Snake; ಬೆಕ್ಕಿನ ಮರಿ ನುಂಗಿ ಪರದಾಡಿದ ನಾಗರಹಾವಿನ ರಕ್ಷಣೆ


Team Udayavani, Apr 9, 2024, 8:35 PM IST

1-wwwdsdsa

ಕೊಟ್ಟಿಗೆಹಾರ: ಯುಗಾದಿ ಹಬ್ಬದ ದಿನದಂದೇ ಮನೆಗೆ ಬಂದ ನಾಗರಹಾವು ಮನೆಯಲ್ಲಿದ್ದ ಬೆಕ್ಕಿನ ಮರಿಯನ್ನ ನುಂಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತರುವೆ ಗ್ರಾಮದಲ್ಲಿ ನಡೆದಿದೆ.

ತರುವೆ ಗ್ರಾಮದ ದೀಕ್ಷಿತ್ ಎಂಬುವರ ಮನೆಗೆ ಬಂದ ನಾಗರಹಾವು ನೇರವಾಗಿ ಮಂಚದ ಕೆಳ ಭಾಗಕ್ಕೆ ಸೇರಿದೆ. ಮನೆಯಲ್ಲಿದ್ದವರು ಹಬ್ಬದ ಸಂಭ್ರಮದಲ್ಲಿದ್ದ ಕಾರಣ ಯಾರು ಅಷ್ಟಾಗಿ ಗಮನಿಸಿಲ್ಲ. ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು ಹೊರ ಬಂದು ಮುಂದಕ್ಕೆ ಸಂಚರಿಸಲಾಗದೆ ಪರದಾಡುತ್ತಿತ್ತು. ಹಾವನ್ನು ಕಂಡು ಮನೆಯವರು ಕೂಗಾಡುತ್ತಿದ್ದಂತೆ ಮರಳಿ ಮನೆಯ ಒಳಗೆ ಹೋಗಲು ಪ್ರಯತ್ನಿಸಿದೆ.

ಮನೆಯವರು ಕೂಡಲೇ ಬಾಗಿಲು ಹಾಕಿದ್ದಾರೆ. ಸ್ಥಳಕ್ಕೆ ಬಂದ ಉರಗತಜ್ಞ ಸ್ನೇಕ್ ಆರೀಫ್ ಬೆಕ್ಕಿನ ಮರಿ ನುಂಗಿದ್ದರಿಂದ ಸುಸ್ತಾಗಿ ಸಂಚರಿಸಲಾಗದೆ ಪರದಾಡುತ್ತಿದ್ದ ಹಾವನ್ನ ಸೆರೆಹಿಡಿದು ನುಂಗಿದ್ದ ಬೆಕ್ಕಿನ ಮರಿಯನ್ನು ಹಾವಿನ ಹೊಟ್ಟೆಯಿಂದ ಕಕ್ಕಿಸಿದ್ದಾರೆ.

ನಾಗರಹಾವು ಬೆಕ್ಕಿನ ಮರಿಯನ್ನ ಹೊರ ಹಾಕುತ್ತಿದ್ದಂತೆ ತಪ್ಪಿಸಿಕೊಳ್ಳಲು ಯತ್ನಿಸಿ, ಮನೆಯ ಮುಂದೆ ಇದ್ದ ಸೌದೆ ಅಡಿ ಸೇರಿಕೊಳ್ಳಲು ಮುಂದಾಗಿತ್ತು. ಸ್ನೇಕ್ ಆರೀಫ್ ಹಾವನ್ನ ಸೆರೆ ಹಿಡಿದು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಹಾವನ್ನು ಹಿಡಿದ ಬಳಿಕ ಬೆದರಿದ್ದ ಮನೆಯವರು ಹಾಗೂ ಅಕ್ಕ-ಪಕ್ಕದವರು ನಿಟ್ಟುಸಿರು ಬಿಟ್ಟಿದ್ದಾರೆ.

ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು ಕಾಡು ಪ್ರಾಣಿಗಳು ಆಹಾರ ಹರಿಸಿ ನಾಡಿಗೆ ಬರುತ್ತಿವೆ. ಈಗಾಗಲೇ ಮಲೆನಾಡಿನದ್ಯಂತ ಆನೆ, ಹುಲಿ, ಚಿರತೆ ಹಾಗೂ ಕಾಡುಕೋಣದ ಹಾವಳಿ ಮಿತಿಮೀರಿದೆ. ಬಿಸಿಲಿನ ತಾಪಕ್ಕೆ ಭೂಮಿಯ ಒಳಭಾಗದಲ್ಲೂ ಬಿಸಿ ಹೆಚ್ಚಾಗಿ ಅರಣ್ಯದಲ್ಲಿ ಸಮರ್ಪಕವಾಗಿ ಕುಡಿಯಲು ನೀರು ಹಾಗೂ ಆಹಾರ ಸಿಗದ ಕಾರಣ ನಾಗರಹಾವು ಸೇರಿದಂತೆ ಕಾಳಿಂಗ ಸರ್ಪಗಳು ಗ್ರಾಮಗಳತ್ತ ಬರುತ್ತಿವೆ. ಶೀಘ್ರವೇ ಮಳೆಯಾಗದಿದ್ದರೆ ಮತ್ತಷ್ಟು ಕಾಡುಪ್ರಾಣಿಗಳ ಹಾವಳಿ ಹೆಚ್ಚಾದರೂ ಆಶ್ಚರ್ಯವಿಲ್ಲ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.