ಪೂರ್ವಜನ್ಮದ ಸಂಬಂಧ: ಕೊಟ್ಟಿಗೆಹಾರಕ್ಕೆ ಬಂದ ಬೆಂಗಳೂರಿನ ಯುವತಿ !
Team Udayavani, Aug 31, 2020, 8:58 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕೊಟ್ಟಿಗೆಹಾರ: ನಾಲ್ಕು ತಲೆಮಾರು ಹಿಂದಿನ ತನ್ನ ಪೂರ್ವಜನ್ಮದ ಊರಾದ ಮೇಗೂರಿಗೆ ಹೋಗಬೇಕು ಎಂದು ಬೆಂಗಳೂರಿನ ಯುವತಿಯೊಬ್ಬಳು ಹಠ ಹಿಡಿದ ಕಾರಣ ಆಕೆಯ ಹೆತ್ತವರು ಅವಳನ್ನು ಜಾವಳಿ ಗ್ರಾ. ಪಂ. ವ್ಯಾಪ್ತಿಯ ಮೇಗೂರು ಗ್ರಾಮಕ್ಕೆ ಕರೆತಂದ ಕುತೂಹಲಕಾರಿ ಪ್ರಸಂಗವೊಂದು ನಡೆದಿದೆ.
ಬೆಂಗಳೂರಿನ ಹೆಬ್ಟಾಳ ಸಮೀಪದ ನಾಗವಾರದ ಯುವತಿ ಕೆಲವು ತಿಂಗಳುಗಳಿಂದ ವಿಚಿತ್ರವಾಗಿ ವರ್ತಿಸುತ್ತಿದ್ದು, ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ.
ಪೋಷಕರು ಪ್ರಶ್ನಿಸಿದಾಗ, ತಾನು ನಾಲ್ಕು ತಲೆಮಾರುಗಳ ಹಿಂದೆ ಜಾವಳಿ ಸಮೀಪದ ಮೇಗೂರಿನ ಅರ್ಚಕರೊಬ್ಬರ ಮಗಳಾಗಿದ್ದು, ಆ ಊರಿಗೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯನ್ನು ಮೇಗೂರಿನ ಅಮೃತೇಶ್ವರ ದೇವಸ್ಥಾನಕ್ಕೆ ಕರೆತರಲಾಗಿದೆ.
ಇಲ್ಲಿಗೆ ಬಂದ ಬಳಿಕ ಆಕೆಯ ವರ್ತನೆಯಲ್ಲಿ ಸಹಜತೆ ಕಂಡು ಬಂದಿದೆ ಎಂದು ಮನೆಯವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಗ್ರಾಮಸ್ಥ ಚನ್ನಕೇಶವ ಗೌಡ, ಯುವತಿ ಹೇಳಿದಂಥ ಅರ್ಚಕರು ಈ ಹಿಂದೆ ಈ ಗ್ರಾಮದಲ್ಲಿದ್ದ ಬಗ್ಗೆ ಹಿರಿಯರಿಗೂ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ