ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಉಪಯುಕ್ತ


Team Udayavani, Nov 10, 2020, 6:32 PM IST

ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಉಪಯುಕ್ತ

ಕಡೂರು: ಕೋವಿಡ್ ಅವಧಿಯಲ್ಲಿ ನಡೆಯುತ್ತಿರುವ ಅಂತರ್ಜಾಲ ಶಿಕ್ಷಣಕ್ಕೊಂದು ಮಾದರಿಯಾಗಿ ಜ್ಞಾನತಾಣ ಯೋಜನೆಯಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ| ವೀರೆಂದ್ರ ಹೆಗ್ಗಡೆ ಅವರು ರಾಜ್ಯದ ಗ್ರಾಮೀಣ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ನೀಡುತ್ತಿರುವ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ಅತ್ಯಂತ ಉಪಯುಕ್ತವಾಗಿದೆ ಎಂದು ಶಾಸಕ ಬೆಳ್ಳಿಪ್ರಕಾಶ್‌ ತಿಳಿಸಿದರು.

ಪಟ್ಟಣದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿಯಲ್ಲಿ ಸೋಮವಾರ ಆಯೋಜಿಸಿದ್ದ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ಮಕ್ಕಳ ಆನ್‌ ಲೈನ್‌ ಕಲಿಕೆಗೆ ಉಪಯುಕ್ತವಾಗಲಿದೆ. ಶ್ರೀ ಕ್ಷೇತ್ರವು ಸುಮಾರು 20 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ರಿಯಾಯಿತಿ ದರದಲ್ಲಿ ಉಪಕರಣಗಳನ್ನು ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದರು.

ಶ್ರೀ ಕ್ಷೇತ್ರವು ಇಂತಹ ಹತ್ತು ಹಲವಾರು ಸಾರ್ವಜನಿಕ ಯೋಜನೆಗಳನ್ನು ಮಾಡುತ್ತಿದ್ದು. ದೇಶದ ನಂ. 1 ಎನ್‌ಜಿಒ ಸಂಸ್ಥೆಯಾಗಿದೆ ಎಂದರೆ ತಪ್ಪಾಗಲಾರದು. ಕ್ಷೇತ್ರದಲ್ಲಿ ಶುದ್ಧಗಂಗಾ ಸ್ಥಾಪನೆಯಿಂದ ಆರಂಭಿಸಿಕೃಷಿ, ಹೈನುಗಾರಿಕೆ ಸೇರಿದಂತೆ ಅನೇಕ ಕೃಷಿ ಚಟುವಟಿಕೆಗೆ ಸಾಲ ನೀಡಿ ಅಷ್ಟೇ ಪ್ರಾಮಾಣಿಕವಾಗಿ ಸಾಲ ವಸೂಲಾತಿ ನಡೆಸಿ ಮಹಿಳೆಯರಲ್ಲಿ ಉತ್ತಮ ಹಣಕಾಸಿನ ನೆರವಿನಿಂದ ಕುಟುಂಬ ನಿರ್ವಹಣೆಗೆ ಸಹಕಾರವಾಗಿದ್ದಾರೆ.ಈ ಬಾರಿ 18 ಕೋಟಿ ಉಳಿತಾಯ ಮಾಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದರು.

ಕಡೂರು ಪುರಸಭೆಯ ಅಧ್ಯಕ್ಷ ಭಂಡಾರಿ ಶ್ರೀನಿವಾಸ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀ ಕ್ಷೇತ್ರವು ಸಾರ್ವಜನಿಕರಿಗೆ ಸರ್ಕಾರ ನೀಡುವಂತೆಅನೇಕ ಮೂಲ ಸೌಕರ್ಯಗಳನ್ನು ನೀಡಿದೆ. ಶ್ರೀಕ್ಷೇತ್ರವು ತನ್ನದೇ ಇತಿ ಮಿತಿಯಲ್ಲಿ ಆಯ-ವ್ಯಯ ತಯಾರಿಸಿಕೊಂಡು ಸಾಲ ಸೌಲಭ್ಯಗಳನ್ನು ನೀಡಿ ಬಂದಂತಹ ಲಾಭಾಂಶದಲ್ಲಿ ಸಾರ್ವಜನಿಕ ಸೇವೆಗೆ ಮುಂದಾಗಿರುವುದು ಸಂಕಷ್ಟದಲ್ಲಿರುವವರಿಗೆ ಸಹಾಯವಾಗಿದೆ. ಇದೀಗ ಗ್ರಾಮೀಣ ಮಕ್ಕಳಿಗೆ ಅಂತರ್ಜಾಲ ಶಿಕ್ಷಣಕ್ಕೆ ಟ್ಯಾಬ್‌ ನೀಡುತ್ತಿರುವುದು ಶೈಕ್ಷಣಿಕವಾಗಿ ಮಕ್ಕಳಿಗೆ ಉಪಯೋಗವಾಗಲಿದೆ ಎಂದರು.

ಶ್ರೀಕ್ಷೇತ್ರದ ತಾಲೂಕು ಯೋಜನಾಧಿಕಾರಿ ಕರುಣಾಕರ್‌ ಆಚಾರ್‌ ಪ್ರಾಸ್ತಾವಿಕವಾಗಿ

ಮಾತನಾಡಿ, ಶ್ರೀ ಕ್ಷೇತ್ರದ ಯೋಜನಾ ಕಚೇರಿಯು ಆರಂಭವಾಗಿ 13 ವರ್ಷ ಕಳೆದಿದೆ. ಇದುವರೆಗೂ ಉತ್ತಮ ಯೋಜನೆಗಳನ್ನು ಹಾಕಿಕೊಂಡು 86 ಕೋಟಿ ಸಾಲ ವ್ಯವಹಾರ ನಡೆಸಿದೆ. ಗ್ರಾಮೀಣ ಕನ್ನಡ ಮಾಧ್ಯಮ ಮಕ್ಕಳ ಕಲಿಕೆಗೆ ಪೂರಕವಾಗಿ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣೆ ಕಾರ್ಯವು ನಡೆಯುತ್ತಿದ್ದು ಮೊದಲ ಹಂತವಾಗಿ 130 ಮಕ್ಕಳಿಗೆ ನೀಡಲಾಗುವುದು. ಸಂಘದ ಸದಸ್ಯರ ಮಕ್ಕಳಿಗೆ ಮಾತ್ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಾಣಾಧಿಕಾರಿ ಕಚೇರಿಯ ದಿನೇಶ್‌ ಮಾತನಾಡಿ, ಶ್ರೀ ಕ್ಷೇತ್ರವು ನೀಡುತ್ತಿರುವ ಟ್ಯಾಬ್‌ ಮತ್ತು ಲ್ಯಾಪ್‌ಟಾಪ್‌ ವಿತರಣೆಗೆ ಶಿಕ್ಷಣ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.ಜಿಪಂ ಸದಸ್ಯ ಕೆ.ಆರ್‌. ಮಹೇಶ್‌ಒಡೆಯರ್‌ ಮತ್ತು ಪಟ್ಟಣದ ಬಾಹುಬಲಿದಂಡವತಿ ಇದ್ದರು.

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

Temple Run: ಮತ್ತೆ ಮೋದಿ ಪ್ರಧಾನಿ ಆಗಬೇಕೆಂದು ಶತಾಯುಷಿ ಅಜ್ಜಿಯ ಟೆಂಪಲ್ ರನ್…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.