ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯಲಿ: ತಾರಾದೇವಿ
Team Udayavani, May 15, 2020, 6:14 AM IST
ಮೂಡಿಗೆರೆ: ಕರ್ನಾಟಕ ಸರ್ಕಾರ ಎಪಿಎಂಸಿ ಕಾಯ್ದೆಗೆ ತಂದಿರುವ ತಿದ್ದುಪಡಿ ಕೂಡಲೇ ವಾಪಸ್ಸು ಪಡೆಯಬೇಕು ಎಂದು ಕೇಂದ್ರ ಮಾಜಿ ಸಚಿವೆ ಡಿಕೆ ತಾರಾದೇವಿ ಆಗ್ರಹಿಸಿದ್ದಾರೆ.
ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರುವ ಮೊದಲು ರೈತರುಗಳ ಉತ್ಪನ್ನಗಳ ಬೆಲೆಗಳ ಮೇಲೆ ಆಗುವ ದುಷ್ಪರಿಣಾಮಗಳನ್ನು ಪಟ್ಟಿಮಾಡಿ ಸಾಧಕ ಬಾಧಕಗಳನ್ನು ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ರೈತ ಪ್ರತಿನಿಧಿ ಗಳು, ರೈತ ಸಂಘಟನೆಗಳು, ಕೃಷಿ ಉತ್ಪನ್ನ ವ್ಯಾಪಾರಸ್ಥರ ಸಂಘಟನೆ, ಸಹಕಾರ ಕ್ಷೇತ್ರದ ಧುರೀಣರು, ಎಪಿಎಂಸಿ ಅಧಿಕಾರಿಗಳು ಹಾಗೂ ಪ್ರತಿನಿ ಧಿಗಳು ಮತ್ತು ಎಲ್ಲಾ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರನ್ನು ಕರೆದು ಚರ್ಚಿಸಬೇಕಿತ್ತು.
ಕರ್ನಾಟಕ ಸರ್ಕಾರ ಆತುರಾತುರವಾಗಿ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆಯ ಮೂಲಕ ತಿದ್ದುಪಡಿ ತರುವ ಕ್ರಮ ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿರುವುದು ಸುಳ್ಳಲ್ಲ. ಈ ತಿದ್ದುಪಡಿ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳು ಕೃಷಿ ಉತ್ಪನ್ನ ಮಾರಾಟ ಕ್ಷೇತ್ರಕ್ಕೆ ಕಾಲಿರಿಸಲು ಅನುವು ಮಾಡಿಕೊಡುವ ಒಂದೇ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಳ್ಳು ಮುಂದಾಗಿದೆ ಎಂಬ ಗಂಭೀರ ಆರೋಪ ಸರ್ಕಾರದ ಮೇಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ