ರಾ.ಹೆ ಪ್ರಾಧಿಕಾರದಿಂದ ಅನ್ಯಾಯ ಆರೋಪ: ಮರಣ ಪತ್ರ ಬರೆದಿಟ್ಟು ಶ್ರೀಗಂಧ ಬೆಳೆಗಾರ ನಾಪತ್ತೆ!
Team Udayavani, Dec 21, 2020, 9:22 AM IST
ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಳೆದುಕೊಂಡು, ಪರಿಹಾರದ ಹಣವೂ ಸಿಗದ ಕಾರಣ ಶ್ರೀಗಂಧ ಬೆಳೆಗಾರರೊಬ್ಬರು ಮರಣ ಪತ್ರ ಬರೆದಿಟ್ಟು, ನೋವಿನ ವಿಡಿಯೋ ಮಾಡಿ ನಾಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ತರೀಕೆರೆ ಪಟ್ಟಣದ ವಿಶುಕುಮಾರ್ ಎಂಬ ಶ್ರೀಗಂಧ ಬೆಳೆಗಾರ ಕಣ್ಮರೆಯಾಗಿದ್ದಾರೆ. ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿಟ್ಟು ವಿಶುಕುಮಾರ್ ನಾಪತ್ತಯಾಗಿದ್ದಾರೆ.
ಕುಟುಂಬದವರನ್ನ ಉದ್ದೇಶಿಸಿ ವಿಡಿಯೋ ಮಾಡಿರುವ ವಿಶು ಕುಮಾರ್ ನಿಮಗೆಲ್ಲಾ ಮೋಸ ಮಾಡಿ ಹೋಗುತ್ತಿದ್ದೇನೆ ಎಂದು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ:ರಾಬರ್ಟ್ ಸಿನಿಮಾ ನಿರ್ಮಾಪಕರ ಹತ್ಯೆಗೆ ಸಂಚು: ಏಳು ಮಂದಿ ಸೆರೆ
ರಾಷ್ಟ್ರೀಯ ಹೆದ್ದಾರಿಗಾಗಿ ರೈತರು ಬೆಳೆದ ಶ್ರೀಗಂಧದ ಮರಗಳ ಹನನ ಮಾಡಲಾಗಿತ್ತು. ಈ ಬಗ್ಗೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು. ಆದರೆ ಕೋರ್ಟ್ ಸೂಚನೆ ನೀಡಿದರೂ ಪ್ರಾಧಿಕಾರ ನಿರ್ಲಕ್ಷ್ಯ ತೋರಿದೆ. ಸುಮಾರು 22 ಮಂದಿ ರೈತರಿಗೆ ಪರಿಹಾರ ನೀಡಲು ಪ್ರಾಧಿಕಾರ ಮೀನಾಮೇಷ ಏಣಿಸುತ್ತಿದ್ದು, ಬೆಳೆಗಾರರು ಸಂಕಷ್ಟ ಅನುಭವಿಸುವಂತಾಗಿದೆ.
ಪರಿಹಾರದ ಹಣಕ್ಕಾಗಿ ಕಚೇರಿಗಳಿಗೆ ಅಲೆದಾಡಿದ ಸಂತ್ರಸ್ತ ಬೆಳೆಗಾರರು, ಮೂರು ದಿನದ ಹಿಂದೆ ತುಮಕೂರಿನ ಪ್ರಾಧಿಕಾರ ಕಚೇರಿಯೆದುರು ಪ್ರತಿಭಟನೆ ಕೂಡಾ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ