ವಿದೇಶಿ ಭಾಷೆಗಳಿಗೂ ಸಿದ್ಧಾಂತ ಶಿಖಾಮಣಿ ಅನುವಾದ: ಕಾಶಿ ಶ್ರೀ
Team Udayavani, Jan 13, 2019, 12:55 AM IST
ಚಿಕ್ಕಮಗಳೂರು: ವೀರಶೈವ ಧರ್ಮದ ಪ್ರಮುಖ ಗ್ರಂಥವಾದ ಸಿದ್ಧಾಂತ ಶಿಖಾಮಣಿಯನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದ ಮಾಡಲಾಗುವುದು ಎಂದು ಕಾಶಿ ಜಂಗಮವಾಡಿ ಮಠಾಧೀಶ ಜಗದ್ಗುರು ಡಾ|ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ನಡೆದ ಧರ್ಮಸಮ್ಮೇಳನದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಸಿದ್ಧಾಂತ ಶಿಖಾಮಣಿ ಗ್ರಂಥವನ್ನು ಈಗಾಗಲೇ ಕನ್ನಡ, ತೆಲುಗು, ಮರಾಠಿ, ಮಲಯಾಳಂ, ಇಂಗ್ಲಿಷ್ ಸೇರಿ 18 ಭಾಷೆಗಳಿಗೆ ಅನುವಾದಿಸಲಾಗಿದೆ. ಇನ್ನು ಒಂದು ವರ್ಷದೊಳಗೆ ಎಲ್ಲಾ ವಿದೇಶಿ ಭಾಷೆಗಳಿಗೂ ಅನುವಾದಿಸಲು ಉದ್ದೇಶಿಸಲಾಗಿದೆ. ಅಲ್ಲದೆ, ಸಿದ್ಧಾಂತ ಶಿಖಾಮಣಿಯ ಆ್ಯಪ್ ಮತ್ತು ಅದರ ಪಾರಾಯಣದ ಧ್ವನಿ ಮುದ್ರಿಕೆಯನ್ನೂ ಹೊರ ತಂದು ವೆಬ್ಸೈಟ್ನಲ್ಲಿ ಹಾಕಲಾಗುವುದು. ಪ್ರಧಾನಮಂತ್ರಿ ನರೇಂದ್ರ ಮೋದಿಯವರರಿಂದ ಆ್ಯಪ್, ಧ್ವನಿಮುದ್ರಿಕೆ ಬಿಡುಗಡೆ ಮಾಡಿಸಲಾಗುವುದು ಎಂದರು.
ಇದರಿಂದಾಗಿ ಭಕ್ತರು ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಉಚಿತವಾಗಿ ತಮ್ಮ ಮೊಬೈಲ್ನಲ್ಲೇ ಸಿದ್ಧಾಂತ ಶಿಖಾಮಣಿ ಓದಬಹುದು ಅಥವಾ ಕೇಳಬಹುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್