹರಪುರ, ರಮೇಶ್‌, ಬಿ. ಅಶೋಕ್‌, ಶ್ರೀಪಾದ್‌ ತೀರ್ಥಹಳ್ಳಿ, ನಾಗರಾಜ್‌ ಕೂವೆ, ಆಕರ್ಷ್‌, ಸತೀಶ್‌, ವಿಠಲ, ಪೂರ್ಣೇಶ್‌ ಮತ್ತಾವರ, ಮಗ್ಗಲಮಕ್ಕಿ ಗಣೇಶ್‌, ಎಸ್‌. ಪ್ರವೀಣ್‌, ನಾಗರಾಜ್‌, ಸಂಜಯ್‌ ಗೌಡ, ಎ.ಆರ್‌.ಅಭಿಲಾಷ್‌, ರೇಖಾ ಪೂರ್ಣೇಶ್‌, ಅನಿಲ್‌ ಮೊಂತೆರೊ, ನವೀನ್‌ ಆನೆದಿಬ್ಬ, ನಾಜೀಂ, ವಿಜಯಲಕ್ಷ್ಮಿ ಇದ್ದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.