ಗುಡ್ಡ ಕುಸಿತ: ದತ್ತಪೀಠ, ಮುಳ್ಳಯ್ಯನಗಿರಿಗೆ ವಾಹನ ಸಂಚಾರ ನಿರ್ಬಂಧ
Team Udayavani, Aug 11, 2019, 10:29 AM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚುತ್ತಿದ್ದಂತೆ ಗುಡ್ಡ ಕುಸಿತ ಪ್ರಕರಣಗಳು ಕೂಡಾ ಜಾಸ್ತಿಯಾಗಿವೆ. ದತ್ತಪೀಠ, ಮುಳ್ಳಯ್ಯನಗಿರಿಯಲ್ಲಿ ಸತತವಾಗಿ ಗುಡ್ಡ ಕುಸಿತವಾಗುತ್ತಿರುವುದರಿಂದ ಆಗಸ್ಟ್ 14 ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಗಿರಿಪ್ರದೇಶದಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದ್ದು ಮುನ್ನೆಚ್ಚರಿಕೆಯ ಕ್ರಮವಾಗಿ ಮುಳ್ಳಯ್ಯನಗಿರಿ, ದತ್ತಪೀಠ, ಹೊನ್ನಮ್ಮನಹಳ್ಳ ರಸ್ತೆಯಲ್ಲಿ ಸಂಚಾರವನ್ನು ಕಡಿತಗೊಳಿಸಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.