ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವ ಸಂಪನ್ನ
Team Udayavani, Jan 21, 2019, 10:21 AM IST
ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಅಗ್ರಹಾರದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀ ಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಗೋಪಾಲಕೃಷ್ಣ ಸ್ವಾಮಿ ದೇಗುಲದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಕಲಾಹೋಮ, ಗಣಪತಿ ಹೋಮ, ದುರ್ಗಾಹೋಮ, ರುದ್ರಹೋಮ, ಸಂಹಿತಾ ಪಾರಾಯಣ ಹಾಗೂ ಸ್ವಾಮಿಗೆ ವಿಶೇಷ ಅಭಿಷೇಕ ನಡೆಯಿತು.ನಂತರ ಉತ್ಸವ ಮೂರ್ತಿಯನ್ನು ಅಲಂಕೃತವಾದ ರಥದಲ್ಲಿ ಕುಳ್ಳಿರಿಸಿ ಭಕ್ತದಿಗಳ ಜಯ ಘೋಷದೊಂದಿಗೆ ದೇಗುಲದ ಹೊರ ಆವರಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಥೋತ್ಸವದ ಅಂಗವಾಗಿ ಅಗ್ರಹಾರದಲ್ಲಿ ತಳಿರು, ತೋರಣ ಹಾಗೂ ರಂಗೋಲಿ ಚಿತ್ತಾರ ಬಿಡಿಸಲಾಗಿತ್ತು.
ರಾತ್ರಿ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ, ರಂಗಪೂಜೆ, ಮಹಾ ಮಂಗಳಾರತಿ ನಡೆಯಿತು. ಸುತ್ತಲಿನ ಆನೆಗುಂದ, ಹೆಗ್ಗದ್ದೆ, ಕಾವಡಿ, ಬೆಳಂದೂರು, ಕರುವಾನೆ, ಮಿಗಿನಕಲ್ಲು, ಅಡ್ಡಗದ್ದೆ, ಶೃಂಗೇರಿ, ಕಿರಕೋಡಿನ ನೂರಾರು ಭಕ್ತಾದಿಗಳು ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾದರು.
ಅರ್ಚಕ ವಸಂತಭಟ್ ನೇತೃತ್ವದಲ್ಲಿ ಸುಬ್ರಹ್ಮಣ್ಯ ಭಟ್, ಕೃಷ್ಣಮೂರ್ತಿ ಭಟ್ ಮತ್ತಿತರ ಋತ್ವಿಜರ ತಂಡ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಕಂದಾಯ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ