ಶ್ರೀಗಂಧ ಕಳ್ಳರನ್ನು ಹಿಡಿದು ಥಳಿಸಿದ ಗ್ರಾಮಸ್ಥರು
Team Udayavani, Nov 29, 2019, 4:00 PM IST
ಚಿಕ್ಕಮಗಳೂರು: ಶ್ರೀಗಂಧದ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶ್ರಿಗಂಧ ಕಳವಿನ ವೇಳೆ ಹಿಡಿಯಲು ಬಂದ ಗ್ರಾಮಸ್ಥರಿಗೆ ಕಳ್ಳರು ವಿಚಿತ್ರ ಮಾಸ್ಕ್ ಹಾಕಿ ಭಯ ಹುಟ್ಟಿಸುತ್ತಿದ್ದರು ಎನ್ನಲಾಗಿದೆ.
ತಂಡದಲ್ಲಿ ಒಟ್ಟು ಐವರಿದ್ದು, ಅದರಲ್ಲಿ ನಾಲ್ವರು ತಪ್ಪಿಸಿಕೊಂಡಿದ್ದು, ಓರ್ವ ಗ್ರಾಮಸ್ಥರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಸಿಕ್ಕಿಬಿದ್ದ ಅರೇಹಳ್ಳಿ ಗ್ರಾಮದ ಅಣ್ಣಪ್ಪನಿಗೆ ಗ್ರಾಮಸ್ಥರು ಸರಿಯಾಗಿ ಗೂಸಾ ನೀಡಿದ್ದು, ನಂತರ ಮೂಡಿಗೆರೆ ಅರಣ್ಯ ಇಲಾಖೆ ವಶಕ್ಕೆ ನೀಡಿದ್ದಾರೆ.
5 ಶ್ರೀಗಂಧದ ತುಂಡು, ಆಪೆ ಆಟೋ ಮತ್ತು ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…