ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಒತ್ತಾಯಿಸಿ ಮನವಿ
Team Udayavani, Jul 7, 2020, 5:08 PM IST
ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆ ಮಾಡಬೇಕು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ವತಿಯಿಂದ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಮನವಿ ಸಲ್ಲಿಸಲಾಯಿತು.
ಕೆಜಿಎಫ್ ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಮ್ ಗೌಡ ಮಾತನಾಡಿ, ಮೂಡಿಗೆರೆಯಲ್ಲಿ ತೋಟಗಾರಿಕಾ ವಿಶ್ವವಿದ್ಯಾನಿಲಯ ಆಗಬೇಕೆಂಬ ಬಹು ಬೇಡಿಕೆಯಿದ್ದು, ಅದಕ್ಕಾಗಿಯೇ ಸಚಿವರಿಗೆ ಮತ್ತೂಮ್ಮೆ ಮನವಿ ಸಲ್ಲಿಸಿದ್ದೇವೆ. ಇಲ್ಲಿ ವಿಶ್ವವಿದ್ಯಾನಿಲಯ ಮಾಡಲು ಎಲ್ಲಾ ಮೂಲ ಸೌಕರ್ಯಗಳಿದ್ದು, ಸುಮಾರು 400 ರಿಂದ 600 ಎಕರೆವರೆಗೆ ಜಾಗವೂಇದೆ. ಆದಕ್ಕೆ ಸಚಿವರು 50 ಕೋಟಿ ರೂ ಅನುದಾನ ನೀಡಿದರೆ ಉನ್ನತ ತೋಟಗಾರಿಕಾ ವಿಶ್ವವಿದ್ಯಾನಿಲಯ ಸ್ಥಾಪನೆ ಹಾಗೂ ಅಭಿವೃದ್ಧಿಗೆ ಪೂರಕವಾಗಲಿದೆ. ಸಾವಿರಾರು ಮಂದಿಗೆ ಉದ್ಯೋಗ ದೊರೆಯುತ್ತದೆ. ಮೂಡಿಗೆರೆ ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.
ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಳೂರು ಮಾತನಾಡಿ, ಮೂಡಿಗೆರೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವಂತೆ ಬೆಳೆಗಾರರ ಸಂಘದ ವತಿಯಿಂದ ಸಚಿವರಿಗೆ ಕಳೆದ ವಾರ ಮನವಿ ಸಲ್ಲಿಸಿದ್ದು ಸಚಿವರು ತಾಲೂಕಿನ ನಾಲ್ಕು ಪ್ರವಾಸಿ ತಾಣಗಳ ಅಭಿವೃದ್ಧಿಗೆ 2 ಕೋಟಿ ರೂ. ಮಂಜೂರು ಮಾಡಿರುವುದನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ ಸ್ವಾಗತಿಸುತ್ತದೆ. ಬಹುತೇಕ ನೆರೆ ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ಸಿಕ್ಕಿಲ್ಲ. ಅವರಿಗೂ ಪರಿಹಾರ ದೊರಕಿಸಲು ಒತ್ತಾಯ ಮಾಡಿದ್ದೇವೆ ಎಂದರು.
ಕಸಾಪ ತಾಲೂಕು ಮಾಜಿ ಅಧ್ಯಕ್ಷ ಎಂ.ಎಸ್. ಅಶೋಕ್, ಲಯನ್ಸ್ ಸಂಸ್ಥೆ ತಾಲೂಕು ಅಧ್ಯಕ್ಷ ಡಿ.ಕೆ. ಲಕ್ಷ್ಮಣ್ಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !