ರಸ್ತೆಯಿಲ್ಲ..; ಅನಾರೋಗ್ಯ ಪೀಡಿತ ವೃದ್ದೆಯನ್ನು ಜೋಳಿಗೆಯಲ್ಲಿ ಹೊತ್ತು ತಂದ ಸಂಬಂಧಿಕರು
Team Udayavani, Sep 19, 2022, 11:27 AM IST
ಚಿಕ್ಕಮಗಳೂರು: ಮನೆಗೆ ರಸ್ತೆ ಸಂಪರ್ಕವಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಹೊತ್ತೊಯ್ದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಅನಾರೋಗ್ಯ ಪೀಡಿತ ವೃದ್ದೆಯನ್ನು ಆಸ್ಪತ್ರೆಗೆ ಸೇರಿಸಲು ಸಂಬಂಧಿಕರು ಈ ರೀತಿ ಮಾಡಿದ್ದಾರೆ.
ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದ 85 ವರ್ಷದ ಪ್ರಾಯದ ವೆಂಕಮ್ಮ ಅವರ ಮನೆಗೆ ರಸ್ತೆ ಸಂಪರ್ಕದ ಸೌಲಭ್ಯವಿಲ್ಲ. ಹೀಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲೆಂದು ಮನೆಯಿಂದ ಜಮೀನಿನ ಕಾಲುದಾರಿಯಲ್ಲಿ ಜೋಳಿಗೆಯಲ್ಲಿ ಹೊತ್ತುಕೊಂಡು ಬರಲಾಗಿದೆ.
ಸುತ್ತ ಜಮೀನು, ಮಧ್ಯದಲ್ಲಿರುವ ಮನೆ ಹೊಂದಿರುವ ವೆಂಕಮ್ಮ ಅವರದ್ದು ಭೂ ಸ್ವಾಧೀನ ಕಾಯ್ದೆ ಅಡಿಯಲ್ಲಿ ಮಂಜೂರಾಗಿದ್ದ ಜಮೀನು. 2021ರಲ್ಲಿಯೇ ‘ರಸ್ತೆ ಇಲ್ಲ ರಸ್ತೆ ಮಾಡಿಸಿಕೊಡಿ’ ಎಂದು ಅವರು ಮನವಿ ಮಾಡಿದ್ದರು. ಸಚಿವ ಆರ್ ಆಶೋಕ್, ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿದ್ದರು. ಆದರೆ ಇದುವರೆಗೂ ಏನೂ ಕ್ರಮ ಕೈಗೊಳ್ಳದ ಕಾರಣ ಅನಾರೋಗ್ಯ ಪೀಡಿತರಾದ ಅವರನ್ನು ಹೊತ್ತುಕೊಂಡು ಹೋಗಬೇಕಾದ ಪರಿಸ್ಥಿತಿಯಿದೆ.
ಇದನ್ನೂ ಓದಿ:ಬಂಟರ ಕಾರ್ಯಕ್ರಮಗಳಿಗೆ ನನ್ನನ್ನು ಕರೆಯಲು ಮರೆಯಬೇಡಿ: ಡಿಸಿಎಂ ಫಡ್ನವೀಸ್
ಮನವಿ ಮಾಡಿದರೂ ಸ್ಪಂದಿಸದ ಸರ್ಕಾರ, ಜಿಲ್ಲಾಡಳಿತ ವಿರುದ್ದ ಸ್ಥಳೀಯರು ಅಸಮಾಧಾನ ತೋಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ