Sale of Property: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರದಲ್ಲಿ ಮನಸ್ತಾಪ, ಕೊಲೆಯಲ್ಲಿ ಅಂತ್ಯ
ಘಟನೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಶರಣು
Team Udayavani, Aug 14, 2023, 8:00 AM IST
ಚಿಕ್ಕಮಗಳೂರು: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರದಲ್ಲಿ ನಡೆದ ಮನಸ್ತಾಪ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಸ್ತಿ ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಕಾರ್ತಿಕ್ (45)ಕೊಲೆಯಾದ ವ್ಯಕ್ತಿ. ಮಧುಗುಂಡಿ ಗ್ರಾಮದ ನಿವಾಸಿ ಸಂತೋಷ್ ಕೊಲೆ ಮಾಡಿದ ಆರೋಪಿ.
ಘಟನೆಯ ವಿವರ:
ಮಧುಗುಂಡಿ ಗ್ರಾಮದ ನಿವಾಸಿ ಸಂತೋಷ್ ರಾತ್ರಿ ಕುಡಿದ ಮತ್ತಿನಲ್ಲಿ ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ಮಾತುಕತೆಗೆ ಬಂದಿದ್ದ ಕಾರ್ತಿಕ್ ಎಂಬಾತನನ್ನು ಮನೆಯೊಳಗಡೆ ಮಚ್ಚಿನಿಂದ ಹಲ್ಲೆ ನಡೆಸಿದ್ದ, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಲ್ಲೆ ಮಾಡುವ ಸಮಯ ಬಿಡಿಸಲು ಬಂದ ಸಂತೋಷ್ ನ ತಂದೆ ಬಾಸ್ಕರ ಗೌಡ (70 ವರ್ಷ) ಮತ್ತು ತಾಯಿ ಪ್ರೇಮ (52 ವರ್ಷ) ರವರಿಗೂ ಸಂತೋಷ್ ಮಚ್ಚಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ಸಂತೋಷ್ ಬಾಳೂರು ಪೊಲೀಸ್ ಠಾಣೆಗೆ ತಾನಾಗಿಯೇ ಬಂದು ಶರಣಾಗಿದ್ದಾನೆ.
ಮೃತ ಕಾರ್ತಿಕ್ ಭಾಸ್ಕರ್ ಗೌಡ ರವರ ಜಮೀನನ್ನು ಬೆಂಗಳೂರು ಮೂಲದ ಉದ್ಯಮಿಗೆ ಮಾರಾಟ ಮಾಡಲು ವ್ಯಾಪಾರ ಮಾಡಿಕೊಟ್ಟಿದ್ದು, ಅದರ ಮುಂಗಡವಾಗಿ ಬಂದ 12 ಲಕ್ಷ ರೂ. ಹಣ ಕೊಡಿಸಿದ್ದು, ಅ ಹಣವನ್ನು ಭಾಸ್ಕರ್ ಗೌಡ ಅವರ ಮೊದಲ ಮಗ ಶಿವು ಕುಮಾರ್ ತೆಗೆದುಕೊಂಡು ಹೋಗಿದ್ದಾನೆ. ಈ ವಿಚಾರದಲ್ಲಿ ಮನಸ್ತಾಪಗೊಂಡ ಸಂತೋಷ್ ಕಾರ್ತಿಕ್ ನನ್ನು ಕೊಲೆ ಮಾಡಿರುವ ಸಾದ್ಯತೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್