ಸೀತಾಕಟ್ಟೆ ಅಣೆಕಟ್ಟು ವಿವಾದ:ವೃಕ್ಷಲಕ್ಷ ಆಂದೋಲನ ತಜ್ಞರ ಭೇಟಿ


Team Udayavani, Jun 1, 2018, 4:23 PM IST

bell-2.jpg

ಸಾಗರ: ಜನತೆಗೆ ಸರಿಯಾದ ಮಾಹಿತಿ ನೀಡಿಲ್ಲ. ಪ್ರವಾಸೋದ್ಯಮ ಇಲಾಖೆ ಯೋಜನೆ ರೂಪಿಸುವಾಗ ಸ್ಥಳೀಯ ಗ್ರಾಪಂ ಸಂಬಂಧಿತ ಹಳ್ಳಿಗಳ ಜನರ ಜೊತೆ ಮಾತುಕತೆ ನಡೆಸಿಲ್ಲ. ಶರಾವತಿ ಲಿಂಗನಮಕ್ಕಿ ಯೋಜನೆಗಳಿಂದ ನಿರಾಶ್ರಿತರಾದ ರೈತರು ಇಲ್ಲಿದ್ದಾರೆ. ಪಕ್ಕದಲ್ಲಿ ಶರಾವತಿ ಅಭಯಾರಣ್ಯವಿದೆ. ನದಿಯ ಎರಡೂ ದಂಡೆಗಳಲ್ಲಿ ಅರಣ್ಯ ಭೂಮಿ ಇದೆ. ಅರಣ್ಯ, ಪರಿಸರ ಪರವಾನಗಿ ಇಲ್ಲದೇ ಯೋಜನೆ ಜಾರಿ ಮಾಡಿದರೆ ಅದು ಅಕ್ರಮ ಯೋಜನೆ ಆಗುತ್ತದೆ. ನದಿಯ ಎರಡೂ ದಂಡೆಗೆ ಗೋಡೆ ಕಟ್ಟುವ ಪ್ರಸ್ತಾವನೆ ಮೂರ್ಖತನದ್ದು ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ಜೋಗ ಜಲಪಾತದ ಬಳಿಯ ಜೋಗಿಮಠ ಎಂಬಲ್ಲಿನ ಪ್ರಸ್ತಾಪಿತ ಸೀತಾಕಟ್ಟೆ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೃಕ್ಷಲಕ್ಷ ತಜ್ಞರ ತಂಡದ ನೇತೃತ್ವ ವಹಿಸಿ ವರ್ಷವಿಡೀ ಜೋಗ ಜಲಪಾತ ನೋಡಲು ಅನುಕೂಲವಾಗುವ ಅಣೆಕಟ್ಟು ನಿರ್ಮಿಸುವ ಖಾಸಗಿ ಕಂಪನಿಯ ಯೋಜನೆಯ ಪರಿಸರ ದುಷ್ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿದ ನಂತರ ಅವರು ಮಾತನಾಡಿದರು. 

ಜೋಗ ಅಭಿವೃದ್ಧಿ ಪ್ರಾಧಿಕಾರ ಪ್ರವಾಸೋದ್ಯಮ ಅಭಿವೃದ್ಧಿ ಹೆಸರಲ್ಲಿ ಜೋಗ ಜಲಪಾತ ನೈಸರ್ಗಿಕ ಪರಿಸ್ಥಿತಿಗೆ ಅಡ್ಡಿಪಡಿಸುವ ಕಾರ್ಯಕ್ಕೆ ಮುಂದಾಗಬಾರದು. ಜಲಪಾತದ ಮೇಲ್ಭಾಗದಲ್ಲಿ ಅಣೆಕಟ್ಟು, ಗೋಡೆ ನಿರ್ಮಾಣ, ಪೈಪ್‌ಲೈನ್‌ ನಿರ್ಮಾಣ, ವಿದ್ಯುತ್‌ ತಂತಿ ಮಾರ್ಗ ಇತ್ಯಾದಿ ಕಾಮಗಾರಿ ಸಲ್ಲದು. ಅರಣ್ಯ ನಾಶ, ತೀವ್ರ ಮಾನವ ಹಸ್ತಕ್ಷೇಪಕ್ಕೆ ಸರ್ಕಾರ ಮುಂದಾಗಬಾರದು.

ಬದಲಾಗಿ ಜೋಗ ಜಲಪಾತಕ್ಕೆ ನದಿಗೆ ಇನ್ನೂ ಹೆಚ್ಚು ನೀರು ಹರಿದು ಬರಲು ಶರಾವತಿ ಕಣಿವೆ ರಕ್ಷಣೆಗೆ, ಜಲಾಯನ ಅಭಿವೃದ್ಧಿಗೆ ಸರ್ಕಾರ, ಜೋಗ ಪ್ರಾಧಿಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ನಿಯೋಗದಲ್ಲಿ ಡಾ| ಟಿ.ವಿ. ರಾಮಚಂದ್ರ, ಡಾ| ಕೇಶವ ಕೊರ್ಸೆ, ಡಾ| ಸುಭಾಸ್‌ ಚಂದ್ರನ್‌, ವೆಂಕಟೇಶ ಕೆ. ಮತ್ತಿತರರು ಇದ್ದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.