ರೈಲ್ವೆ ನಿಲ್ದಾಣ ಅಭಿವೃದ್ಧಿಪಡಿಸಲು ಮನವಿ
Team Udayavani, Jun 30, 2020, 12:33 PM IST
ಅಜ್ಜಂಪುರ: ಪಟ್ಟಣದ ರೈಲು ನಿಲ್ದಾಣಕ್ಕೆ ಮೂಲ ಸೌಕರ್ಯ ಕಲ್ಪಿಸುವಂತೆ ಮತ್ತು ಎಕ್ಸ್ಪ್ರೆಸ್ ರೈಲುಗಳಿಗೆ ಪಟ್ಟಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಹಿರಿಯ ನಾಗರೀಕರ ವೇದಿಕೆ ಪದಾಧಿಕಾರಿಗಳು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆ ಅಧ್ಯಕ್ಷ ಶಿವಮೂರ್ತಿ, ಅಜ್ಜಂಪುರ ತಾಲೂಕು ಕೇಂದ್ರವಾಗಿದೆ. ಸುತ್ತಮುತ್ತಲ 80ಕ್ಕೂ ಹೆಚ್ಚು ಹಳ್ಳಿಗಳ ಸಹಸ್ರಾರು ಜನ, ಬೆಂಗಳೂರು, ಮುಂಬೈ ಸೇರಿದಂತೆ ವಿವಿಧೆಡೆಗೆ ವ್ಯಾಪಾರ-ವ್ಯವಹಾರಕ್ಕೆ ಸಂಚಾರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಮೈಸೂರು-ಧಾರವಾಡ, ಧಾರವಾಡ-ಮೈಸೂರು ಮತ್ತು ಗೋವಾ-ಯಶವಂತಪುರ, ಯಶವಂತ ಪುರ-ಗೋವಾ ಹಾಗೂ ಮೈಸೂರು- ಸೋಲ್ಲಾಪುರ, ಸೋಲ್ಲಾಪುರ-ಮೈಸೂರು ರೈಲುಗಳನ್ನು ಪಟ್ಟಣದಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಕೋರಿದರು.
ಅಜ್ಜಂಪುರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ವಿಶ್ರಾಂತಿ ಗೃಹ ನಿರ್ಮಿಸಿ, ಶೌಚಾಲಯ ವ್ಯವಸ್ಥೆಗೊಳಿಸಿ, ಮುಂಗಡ ಟಿಕೆಟ್ ಕೌಂಟರ್ ತೆರೆಯಬೇಕು. ಪ್ಲಾಟ್ ಫಾರಂ ಎತ್ತರಿಸಿ, ಕುಡಿಯುವ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ವೇಳೆ ಹಿರಿಯ ನಾಗರೀಕರ ವೇದಿಕೆ ಪದಾಧಿಕಾರಿಗಳು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ