ಲಾಕ್‌ಡೌನ್‌ಗೆ ಸ್ವಯಂ ಪ್ರೇರಿತ ಬೆಂಬಲ


Team Udayavani, Mar 30, 2020, 12:14 PM IST

cm-tdy-01

ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು: ಕೋವಿಡ್ 19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಮನೆಯಿಂದ ಹೊರಬರದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕಾಫಿ ನಾಡಿನ ಜನರು ಸ್ವಯಂ ಪ್ರೇರಿತವಾಗಿ ಲಾಕ್‌ಡೌನ್‌ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಭಾನುವಾರದ ದಿನ ಪ್ರವಾಸಿಗರಿಂದ ಗಿಜುಗುಡುತ್ತಿದ್ದ ಎಂ.ಜಿ. ರಸ್ತೆ, ಐ.ಜಿ. ರಸ್ತೆ, ಮಾರ್ಕೆಟ್‌ ರಸ್ತೆ, ಹನುಮಂತಪ್ಪ ವೃತ್ತ, ಆಜಾದ್‌ ಪಾರ್ಕ್‌ ವೃತ್ತ, ಕೆಎಸ್‌ ಆರ್‌ಟಿಸಿ ಬಸ್‌ ನಿಲ್ದಾಣ, ಎಐಟಿ ಕಾಲೇಜು ವೃತ್ತಗಳಲ್ಲಿ ಜನಸಂಚಾರವಿಲ್ಲದೆ ಸ್ಮಶಾನ ಮೌನ ಆವರಿಸಿದೆ.

ಎಂದಿನಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲಾಗಿದ್ದು, ಎಲ್ಲೋ ಬೆರಳೆಣಿಕೆಯಷ್ಟು ಜನರು ಬೈಕ್‌, ಕಾರುಗಳಲ್ಲಿ ತೆರಳಿ ವಸ್ತುಗಳನ್ನು ಖರೀದಿಸಿದರು. ಮಾಂಸ, ಮೀನು ಮಾರ್ಕೆಟ್‌ನಲ್ಲಿ ಬೆಳಗ್ಗೆ ಒಂದಷ್ಟು ಜನರು ಹೊರತುಪಡಿಸಿದರೆ ಉಳಿದಂತೆ ಗ್ರಾಹಕರಿಲ್ಲದಿರುವುದು ಕಂಡು ಬಂದಿತು. ಹೆಚ್ಚಿನ ಗ್ರಾಹಕರು ಮೀನು ಮಾರ್ಕೆಟ್‌ಗೆ ಧಾವಿಸಿದರು. ಅವರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿತು.

ದಿನಸಿ ಅಂಗಡಿ, ಹಣ್ಣಿನ ಅಂಗಡಿ, ತರಕಾರಿ ಅಂಗಡಿ, ಪೆಟ್ರೋಲ್‌ ಬಂಕ್‌, ಎಟಿಎಂ, ಕೃಷಿ, ಔಷಧ ಅಂಗಡಿಗಳು, ಮೆಡಿಕಲ್‌ ಶಾಪ್‌ಗ್ಳು ಎಂದಿನಂತೆ ತೆರೆದಿದ್ದವು. ಗ್ರಾಹಕರ ಸಂಖ್ಯೆ ವಿರಳವಾಗಿತ್ತು. ಸರಕು ಸಾಗಣೆ ವಾಹನಗಳ ಸಂಚಾರ ಎಂದಿನಂತೆ ಇತ್ತು. ಗ್ರಾಮೀಣ ಪ್ರದೇಶದ ರೈತರು ಬೆಳಗ್ಗೆಯೇ ಕೃಷಿ ಉತ್ಪನ್ನ ಮಾರುಕಟ್ಟೆಗೆ ಆಗಮಿಸಿ ತಾವು ತಂದ ತರಕಾರಿಯನ್ನು ಮಾರಿ ಬೇಗ ಮನೆ ಸೇರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ರಾಜ್ಯದಲ್ಲಿ ಕೋವಿಡ್ 19  ವೈರಸ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನಸಂಚಾರಕ್ಕೆ ಕಡಿವಾಣ ಹಾಕಲು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು ಚೆಕ್‌ಪೋಸ್ಟ್‌ಗಳಲ್ಲಿ ಅನಗತ್ಯವಾಗಿ ತಿರುಗಾಡುತ್ತಿದ್ದ ವಾಹನ ಸವಾರರನ್ನು ತಡೆದು ವಿಚಾರಿಸಿ ಬಿಡುತ್ತಿದ್ದ ದೃಶ್ಯಗಳು ಕಂಡು ಬಂದವು. ಅಗತ್ಯ ವಸ್ತುಗಳಿಗೆ ಜನರು ಮನೆಯಿಂದ ಹೊರಬರುವುದನ್ನು ತಪ್ಪಿಸುವ ಉದ್ದೇಶದಿಂದ ಕೆಲ ಸಂಘ-ಸಂಸ್ಥೆ ಕಾರ್ಯಕರ್ತರು ಹಾಗೂ ಪೊಲೀಸ್‌ ಇಲಾಖೆ ಸಿಬ್ಬಂದಿ ನಗರದ ಕೆಲ ಬಡಾವಣೆಗಳಲ್ಲಿ ಅಗತ್ಯ ವಸ್ತುಗಳನ್ನು ಪೂರೈಸುವ ಕೆಲಸವನ್ನು ಭಾನುವಾರ ಕೂಡ ಮುಂದುವರಿಸಿದರು.

ಇದು ನಗರ ಪ್ರದೇಶದ ಚಿತ್ರಣವಾದರೆ ಗ್ರಾಮೀಣ ಪ್ರದೇಶದ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಪಟ್ಟಣ ಪ್ರದೇಶಗಳಿಗೆ ಬಂದು ತಮ್ಮ ಊರುಗಳಿಗೆ ವಾಪಸಾಗುತ್ತಿದ್ದು, ಮನೆ ಮಂದಿಯೊಂದಿಗೆ ಹಾಗೂ ಗ್ರಾಮದ ಕಟ್ಟೆಗಳ ಮೇಲೆ ಕುಳಿತು ದಿನವೆಲ್ಲ ಕೋವಿಡ್ 19 ಬಗ್ಗೆಯೇ ಚರ್ಚೆಗಳು ನಡೆಯುತ್ತಿವೆ.

ಬಿಸಿಲಿನ ತಾಪಕ್ಕೆ ಹೈರಾಣಾದ ಪೊಲೀಸರು : ಕಳೆದ ಭಾನುವಾರದಿಂದ ಜನತಾ ಕರ್ಫ್ಯೂದಿಂದ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿ ಹೈರಾಣಾಗಿದ್ದಾರೆ. ಭಾನುವಾರ ನಗರದಲ್ಲಿ ಜನಸಂಚಾರ ಬಹಳಷ್ಟು ಕ್ಷೀಣಿಸಿದ್ದು ಚೆಕ್‌ಪೋಸ್ಟ್‌ಗಳಲ್ಲಿ ಪ್ರಮುಖ ವೃತ್ತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಸುಡುವ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನೆರಳಿನ ಆಶ್ರಯ ಪಡೆದುಕೊಂಡಿದ್ದ ದೃಶ್ಯಗಳು ಕಂಡು ಬಂದವು.

ಕೋವಿಡ್ 19  ಭೀತಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ರೈತರ ಸಂಖ್ಯೆ ಗಣನೀಯವಾಗಿ ಕ್ಷೀಣಿಸಿದೆ. ಮಾರುಕಟ್ಟೆಗೆ ಬೆಳಗ್ಗೆ ಬಂದು ವ್ಯಾಪಾರ ವಹಿವಾಟು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾರೆ. ವ್ಯಾಪಾರ ನಡೆಸುವಾಗಲು ಅಂತರ ಕಾಪಾಡಿಕೊಂಡು ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ. ಸರಕು ಸಾಗಣೆ ಲಾರಿಗಳ ಸಂಚಾರಕ್ಕೆ ಅವಕಾಶ ನೀಡಿರುವುದು ಅನುಕೂಲವಾಗಿದೆ.  –ಜಯಪ್ರಕಾಶ್‌, ವರ್ತಕ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.