ಗುರು-ಶಿಷ್ಯರ ಸಂಬಂಧ ಅಮೂಲ್ಯ: ಭಾನುಪ್ರಕಾಶ್‌


Team Udayavani, Feb 3, 2020, 5:55 PM IST

3-Febrauary-29

ಶೃಂಗೇರಿ: ಮೆಕಾಲೆಯ ಉದ್ಯೋಗ ಆಧಾರಿತ ಅಂಕಗಳಿಕೆಯ ಫಲಾಪೇಕ್ಷೆ ಶಿಕ್ಷಣವನ್ನೇ ಕೊಡುತ್ತಾ ಮಾನಸಿಕ ಗುಲಾಮಗಿರಿಯನ್ನು ಈಗಲೂ ಒಪ್ಪಿಕೊಂಡಿದ್ದೇವೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಮತ್ತೂರಿನ ಭಾನುಪ್ರಕಾಶ್‌ ವಿಷಾದಿಸಿದರು.

ಹರಿಹರಪುರ ಚಿತ್ರಕೂಟದ ಪ್ರಬೋಧಿನಿ ಗುರುಕುಲದ ಅರ್ಧಮಂಡಲೋತ್ಸವದ ಅಂಗವಾಗಿ ಪಟ್ಟಣದ ಜಿಎಸ್‌ಬಿ ಸಭಾಭವನದಲ್ಲಿ ಏರ್ಪಡಿಸಿದ್ದ ಗುರುಕುಲ ದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ರಿಟಿಷರು ಗುರುಕುಲ ವಿದ್ಯಾಭ್ಯಾಸ ಪರಂಪರೆ ನಾಶಮಾಡಿ ಶಾಶ್ವತವಾಗಿ ಸ್ವಾಭಿಮಾನದ ಬದುಕಿಗೆ ಕೊಡಲಿ ಏಟು ನೀಡಿದರು. ದೇಶದ ಮೇಲೆ ಆಕ್ರಮಣ ಮಾಡಿದ ಮೊಗಲರು ನಮ್ಮ ಶ್ರದ್ಧಾಕೇಂದ್ರ ನಾಶ ಮಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಆಗುತ್ತಿವೆ ಆದರೂ ಸ್ವಾತಂತ್ರ್ಯದ ನಂತರ ನಮ್ಮದೇ ಆದ ಶಿಕ್ಷಣ ಪದ್ಧತಿಯನ್ನು ಜಾರಿಗೆ ತರುವಲ್ಲಿ ನಾವು ಸೋತಿದ್ದರಿಂದ, ಅಂತಃಸತ್ವದ ಶಿಕ್ಷಣದ ಬದಲಿಗೆ ನಿಶ್ಚಿತ ಗುರಿ ಇಲ್ಲದ ಮೆಕಾಲೆ ಪದ್ಧತಿಯನ್ನೇ ಅನುಸರಿಸಿಕೊಂಡು ಬಂದಿದ್ದೇವೆ ಎಂದರು.

ಪರಕೀಯರ ಆಳ್ವಿಕೆಗೂ ಮೊದಲು 30 ಸಾವಿರ ಗುರುಕುಲಗಳು ನಮ್ಮಲ್ಲಿದ್ದವು. ಆರ್ಷಗುರುಕುಲ ಶಿಕ್ಷಣದಲ್ಲಿ ಭಗವಂತನ ಚಿಂತನೆ, ಪ್ರಕೃತಿಯ ಆರಾಧನೆಯೊಂದಿಗೆ ನಮ್ಮೊಳಗಿನ ವಿದ್ವತ್ತನ್ನು ಅರಳಿಸುವ ಬೋಧನೆ ಇತ್ತು. ಆದರೆ, ಇಂದಿಗೂ ನಮ್ಮ ಮಕ್ಕಳಿಗೆ ಬೇಕಾಗಿರುವ ಶಿಕ್ಷಣ ಗುರುತಿಸಿ, ಅದನ್ನೇ ಕೊಡಿಸುವಲ್ಲಿ ನಾವು ಸಂಪೂರ್ಣವಾಗಿ ಸೋತ್ತಿದ್ದೇವೆ. ಗುರು-ಶಿಷ್ಯರ ಸಂಬಂಧ ಅಮೂಲ್ಯವಾದದ್ದು. ಪ್ರಶ್ನೆ ಮಾಡುವ ಮನೋಭಾವವನ್ನು ಶಿಷ್ಯನಲ್ಲಿ ಮೂಡಿಸುವುದೇ ಸರಿಯಾದ ಶಿಕ್ಷಣವಾಗಿದೆ. ಶ್ರೀಮಂತ, ಬಡವ, ಜಾತಿ ಬೇಧವಿಲ್ಲದೇ ಯಾವುದೇ ಶುಲ್ಕ ಪಡೆಯದೇ ಶಿಕ್ಷಣ ನೀಡುವುದು ಗುರುಕುಲವಾಗಿದೆ. ಗುರುಕುಲದಲ್ಲಿ ಗುರು ತನ್ನ ಶಿಷ್ಯನನ್ನು ಸದಾಕಾಲ ತನ್ನೊಡನೆ ಇರಿಸಿಕೊಂಡು ಸರ್ವತೋಮುಖ ಮಾರ್ಗದರ್ಶನ ಮಾಡುತ್ತಾನೆ. ಇನ್ನಾದರೂ ಆಡಳಿತಗಾರರು ಎಚ್ಚೆತ್ತುಕೊಂಡು ಗುರುಕುಲ ಪದ್ಧತಿಯ ಶಿಕ್ಷಣವನ್ನು ದೇಶದಲ್ಲಿ ಜಾರಿಗೆ ತರಬೇಕು ಎಂದರು.

ಪ್ರಬೋಧಿನಿ ಗುರುಕುಲದ ಪ್ರಧಾನ ವ್ಯವಸ್ಥಾಪಕ ಉಮೇಶ್‌ ಮಾತನಾಡಿ, ಪ್ರಬೋಧಿ ನಿ ಗುರುಕುಲಕ್ಕೆ 24 ವರ್ಷ ಪೂರ್ಣಗೊಂಡ ಕಾರಣ ಈಗ ಅರ್ಧ ಮಂಡಲೋತ್ಸವವನ್ನು ಆಚರಿಸಲಾಗುತ್ತಿದೆ. ಇಲ್ಲಿ ಬಾಲಕರಿಗೆ ಮಾತ್ರ ಅವಕಾಶ. ವಿಟ್ಲದ ಮೈತ್ರೇಯಿ ಗುರುಕುಲದಲ್ಲಿ ಬಾಲಕಿಯರಿಗೆ ಮತ್ತು ಚನ್ನೇನಹಳ್ಳಿಯ ವೇದವಿಜ್ಞಾನ ಗುರುಕುಲದಲ್ಲಿ ಉನ್ನತ ಶಿಕ್ಷಣ ನೀಡಲಾಗುತ್ತಿದೆ. ಗುರುಕುಲ ಶಿಕ್ಷಣದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸುವ ಸಲುವಾಗಿ ಈ ವರ್ಷ ರಾಜ್ಯಾದ್ಯಂತ ಕಾರ್ಯಕ್ರಮ ನಡೆಸಲಾಗುತ್ತಿದೆ. ಫೆ.9ರಂದು ಅರ್ಧಮಂಡಲೋತ್ಸವದ ಸಮಾರೋಪ ಸಮಾರಂಭವು ಗುರುಕುಲದಲ್ಲಿ ನಡೆಯುತ್ತಿದ್ದು ರಾ.ಸ್ವ.ಸಂಘದ ಸರಸಂಘಚಾಲಕ ಮೋಹನ್‌ ಭಾಗ್ವತ್‌ ಹಾಗೂ ಅಮೆರಿಕದ ಭಾರತೀಯ ಸಾಂಸ್ಕೃತಿಕ ವಿದ್ವಾಂಸ ಡೆವಿಡ್‌ ಫ್ರಾಲಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎಂ.ಶ್ರೀನಿವಾಸ್‌ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅರ್ಧಮಂಡಲೋತ್ಸವ ಸಮಿತಿ ಕಾರ್ಯಾಧ್ಯಕ್ಷ ಎಚ್‌ .ಬಿ.ರಾಜಗೋಪಾಲ್‌, ಗುರುಕುಲದ ಆಚಾರ್ಯ ರಾಕೇಶ್‌ ಇದ್ದರು. ಸುರೇಶ್ಚಂದ್ರ ನಿರೂಪಿಸಿದರು. ಎ.ಎಸ್‌.ನಯನ ಸ್ವಾಗತಿಸಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.