Snake: ಹಾವು ಕಚ್ಚಿದ್ರು ಮುಳ್ಳು ಚುಚ್ಚಿದೆ ಎಂದು ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತ್ಯು
Team Udayavani, May 27, 2024, 1:25 PM IST
ಚಿಕ್ಕಮಗಳೂರು: ಹಾವು ಕಚ್ಚಿದ್ದರೂ ಮುಳ್ಳು ಚುಚ್ಚಿದೆ ಎಂದು ಹೇಳಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತಪಟ್ಟ ವಿಚಿತ್ರ ಘಟನೆಯೊಂದು ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕರಕುಚ್ಚಿ ಗ್ರಾಮದ ಗಂಗಪ್ಪ (48) ಮೃತ ದುರ್ದೈವಿಯಾಗಿದ್ದಾರೆ.
ಗಂಗಪ್ಪ ಅವರು ಗದ್ದೆಗೆ ಕೆಲಸಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ ಆದರೆ ಇದರ ಅರಿವಾಗದ ಗಂಗಪ್ಪ ಮನೆಗೆ ಬಂದಿದ್ದಾರೆ ಈ ವೇಳೆ ಗಂಗಪ್ಪ ಅವರ ಕಾಲಿನಲ್ಲಿ ಗಾಯದ ಕಲೆಗಳನ್ನು ಕಂಡು ಮನೆಮಂದಿ ಕೇಳಿದಾಗ ಮುಳ್ಳು ಚುಚ್ಚಿ ಗಾಯವಾಗಿರಬೇಕು ಎಂದು ಹೇಳಿ ಊಟ ಮಾಡಿ ಮಲಗಿದ್ದಾರೆ, ಆದರೆ ಬೆಳಿಗ್ಗೆ ಮನೆಮಂದಿ ಎದ್ದು ಗಂಗಪ್ಪ ಅವರನ್ನು ಎಬ್ಬಿಸಿದರೆ ಏಳಲೇ ಇಲ್ಲ ಬಳಿಕ ಪರಿಶೀಲಿಸಿದಾಗ ಗಂಗಪ್ಪ ಅವರ ಕಾಲಿಗೆ ಮುಳ್ಳಿನ ಗಾಯವಾಗಿರುವುದಲ್ಲ ಬದಲಿಗೆ ಕಾವು ಕಚ್ಚಿ ಗಾಯವಾಗಿರುವುದು ಬೆಳಕಿಗೆ ಬಂದಿದೆ ಆದರೆ ಅಷ್ಟೋತ್ತಿಗಾಗಲೇ ಗಂಗಪ್ಪ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು.
ಘಟನೆ ಸಂಬಂಧ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Shivamogga: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
BJP vs BJP; ಶಾಸಕ ಬಿ.ಪಿ. ಹರೀಶ್ ವಿರುದ್ಧ ಕಿಡಿ ಕಾರಿದ ರೇಣುಕಾಚಾರ್ಯ
ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ
ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ
MUST WATCH
ಹೊಸ ಸೇರ್ಪಡೆ
Allu Arjun ‘ಪುಷ್ಪ 2 ದಿ ರೂಲ್’ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರ ತಂಡ
Bihar; ಮುಸ್ಲಿಂ ಮತ್ತು ಯಾದವರ ಕೆಲಸ ಮಾಡುವುದಿಲ್ಲ: ಜೆಡಿಯು ಸಂಸದ
Poll debut; ವಯನಾಡು ಕ್ಷೇತ್ರ ತಂಗಿಗೆ ಬಿಟ್ಟುಕೊಟ್ಟ ರಾಹುಲ್: ನಾಳೆ ರಾಜೀನಾಮೆ
Bantwal ಸ್ನೇಹಿತರಿಬ್ಬರ ದ್ವೇಷ; ಅಮಾಯಕ ಯುವಕನ ಬೈಕ್ ಭಸ್ಮ
Dharwad; ನೇಚರ್ ವ್ಯೂ ಫೋಟೋಗ್ರಫಿ, ರೀಲ್ಸ್ ಗೆ 16 ರ ಬಾಲಕರಿಬ್ಬರು ಬಲಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.