ಸಿದ್ಧ ಗಂಗಾ ಶ್ರೀಗಳ ತತ್ವಾದರ್ಶ ಮಾದರಿ
ಸಿದ್ಧಗಂಗಾ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ ಸೋಮಶೇಖರ್ ಅಭಿಮತ
Team Udayavani, Jan 22, 2021, 6:13 PM IST
ಚಿಕ್ಕಮಗಳೂರು: ಅನ್ನ ದಾಸೋಹ ಮತ್ತು ಜ್ಞಾನ ದಾಸೋಹದ ಮೂಲಕ ತಮ್ಮನ್ನು ಬಸವತತ್ವ ಸಿದ್ಧಾಂತದಲ್ಲಿ ತೊಡಗಿಸಿಕೊಂಡ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ ತತ್ವ, ಆದರ್ಶ, ಚಿಂತನೆ ನಮ್ಮೆಲ್ಲರಿಗೂ ಮಾದರಿ ಎಂದು ಜಿಪಂ ಉಪಾಧ್ಯಕ್ಷ ಬಿ.ಜಿ. ಸೋಮಶೇಖರ್ ಹೇಳಿದರು.
ಗುರುವಾರ ನಗರದ ಎ.ಐಟಿ ವೃತ್ತದ ತರಳುಬಾಳು ಭವನದ ಆವರಣದಲ್ಲಿ ಆಯೋಜಿಸಿದ್ದ ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರ 2ನೇವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ನಾಡಿನಲ್ಲಿ ಲಕ್ಷಾಂತರ ಜನರಿಗೆ ಮಠದಲ್ಲಿ ನಿರಂತರವಾಗಿಅನ್ನದಾಸೋಹ, ಜ್ಞಾನ ದಾಸೋಹದ ಮೂಲಕ ನಾಡಿನ ಸಮೃದ್ಧಿಗಾಗಿ ಶ್ರಮಿಸಿದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬದುಕು ನಮ್ಮೆಲ್ಲರಿಗೂಆದರ್ಶ. ಬಸವಣ್ಣನವರ ತತ್ವ, ಚಿಂತನೆಗಳನ್ನು ಪರಿಪಾಲಿಸುವ ಮೂಲಕ ಜಾತಿ, ಧರ್ಮ, ಬೇಧವಿಲ್ಲದೇ ಎಲ್ಲಾ ವರ್ಗದ ಮಕ್ಕಳಿಗೂ ಉಚಿತವಾಗಿ ಶಿಕ್ಷಣ ನೀಡುವ ಮೂಲಕ ನಾಡಿಗೆ ಮಾದರಿಯಾದವರು ಎಂದರು.
ಇದನ್ನೂ ಓದಿ : ಬಿಎಸ್ವೈ ಕೊಟ್ಟ ಮಾತು ಹುಸಿಯಾಗದಿರಲಿ
ನಿರಂತವಾಗಿ ಸಮಾಜ ಸೇವೆಯ ಮೂಲಕ ತಮ್ಮನ್ನು ತಾವು ಗುರುತಿಸಿಕೊಂಡಿರುವ ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಕೇಂದ್ರ ಸರ್ಕಾರವು ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು.
ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಎಚ್. ದೇವರಾಜ್ಮಾತನಾಡಿ, ಮಾನವೀಯತೆ ನೆಲೆಗಟ್ಟಿನಲ್ಲಿ ಶ್ರೀಮಠದಲ್ಲಿ ಎಲ್ಲಾ ವರ್ಗದವರನ್ನು ಸಮಾನತೆಯಿಂದ ಕಂಡ ಅಪರೂಪದ ಸ್ವಾಮೀಜಿಗಳಲ್ಲಿ ಸಿದ್ಧಗಂಗಾ ಶ್ರೀಗಳು ಕೂಡ ಒಬ್ಬರು ಎಂದರು.
ನಗರಸಭೆ ಮಾಜಿ ಅಧ್ಯಕ್ಷ ಎಚ್.ಡಿ. ತಮ್ಮಯ್ಯ ಮಾತನಾಡಿ, 12ನೇ ಶತಮಾನದ ಬಸವಣ್ಣನವರ ವಚನಗಳ ರೂಪವನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದ ಶ್ರೀಗಳು ಸದಾಕಾಲ ಅಜರಾಮರ ಎಂದ ಅವರು, ನಗರದ ಹಿರೇಮಗಳೂರಿನಿಂದ ಎ.ಐ.ಟಿ ವೃತ್ತದವರೆಗೆ ರೂ.28ಕೋಟಿ ವೆಚ್ಚದಲ್ಲಿ ನಾಲ್ಕುಪಥದ ರಸ್ತೆ ನಿರ್ಮಾಣವಾಗಲಿದ್ದು ಮುಂದಿನ ದಿನಗಳಲ್ಲಿ ಆ ರಸ್ತೆಗೆ ಸಿದ್ಧªಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಹೆಸರಿಸಡಲು ನಿರ್ಧರಿಸಲಾಗಿದ್ದು ಈ ಬಗ್ಗೆ ನಗರಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದರು.
ಬೀಕನಹಳ್ಳಿ ಗ್ರಾಪಂ ಸದಸ್ಯ ಮಂಜೇಗೌಡ ಮಾತನಾಡಿ, ರಾಜ್ಯದ ಸಮೃದ್ಧಿಗಾಗಿ ನಿರಂತರ ಧ್ಯಾನ, ಆಧ್ಯಾತ್ಮದ ಮೂಲಕ ಪ್ರಾರ್ಥಿಸಿದ ಶ್ರೀಗಳು ಸದಾ ಕಾಲ ನಮ್ಮೆಲ್ಲರ ಮನದಲ್ಲಿ ನೆಲೆಸಿದ್ದಾರೆ ಎಂದರು. ಸಾಹಿತಿ ಹಾಗೂ ಉಪನ್ಯಾಸಕ ತಿಪ್ಪೇರುದ್ರಪ್ಪ ಮಾತನಾಡಿದರು. ತಾಪಂ ಮಾಜಿ ಅಧ್ಯಕ್ಷ ಬಸವರಾಜ್, ರಾಜಶೇಖರ್, ಡಾ| ಮುರಳೀಧರ್, ಮಂಜುನಾಥ್, ಚಂದ್ರಪ, ರಾಜಣ್ಣಇದ್ದರು. ಭಾರತಿ ಶಿವರುದ್ರಪ್ಪ ಸ್ವಾಗತಿಸಿದರು. ಭರತ್ ನಿರೂಪಿಸಿದರು.
ಇದನ್ನೂ ಓದಿ : ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ: ಡಾ.ಕೆ.ಸುಧಾಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ