ಗಡ್ಕರಿ ಭೇಟಿ: ರಸ್ತೆಗಳ ಅಭಿವೃದ್ದಿಗೆ ಸಂಸದೆ ಶೋಭಾ ಮನವಿ
Team Udayavani, Jul 2, 2019, 12:33 PM IST
ಹೊಸದಿಲ್ಲಿ : ಸಂಸದೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಕೇಂದ್ರ ಭೂ ಸಾರಿಗೆ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಕೆಲವು ರಸ್ತೆಗಳ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಿದರು.
ಉಡುಪಿಯ ಕರಾವಳಿ ಬೈಪಾಸ್-ಮಲ್ಪೆ ರಸ್ತೆ ಅಗಲೀಕರಣ, ಪರ್ಕಳದಿಂದ ತೀರ್ಥಹಳ್ಳಿಯ ವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿ, ಶೃಂಗೇರಿ- ಬಾಳೆಹೊನ್ನೂರು-ಅಲ್ದೂರು-ನಾಡಿಪುರ ರಸ್ತೆ ಅಭಿವೃದ್ಧಿ, ತೀರ್ಥಹಳ್ಳಿಯಿಂದ- ನೆಮ್ಮಾ ರ್ ವರೆಗೆ ರಸ್ತೆ ಅಭಿವೃದ್ಧಿ, ಬೇಲೂರು-ಚಿಕ್ಕಮಗಳೂರು (ಮೂಡಿಗೆರೆ-ಕಡೂರು ರಸ್ತೆ) ನಗರಕ್ಕೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಮತ್ತು ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಇನ್ನಿತರ ಸಮಸ್ಯೆಗಳ ಕುರಿತು ಮಾನ್ಯ ಕೇಂದ್ರ ಸಚಿವರ ಗಮನಕ್ಕೆ ತಂದು, ರಾಷ್ಟ್ರೀಯ ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ