ನಿಮ್ಮ ಸರ್ಕಾರ ಉಳಿಯಬೇಕಾದರೆ ದತ್ತಪೀಠವನ್ನು..:ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಎಚ್ಚರಿಕೆ
Team Udayavani, Nov 7, 2022, 11:50 AM IST
ಚಿಕ್ಕಮಗಳೂರು: ಪ್ರತಿ ವರ್ಷ ಬರುವುದು, ಹೆಣ ಇಲ್ಲದ ಗೋರಿ ನೋಡಿ ವಾಪಸ್ ಹೋಗುವುದು.. ಎಚ್ಚರಿಕೆ ನೀಡಿ, ನೀಡಿ ಬೇಜಾರಾಗಿದೆ. ನಮಗೆ ಈ ಬಿಜೆಪಿ ಸರ್ಕಾರದ ಮೇಲೆ ಹೇಸಿಗೆ ಬರುತ್ತಿದೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಮಗಳೂರು ನಗರದ ಶಂಕರ ಮಠದಲ್ಲಿ ಮಾಲಾಧಾರಣೆ ನಡೆಸಿ ಶ್ರೀರಾಮ ಸೇನೆಯ ದತ್ತಮಾಲಾ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಡ್ರಾಮಾ ಒಳ್ಳೆಯದಲ್ಲ. ತಕ್ಷಣ ಏನಾದರೂ ಆಗಲಿ ಎಂದು ಗಟ್ಟಿ ನಿರ್ಧಾರ ಮಾಡಿ. ಕೂಡಲೇ ದತ್ತಪೀಠವನ್ನ ಹಿಂದೂಗಳ ಪೀಠವೆಂದು ಆದೇಶಿಸಿ, ಹಿಂದೂ ಅರ್ಚಕರ ನೇಮಿಸಿ ಎಂದರು.
ಇದನ್ನೂ ಓದಿ:ಹತ್ತು ವರ್ಷಗಳ ಬಳಿಕ ರಮ್ಯಾ ಕಮ್ ಬ್ಯಾಕ್: ಡಾಲಿ ಜೊತೆಯಾದ ಮೋಹಕ ತಾರೆ
13ನೇ ತಾರೀಖಿನೊಳಗೆ ಅರ್ಚಕರ ನೇಮಿಸದಿದ್ದರೆ ಪರಿಸ್ಥಿತಿ ಕಠಿಣವಾಗುತ್ತದೆ. ಹೇಗೆ ಬಿಜೆಪಿ ಅಧ್ಯಕ್ಷರ ಕಾರು ಅಲುಗಾಡಿತ್ತೋ, ಅದೇ ರೀತಿ ಸರ್ಕಾರ ಅಲುಗಾಡುತ್ತದೆ. ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸದಿದ್ದರೆ ಯಡಿಯೂರಪ್ಪರ ಪೀಠ ಹೋಗುತ್ತದೆ ಎಂದು ಹೇಳಿದ್ದೆ. ದತ್ತ ಗುರುಗಳ ಶಾಪದಿಂದ ಯಡಿಯೂರಪ್ಪ ಪೀಠ ಕಳೆದುಕೊಂಡರು. ಈಗ ಬೊಮ್ಮಾಯಿಗೂ ಹೇಳುತ್ತಿದ್ದೇವೆ, ಮುಂದೆ ಸರ್ಕಾರ ಬರಬೇಕಂದರೆ ತಕ್ಷಣ ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಿ. ಇಲ್ಲವಾದರೆ, ಯಡಿಯೂರಪ್ಪನವರಿಗೆ ಆದ ಪರಿಸ್ಥಿತಿಯೇ ನಿಮಗೂ ಆಗುತ್ತದೆ ಎಂದು ಗಂಗಾಧರ್ ಕುಲಕರ್ಣಿ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ