ಸುಪ್ರೀಂ ಆದೇಶ ಮರುಪರಿಶೀಲಿಸಿ

•ಆಟೋ ಸಂಘ, ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರ‌ ಪ್ರತಿಭಟನೆ

Team Udayavani, Jul 23, 2019, 11:21 AM IST

cm-tdy-1

ಬಾಳೆಹೊನ್ನೂರು: ಸುಪ್ರೀಂಕೋರ್ಟ್‌ ಆದೇಶ ಪರಿಶೀಲಿಸುವಂತೆ ಒತ್ತಾಯಿಸಿ ಆಟೋ ಸಂಘ ಹಾಗೂ ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರು ನಗರದಲ್ಲಿ ಭಾರೀ ಪ್ರತಿಭಟನೆ ನಡೆಸಿದರು.

ಬಾಳೆಹೊನ್ನೂರು: ಆಟೋದಲ್ಲಿ ಮೂರಕ್ಕಿಂತ ಹೆಚ್ಚು ಜನರ ಪ್ರಯಾಣ ನಿಷೇಧಿಸಿ ಹಾಗೂ ಸರಕು ವಾಹನದಲ್ಲಿ ಜನರನ್ನು ಕರೆದೊಯ್ಯುವುದನ್ನು ನಿರ್ಬಂಧಿಸಿರುವ ಸುಪ್ರೀಂಕೋರ್ಟ್‌, ತನ್ನ ಆದೇಶವನ್ನು ಮರು ಪರಿಶೀಲಿಸಬೇಕೆಂದು ಒತ್ತಾಯಿಸಿ ಆಟೋ ಸಂಘ ಹಾಗೂ ಗೂಡ್ಸ್‌, ಪಿಕಪ್‌ ವಾಹನಗಳ ಚಾಲಕರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಬಾಳೆಹೊನ್ನೂರಿನ ಆಟೋ ಸಂಘ, ಕೂಲಿ ಕಾರ್ಮಿಕರ ಒಕ್ಕೂಟ, ಗೂಡ್ಸ್‌, ಪಿಕಪ್‌ ವಾಹನ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ಸೋಮವಾರ ಪಟ್ಟಣದ ಶ್ರೀ ಮಾರ್ಕಾಂಡೇಶ್ವರ ದೇವಸ್ಥಾನದ ಆವರಣದಿಂದ ರೋಟರಿ ವೃತ್ತದ ವರೆಗೆ ಹಾಗೂ ರೋಟರಿ ವೃತ್ತದಿಂದ ಜೆಸಿ ವೃತ್ತದ ವರೆಗೆ ಬೃಹತ್‌ ಮೆರವಣಿಗೆ ನಡೆಸಿದರು. ನಂತರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಇದಾದ ನಂತರ ನಾಡಕಚೇರಿ ಅಧಿಕಾರಿ ಹಾಗೂ ಪೊಲೀಸ್‌ ಅಧಿಕಾರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಟಿ.ಎಂ.ಉಮೇಶ್‌ ಕಲ್ಮಕ್ಕಿ ಮಾತನಾಡಿ, ಕೆಲವು ದಿನಗಳ ಹಿಂದೆ ಸುಪ್ರೀಂಕೋರ್ಟ್‌ ಆಟೋದಲ್ಲಿ ಮೂರು ಜನ ಹಾಗೂ ಸರಕು ಸಾಗಣೆ ವಾಹನದಲ್ಲಿ ಯಾರೂ ಪ್ರಯಾಣಿಸದಂತೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ, ವಾಹನಗಳನ್ನು ತಡೆದು ಅಧಿಕ ದಂಡ ವಸೂಲಿ ಮಾಡಲಾಗುತ್ತಿದೆ. ಅಲ್ಲದೇ, ವಾಹನಗಳನ್ನು ಜಪ್ತಿ ಮಾಡುವುದರಿಂದ ಬಹಳಷ್ಟು ತೊಂದರೆಯುಂಟಾಗಿದೆ. ಇದರಿಂದಾಗಿ ಕೂಲಿ ಕಾರ್ಮಿಕರಿಗೆ ಹಾಗೂ ಎಲ್ಲಾ ವರ್ಗದ ಜನರಿಗೆ ಸಮಸ್ಯೆಯುಂಟಾಗುತ್ತಿದೆ. ಕೂಲಿ ಕಾರ್ಮಿಕರಿಗೆ ಹಾಗೂ ರೈತರು ಪಿಕಪ್‌ ಹಾಗೂ ಆಟೋ, ಗೂಡ್ಸ್‌ ವಾಹನಗಳನ್ನು ಬಳಸುವುದು ಅನಿವಾರ್ಯವಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.

ಆಟೋ ಸಂಘದ ಅಧ್ಯಕ್ಷ ಸಂದೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ರೈತರು ಹಾಗೂ ಕೂಲಿ ಕಾರ್ಮಿಕರು ಮತ್ತು ಗ್ರಾಮಸ್ಥರು ಮುಖ್ಯ ರಸ್ತೆಗೆ ತಲುಪಲು ಕನಿಷ್ಠ ಪಕ್ಷ 10ರಿಂದ 12ಕಿ.ಮೀ. ದೂರ ನಡೆದುಕೊಂಡೇ ಬರುವ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ಆಟೋ ಹಾಗೂ ಸರಕು ಸಾಗಣೆ ವಾಹನಗಳಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆಯಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನಪ್ರತಿನಿಧಿಗಳು ವಿಧಾನಸಭೆ ಹಾಗೂ ಸಂಸತ್ತಿನಲ್ಲಿ ಈ ಕಾನೂನಿನ ಬಗ್ಗೆ ತಿದ್ದುಪಡಿ ತಂದು ಸುಪ್ರೀಂಕೋರ್ಟ್‌ ಮನವರಿಕೆ ಮಾಡಿಕೊಡಬೇಕು. ರೆಸಾರ್ಟ್‌ ರಾಜಕಾರಣ ಬಿಟ್ಟು ಉದ್ಭವಿಸಿರುವ ಸಮಸ್ಯೆ ಬಗೆಹರಿಸುವಲ್ಲಿ ರಾಜಕಾರಣಿಗಳು ಮುಂದಾಗಬೇಕೆಂದು ಕರೆ ನೀಡಿದರು.

ಬಿ.ಕಣಬೂರು ಗ್ರಾಪಂ ಅಧ್ಯಕ್ಷ ಮಹಮ್ಮದ್‌ ಹನೀಫ್‌, ತಾಲೂಕು ಬಿಜೆಪಿ ಅಧ್ಯಕ್ಷ ವೆನಿಲಾ ಭಾಸ್ಕರ್‌, ಗ್ರಾಪಂ ಸದಸ್ಯ ರವಿಚಂದ್ರ, ತಾಪಂ ಸದಸ್ಯ ಕಲ್ಮಕ್ಕಿ ನಾಗೇಶ್‌, ಖಾಂಡ್ಯ ಹೋಬಳಿ ಬಿಜೆಪಿ ಅಧ್ಯಕ್ಷ ಹುಯಿಗೆರೆ ರವಿ, ಚಂದ್ರಶೇಖರ್‌, ಹೋಬಳಿ ಅಧ್ಯಕ್ಷ ಕೆ.ಕೆ.ವೆಂಕಟೇಶ್‌ ಮಾತನಾಡಿದರು.ತಾಪಂ ಉಪಾಧ್ಯಕ್ಷ ಹೊಳೆಬಾಗಿಲು ಮಂಜು, ಗ್ರಾಪಂ ಸದಸ್ಯೆ ಸೆಲ್ಫಿ, ಜಾನ್‌ ಡಿಸೋಜ, ಅರಳೀ ಕೊಪ್ಪ ಜಗದೀಶ್‌, ಅಟೋ ಚಾಲಕರ ಮತ್ತುಮಾಲಿಕರ ಸಂಘದ ಅನಿಲ್, ಮಹೇಶ್‌ ಶೆಟ್ಟಿ, ಗೂಡ್ಸ್‌, ಪಿಕಪ್‌, ಆಟೋ ಚಾಲಕರ ಮತ್ತು ಮಾಲಿಕರ ಸಂಘ, ವಿವಿಧ ಸಂಘಗಳ ಸದಸ್ಯರು, ಕೂಲಿ ಕಾರ್ಮಿಕರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.