ಶೃಂಗೇರಿ ಶ್ರೀ ಚಾತುರ್ಮಾಸ್ಯ: ಕರಾಡ ಸಮಾಜ ಭೇಟಿ


Team Udayavani, Jul 23, 2017, 6:40 AM IST

22ksde3.gif

ಕಾಸರಗೋಡು: ವ್ಯಕ್ತಿ ಯಾವುದೇ ಧರ್ಮದಲ್ಲಿದ್ದರೂ ಧರ್ಮಾಚರಣೆ ಬಿಡಬಾರದು. ಧರ್ಮಾಚರಣೆ ಮಾಡಿದವರು ಜೀವನದಲ್ಲಿ ಶ್ರೇಯಸ್ಸು ಪಡೆಯಲು ಸಾಧ್ಯ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾ ಸ್ವಾಮಿಗಳು ಹೇಳಿದರು.

ಶೃಂಗೇರಿ ಮಠದಲ್ಲಿ ನಡೆಯುವ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮತ್ತು ತತ್ಕರಕಮಲ ಸಂಜಾತ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರ ಚಾತುರ್ಮಾಸ್ಯ ಪ್ರಯುಕ್ತ ಕರಾಡ ಬ್ರಾಹ್ಮಣ ಸಮಾಜ ಶೃಂಗೇರಿ ಸಂಪರ್ಕ ಸಮಿತಿ ವತಿಯಿಂದ ನಡೆದ ಗುರುದರ್ಶನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಧರ್ಮಾಚರಣೆಗೆ ಸಾಕಷ್ಟು ಅವಕಾಶಗಳಿವೆ
ಪ್ರತಿಯೊಬ್ಬರಿಗೂ ಧರ್ಮಾಚರಣೆಗೆ ಬೇಕಾದ ಸಾಕಷ್ಟು ಅವಕಾಶಗಳಿವೆ. ಆದರೆ ಅದನ್ನು ಸದುಪ ಯೋಗಪಡಿಸಿಕೊಳ್ಳುವ ಗುಣ ಹೊಂದಿರ ಬೇಕು. ಧರ್ಮದ ಆಚರಣೆ ಜೀವನದ ಪರಮಾರ್ಥ ವಾಗಬೇಕು. ಈ ಮೂಲಕ ಮನುಷ್ಯ ಜನ್ಮವನ್ನು ಸಾರ್ಥಕವಾಗಿಸಬೇಕು. ಅಲ್ಲದೆ ಧರ್ಮಾಚರಣೆ ಮಾಡುವ ಮೂಲಕ ಅಧರ್ಮದ ಕಡೆಗೆ ಹೋಗದಂತೆ ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕು ಎಂದರು.

ಶಿಷ್ಯರಾದವರಿಗೆ ಗುರು ಸೇವೆ ಎಂಬುದು, ಗುರು ಗಳಾದವರಿಗೆ ಶಿಷ್ಯರನ್ನು ಹರಸುವುದು ಬಹುದೊಡ್ಡ ಕರ್ತವ್ಯ. ಗುರುಗಳು ಯಾವತ್ತೂ ಶಿಷ್ಯರ ಹಿತವನ್ನು ಬಯಸುತ್ತಾರೆ. ಅದೇ ರೀತಿ ಶಿಷ್ಯರಾದವರು ಯಾವತ್ತೂ ಗುರುಗಳಿಗೆ ವಿಧೇಯರಾಗಿರುತ್ತಾರೆ ಎಂದರು.

ಶ್ರೀ ವಿಧುಶೇಖರಭಾರತೀ ಮಹಾಸ್ವಾಮೀಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭ ದಲ್ಲಿ ಕರಾಡ ಬ್ರಾಹ್ಮಣ ಸಮಾಜದ ವತಿಯಿಂದ ಶೃಂಗೇರಿಯಲ್ಲಿ ಒಂದು ದಿನದ ಶಾಶ್ವತ ಅನ್ನದಾನ ಸೇವೆಗೆ 1.75 ಲಕ್ಷ ರೂ. ನಿಧಿಯನ್ನು ಶೃಂಗೇರಿಯ ಜಗದ್ಗುರುಗಳಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಆನೆಮಜಲು ವಿಷ್ಣು ಭಟ್‌, ಬಾಲಕೃಷ್ಣ ಭಟ್‌ ಕೋಳಿಕ್ಕಜೆ, ಹರೀಶ ಭಟ್‌ ಆಟಿಕುಕ್ಕೆ, ವೆಂಕಟೇಶ ಭಟ್‌, ಕರಾಡ ಬ್ರಾಹ್ಮಣ ಅಭ್ಯುದಯ ಸಂಘದ ಅಧ್ಯಕ್ಷ ಶಂಕರನಾರಾಯಣ ಭಟ್‌, ರಾಜಾರಾಂ ಪೆರ್ಲ, ರಂಗಶರ್ಮಾ ಉಪ್ಪಂಗಳ, ವಿಷ್ಣುಮೋಹನ ಐಲುಕುಂಜೆ, ರಾಜೇಶ್‌ ಮಜಕ್ಕಾರ್‌, ಗುಂಡ್ಯಡ್ಕ ಸಂಘದ ಅಧ್ಯಕ್ಷ  ಗಣೇಶ್‌ ಭಟ್‌, ಪ್ರಭಾತ್‌ ಕುರುಮುಜ್ಜಿ, ಸುಬ್ರಹ್ಮಣ್ಯ ಭಟ್‌ ಇಂದಾಜೆ, ಎಸ್‌.ವಿ. ಭಟ್‌, ಪುರುಷೋತ್ತಮ ಭಟ್‌ ಮಠದಮೂಲೆ, ರಾಧಾಕೃಷ್ಣ ಭಟ್‌ ಆನೆಮಜಲು ಹಾಗೂ ಸುಮಾರು 500 ಕರಾಡ ಬಾಂಧವರು ಭಾಗವಹಿಸಿದರು. ಬಾಲಕೃಷ್ಣ ಭಟ್‌ ಕೋಳಿಕ್ಕಜೆ ಸರ್ವ ಕರಾಡ ಬಾಂಧವರ ಕುರಿತು ಪ್ರಸ್ತಾವಿಸಿದರು. ಅನಂತರ ಎಲ್ಲ ಊರುಗಳ ಕರಾಡ ಸಮಾಜ ಬಾಂಧವರ ಸಭೆ ಜರಗಿತು.

ಟಾಪ್ ನ್ಯೂಸ್

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ: ಜಿಲ್ಲಾಧಿಕಾರಿ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.