ಕಿಗ್ಗಾ ಋಷ್ಯ ಶೃಂಗಸ್ವಾಮಿ ರಥೋತ್ಸವ
Team Udayavani, Mar 23, 2021, 6:17 PM IST
ಶೃಂಗೇರಿ: ಮಳೆಯ ದೇವರೆಂದು ಕರೆಯಲ್ಪಡುವ ಕಿಗ್ಗಾದ ಶ್ರೀ ಶಾಂತಾ ಸಮೇತ ಋಷ್ಯಶೃಂಗಸ್ವಾಮಿಯ ರಥೋತ್ಸವ ಸೋಮವಾರ ಶ್ರದ್ಧಾಭಕ್ತಿಯಿಂದ ನಡೆಯಿತು. 2020 ನೇ ಸಾಲಿನ ರಥೋತ್ಸವ ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿದ್ದು, ಈ ರಥೋತ್ಸವ ಈಗ ನಡೆದಿದೆ. ಈ ಸಾಲಿನ ರಥೋತ್ಸವವು ಪ್ರತಿ ವರ್ಷದಂತೆ ಏಪ್ರಿಲ್ನಲ್ಲಿ ನಡೆಯಲಿದೆ.
ರಥೋತ್ಸವದ ಅಂಗವಾಗಿ ರಥಬೀದಿಯನ್ನು ತಳಿರು ತೋರಣದಿಂದ ಅಲಂಕರಿಸಲಾಗಿತ್ತು. ರಥ ಸಾಗುವ ದಾರಿಯನ್ನು ಸ್ವತ್ಛಗೊಳಿಸಿ ರಂಗೋಲಿ ಹಾಕಲಾಗಿತ್ತು. ರಥದ ಎದುರು ವಾದ್ಯಮೇಳ, ಛತ್ರಿ, ಚಾಮರದೊಂದಿಗೆ ರಥವನ್ನು ಎಳೆಯಲಾಯಿತು. ರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ಬೆಳಗ್ಗೆ ಸ್ವಾಮಿಯ ಸನ್ನಿಧಿಯಲ್ಲಿ ನಡೆಯಿತು.
ರಥೋತ್ಸವದ ಪೂರ್ವಭಾವಿಯಾಗಿ ಉತ್ಸವ ಮೂರ್ತಿಯನ್ನು ವಾದ್ಯಮೇಳದೊಂದಿಗೆ ದೇಗುಲದಿಂದ ತಂದು ರಥಕ್ಕೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಅಲಂಕೃತ ರಥದಲ್ಲಿ ಪ್ರತಿಷ್ಠಾಪಿಸಲಾಯಿತು.ಪುರೋಹಿತರ ವೇದಘೋಷ ನಡೆಯಿತು. ತಹಶೀಲ್ದಾರ್ ಅಂಬುಜಾ ರಥದ ಗಾಲಿಗೆ ಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು. ಕಿಗ್ಗಾ ಹಾಗೂ ಕಸಬಾ ಹೋಬಳಿಯ ರೈತರು ದೇವಸ್ಥಾನಕ್ಕೆ ತೆರಳಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ