ಶೃಂಗೇರಿ ಶಾರದಾಂಭೆ ದೇಗುಲದಲ್ಲೂ ಸದ್ಯಕ್ಕೆ ಭಕ್ತರಿಗೆ ದರ್ಶನ ಭಾಗ್ಯವಿಲ್ಲ!
Team Udayavani, Jun 6, 2020, 12:53 PM IST
ಚಿಕ್ಕಮಗಳೂರು: ಕೋವಿಡ್-19 ಲಾಕ್ ಡೌನ್ ಕಾರಣ ದೇಗುಲಗಳಲ್ಲಿ ಭಕ್ತರ ದರ್ಶನಕ್ಕೆ ಹೇರಿದ್ದ ನಿರ್ಬಂಧವನ್ನು ಸಡಿಲಿಸಲು ಸರಕಾರ ಅವಕಾಶ ನೀಡಿದ್ದು, ಜೂನ್ 8ರ ನಂತರ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದಿದೆ. ಆದರೆ ಭಕ್ತರ ಸುರಕ್ಷತೆಯ ದೃಷ್ಠಿಯಿಂದ ಶೃಂಗೇರಿ ಶಾರದಾಂಬೆ ದೇವಸ್ಥಾನದಲ್ಲಿ ಇನ್ನೂ ಸ್ವಲ್ಪ ಕಾಲ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುವುದಿಲ್ಲ ಎನ್ನಲಾಗಿದೆ.
ಪ್ರಸಿದ್ಧ ಶೃಂಗೇರಿ ದೇವಾಲಯಕ್ಕೆ ಕರ್ನಾಟಕ ಮಾತ್ರವಲ್ಲದೆ ಕೇರಳ, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಂದಲೂ ಭಕ್ತರೂ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಸದ್ಯ ಕೋವಿಡ್-19 ಸಮಸ್ಯೆ ಇರುವ ಕಾರಣ ಅನ್ಯ ರಾಜ್ಯಗಳಿಂದ ಭಕ್ತರು ಬಂದರೆ ನಿಯಂತ್ರಣ ಮಾಡುವುದು ಕಷ್ಟವಾಗಲಿದೆ. ಹೀಗಾಗಿ ಸದ್ಯ ದೇವಸ್ಥಾನ ತೆರೆಯದೇ ಇರಲು ದೇವಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.
ಇದೇ ಪ್ರಕಾರ ಜಿಲ್ಲೆಯ ಮತ್ತೊಂದು ಪ್ರಸಿದ್ಧ ಹೊರನಾಡು ದೇವಸ್ಥಾನದಲ್ಲೂ ಇದೇ ರೀತಿ ನಿರ್ಣಯ ಮಾಡಲಾಗಿದೆ. ಅಲ್ಲೂ ಸದ್ಯಕ್ಕೆ ದೇವಿ ದರ್ಶನ ಪಡೆಯಲು ಅವಕಾಶ ಇಲ್ಲ ಎನ್ನಲಾಗಿದೆ.
ಸಾಮಾನ್ಯವಾಗಿ ಜಿಲ್ಲೆಗೆ ಬರುವ ಭಕ್ತರು ಎರಡೂ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಸದ್ಯ ಕೋವಿಡ್-19 ಸೋಂಕು ಸಂಕಷ್ಟದ ಸಮಯದಲ್ಲಿ ಇನ್ನಷ್ಟು ಮುಂಜಾಗೃತಾ ಕ್ರಮವಾಗಿ ಎರಡೂ ದೇವಸ್ಥಾನಗಳಲ್ಲಿ ಈ ನಿರ್ಣಯ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ