ಹ್ಯಾಕರ್ಗಳು ದೋಚಿದ್ದ ಹಣ ಮರಳಿ ಖಾತೆಗೆ
Team Udayavani, Oct 13, 2017, 7:15 AM IST
ಚಿಕ್ಕಮಗಳೂರು: ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮದರ್ಶಿ ಭೀಮೇಶ್ವರ ಜೋಶಿ ಅವರ ಎಟಿಎಂ ಕಾರ್ಡ್ ದುರುಪಯೋಗಪಡಿಸಿಕೊಂಡ ಹ್ಯಾಕರ್ಗಳು ದೋಚಿದ್ದ ಲಕ್ಷಾಂತರ ರೂ.ಗಳನ್ನು ಕರ್ನಾಟಕ ಬ್ಯಾಂಕ್ ಜೋಶಿ ಅವರ ಖಾತೆಗೆ ಹಣ ಜಮಾ ಮಾಡಿದೆ.
ಕಳೆದ ತಿಂಗಳು ಡಾ| ಭೀಮೇಶ್ವರ ಜೋಶಿ ಯೂರೋಪ್ ಪ್ರವಾಸಕ್ಕೆ ತೆರಳಿದ್ದಾಗ ಅಲ್ಲಿ ಶಾಪಿಂಗ್ ಮಾಡಿ ತಮ್ಮ ಎಟಿಎಂ ಕಾರ್ಡ್ ಬಳಸಿದ್ದರು. ಆ ನಂತರ ಹಲವು ಬಾರಿ ಅವರ ಮೊಬೈಲ್ಗೆ ಖಾತೆಯಿಂದ ಹಣ ತೆಗೆದಿರುವ ಸಂದೇಶ ಬಂದಿತ್ತು. ಹ್ಯಾಕರ್ಗಳು ಒಟ್ಟು 20,89,558 ರೂ.ಗಳನ್ನು ಜೋಶಿ ಖಾತೆಯಿಂದ ಲಪಟಾಯಿಸಿದ್ದರು.
ಈ ಕುರಿತು ಜೋಶಿ ಸೆ.15 ರಂದು ನಗರಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಘಟನೆ ನಂತರ ಖಾತೆಯ ವಿಮಾ ಮತ್ತು ಆರ್ಬಿಐನ ರೆಗ್ಯುಲೇಷನ್ ಆಕ್ಟ್ ಹಾಗೂ ಬೋರ್ಡ್ ಆಫ್ ಡೈರೆಕ್ಟರ್ ಸಭೆಯಲ್ಲಿ ಜೋಶಿ ಖಾತೆಗೆ ಹಣ ಜಮಾ ಮಾಡಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದರ ಅನ್ವಯ ಅ.11ರಂದು ಕರ್ನಾಟಕ ಬ್ಯಾಂಕ್ ಜೋಶಿ ಅವರ ಖಾತೆಗೆ 20,89,558 ರೂ. ಜಮಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ