ದ್ವಾರಕಾ – ಬದರಿ ಶ್ರೀಗಳಿಗೆ ಅನುಗ್ರಹ: ಶ್ರೀಗಳಿಗೆ ದಂಡ – ಕಮಂಡಲ ನೀಡಿದ ಶೃಂಗೇರಿ ಶ್ರೀಗಳು
Team Udayavani, Sep 26, 2022, 11:29 PM IST
ಶೃಂಗೇರಿ: ಪಶ್ಚಿಮಾಮ್ನಾಯ ದ್ವಾರಕಾ ಪೀಠದ ಉತ್ತರಾಧಿಕಾರಿ ಜಗದ್ಗುರು ಶಂಕರಾಚಾರ್ಯ ಶ್ರೀ ಸದಾನಂದ ಸರಸ್ವತಿ ಸ್ವಾಮೀಜಿಗಳು ಮತ್ತು ಉತ್ತರಾಮ್ನಾಯ ಬದರಿ ಜ್ಯೋತಿರ್ಪೀಠದ ಉತ್ತರಾಧಿಕಾರಿ ಜಗದ್ಗುರು ಶ್ರೀ ಅವಿಮುಕ್ತೇಶ್ವರಾನಂದ ಸರಸ್ವತಿ ಮಹಾಸ್ವಾಮೀಜಿಗೆ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಸೋಮವಾರ ದಂಡ, ಕಮಂಡಲ ನೀಡಿ ಅನುಗ್ರಹಿಸಿದರು.
ಆಶ್ವಯಜ ಮಾಸದ ಶುಕ್ಲ ಪಕ್ಷದ ಪಾಡ್ಯದ ದಿನ ನೂತನ ಉಭಯ ಜಗದ್ಗುರುಗಳಿಗೆ ಪೀಠದ ಸಂಕೇತವಾಗಿ ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಅನುಗ್ರಹಿಸಿರುವುದು ವಿಶೇಷವಾಗಿದೆ. ಈ ಹಿಂದೆ ಜ್ಯೋತಿರ್ ಪೀಠದ ಬದರಿ ಶಂಕರಚಾರ್ಯ ಶ್ರೀ ಸ್ವರೂಪಾನಂದ ಸರಸ್ವತಿ ಸ್ವಾಮೀಜಿಗಳಿಗೂ ಇಲ್ಲಿನ 35ನೇ ಜಗದ್ಗುರು ಶ್ರೀ ವಿದ್ಯಾತೀರ್ಥ ಸ್ವಾಮೀಜಿ ಪಟ್ಟಾಭಿಷೇಕ ನೆರವೇರಿಸಿದ್ದರು.
ಸೋಮವಾರ ಬೆಳಗ್ಗೆ ಶ್ರೀ ಶಾರದಾ ಪೀಠದಲ್ಲಿ ದಂಡ, ಕಮಂಡಲ ನೀಡುವ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಶ್ರೀಮಠದ ಪುರೋಹಿತರಾದ ಶಿವಕುಮಾರ ಶರ್ಮ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನ ನಡೆಯಿತು.
ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಉಪಸ್ಥಿತರಿದ್ದರು. ಶ್ರೀಮಠದ ಆಡಳಿತಾ ಧಿಕಾರಿ ಡಾ| ವಿ.ಆರ್. ಗೌರಿಶಂಕರ್, ಅಧಿ ಕಾರಿಗಳಾದ ಶಿವಶಂಕರ ಭಟ್, ದಕ್ಷಿಣಾಮೂರ್ತಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ