ಅಡಕೆ ಬೆಳೆಗಾರರಿಗೆ ಸೂಚನೆ
Team Udayavani, May 21, 2020, 6:23 PM IST
ಸಾಂದರ್ಭಿಕ ಚಿತ್ರ
ಶೃಂಗೇರಿ: ಅಡಕೆ ಬೆಳೆಗಾರರು ಮುಂಗಾರು ಪೂರ್ವದಲ್ಲಿ ಕೊಳೆ ರೋಗ ನಿರ್ವಹಣೆಗಾಗಿ ರೈತರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಸೂಚನೆ ನೀಡಿದೆ.
ಮುಂಗಾರು ಆರಂಭಕ್ಕೂ ಮೊದಲು ಅಡಕೆ ತೋಟದ ಬಸಿಗಾಲುವೆಯನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು. ತೋಟದಲ್ಲಿ ಬಿದ್ದಿರುವ ಸೋಗೆಯಲ್ಲಿರುವ ಹಾಳೆಯನ್ನು ಬೇರ್ಪಡಿಸಿ, ಸೋಗೆಯನ್ನು ಅಡಕೆ ಮರದ ಬುಡಕ್ಕೆ ಸೇರಿಸಬೇಕು. ಹಾಳೆಯನ್ನು ತೋಟದಿಂದ ಹೊರಗಡೆ ಹಾಕಬೇಕು. ಕೊಳೆ ಮತ್ತು ಸುಳಿ ರೋಗ ತಡೆಗಟ್ಟಲು ಶೇ.1ರ ಬೋರ್ಡೋ ದ್ರಾವಣ ಅಥವಾ 3 ಗ್ರಾಂ ತಾಮ್ರದ ಆಕ್ಸಿಕ್ಲೋರೈಡ್ ಅಥವಾ 2 ಗ್ರಾಂ. ಮೆಟಲ್ ಆಕ್ಸಿಲ್ ಜೊತೆಗೆ ಮ್ಯೋಂಕೊಜೆಬ್ ಡಬ್ಲೂಪಿ 2 ಗ್ರಾಂ. 1 ಲೀಟರ್ ನೀರಿನಲ್ಲಿ ಕರಗಿಸಿ ಮಳೆಗಾಲ ಆರಂಭವಾಗುವುದಕ್ಕೂ ಮೊದಲು ಮತ್ತು 30-45 ದಿನದ ನಂತರ ಮತ್ತೊಮ್ಮೆ ಸಿಂಪಡಿಸಬೇಕು. ರೋಗ ಪೀಡಿತ ಎಲೆಯನ್ನು ಕತ್ತರಿಸಿ ಶೇ.1ರ ಬೋರ್ಡೋ ದ್ರಾವಣ ಅಥವಾ 3 ಗ್ರಾಂ. ತಾಮ್ರದ ಆಕ್ಸಿಕ್ಲೋರೈಡ್ ಅಥವಾ 2 ಗ್ರಾಂ ಮೆಟಲ್ ಆಕ್ಸಿಲ್ ಜೊತೆಗೆ ಮ್ಯೋಂಕೊಜೆಬ್ ಡಬ್ಲೂಪಿ 2 ಗ್ರಾಂ. 1 ಲೀಟರ್ ನೀರಿನಲ್ಲಿ ಕರಗಿಸಿ ಸುಳಿ ಭಾಗಕ್ಕೆ ಸಿಂಪಡಿಸಬೇಕು ಎಂದು ತೋಟಗಾರಿಕೆ ಇಲಾಖೆ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ