ಮೀಸಲು ಅರಣ್ಯ ಜಾಗ ದಿಢೀರ್‌ ಒತ್ತುವರಿ


Team Udayavani, Dec 3, 2019, 4:47 PM IST

cm-tdy-1

ಚಿಕ್ಕಮಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಏಕಾಏಕಿ 60 ಜನರ ತಂಡ ಒತ್ತುವರಿ ಮಾಡಿ, ಗುಡಾರಗಳನ್ನು ಹಾಕಿ ಅಂಬೇಡ್ಕರ್‌ ಪ್ರತಿಮೆ ಸ್ಥಾಪಿಸಿರುವ ಘಟನೆ ಮಲ್ಲೇನಹಳ್ಳಿ ಸಮೀಪದ ತುರ್ಚೆಗುಡ್ಡದಲ್ಲಿ ಸೋಮವಾರ ನಡೆದಿದೆ.

ಮಲ್ಲೇನಹಳ್ಳಿ ವಿಭಾಗದ ಅರಿಶಿನಗುಪ್ಪೆ ಸರ್ವೆ ನಂಬರ್‌ 52ರಲ್ಲಿ ಒಟ್ಟು 275 ಎಕರೆ ಅರಣ್ಯ ಇಲಾಖೆಗೆ ಸೇರಿದ ಭೂಮಿ ಇದ್ದು, ಸೋಮವಾರ ಬೆಳಗ್ಗೆ 60 ಮಂದಿ ಭೂರಹಿತರು ಅಲ್ಲಿಗೆ ತೆರಳಿ ಗುಡಾರಗಳನ್ನು ಹಾಕಿದರಲ್ಲದೇ, ಅಂಬೇಡ್ಕರ್‌ ಪ್ರತಿಮೆಯೊಂದನ್ನು ಇಟ್ಟಿದ್ದಾರೆ.

ತಕ್ಷಣ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪ್ರಾದೇಶಿಕ ಅರಣ್ಯ ವಿಭಾಗದ ವಲಯಾರಣ್ಯಾಧಿಕಾರಿ ಶೃತಿ ಹಾಗೂಸಿಬ್ಬಂದಿ, ಅರಣ್ಯ ಒತ್ತುವರಿ ಮಾಡಬಾರದೆಂದು ಮನವಿ ಮಾಡಿ, ಒತ್ತುವರಿ ಮಾಡಿದವರನ್ನು ತೆರವು ಮಾಡಬೇಕೆಂದು ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕರು ಸಹ ತೆರಳಿ ಒತ್ತುವರಿ ಮಾಡಿದ ಗುಂಪಿಗೆ ಜಾಗ ತೆರವು ಮಾಡಬೇಕೆಂದು ತಿಳಿ ಹೇಳಿದರು.

ಆದರೆ, ತಮಗೆ ಜಮೀನು ನೀಡುವವರೆಗೂ ಈ ಸ್ಥಳದಿಂದಹೊರ ಹೋಗುವುದಿಲ್ಲವೆಂದು ಪಟ್ಟು ಹಿಡಿದು ಕುಳಿತರು. ಹಾಗಾಗಿ, ಈ ಸಂಬಂಧ ಅರಣ್ಯ ಇಲಾಖೆ ಪೊಲೀಸ್‌ಇಲಾಖೆ ಹಾಗೂ ಜಿಲ್ಲಾಡಳಿತದ ಸಹಾಯವನ್ನು ಕೇಳಿದೆಯಲ್ಲದೇ, ಪರಿಸ್ಥಿತಿಯನ್ನು ಜಿಲ್ಲಾಡಳಿತದ ಗಮನಕ್ಕೆ ತಂದಿದೆ. ತುರ್ಚೆ ಗುಡ್ಡದ 275 ಎಕರೆ ಪ್ರದೇಶ ಅರಣ್ಯ ಇಲಾಖೆಗೆ ಸೇರಿದೆ. ಇಲ್ಲಿ ಯಾವುದೇ ರೀತಿ ಅರಣ್ಯೇತರ ಚಟುವಟಿಕೆಯನ್ನು ನಡೆಸಲು ಅವಕಾಶವಿಲ್ಲ. ಈ ಭೂರಹಿತರು ಹಿಂದಿನಿಂದಲೂ ತಮಗೆ ಜಮೀನು ನೀಡಬೇಕೆಂದು ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತಾ ಬಂದಿದ್ದು, ಈವರೆಗೂ ಅವರ ಸಮಸ್ಯೆಗೆ ಪರಿಹಾರ ಹುಡುಕದೇ ಇರುವುದರಿಂದ ಅರಣ್ಯ ಪ್ರದೇಶಕ್ಕೆ ಹೋಗಿ ತಾವೇ 3-4 ಗುಡಾರಗಳನ್ನುಹಾಕಿದ್ದು, ತಮಗೆ ಜಮೀನು ನೀಡುವವರೆಗೂ ಇಲ್ಲೇ ಇರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್‌, ಪೊಲೀಸರು ಒತ್ತುವರಿತೆರವುಗೊಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಯೂ ಪ್ರಯತ್ನ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಅತಿಕ್ರಮವಾಗಿ ಗುಡಿಸಲು ಹಾಕಿರುವ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು,

ಪ್ರಕರಣ ದಾಖಲಾಗಿದೆ. ಅರಣ್ಯ ಕಾಯ್ದೆಯಂತೆ ಕ್ರಮ ಕೈಗೊಳ್ಳಲಾಗುತ್ತದೆ. ಸರ್ವೆ ನಂ 52 ರಲ್ಲಿ 110 ಎಕರೆ ಅರಣ್ಯ ಪ್ರದೇಶ ಇದೆ. ಹಾಗಾಗಿ, ಅರಣ್ಯ ಕಾಯ್ದೆಒತ್ತುವರಿ ಮಾಡುವುದಕ್ಕೆ ಯಾರಿಗೂ ಅವಕಾಶವಿಲ್ಲ. ಅರಣ್ಯ ಕಾಯ್ದೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.