![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಬಸ್ ಪ್ರಯಾಣಿಕರ ಸಂಖ್ಯೆ ಇಳಿಮುಖ
Team Udayavani, May 22, 2020, 12:39 PM IST
![22-May-08](https://www.udayavani.com/wp-content/uploads/2020/05/22-May-08-620x349.gif)
ಸಾಂದರ್ಭಿಕ ಚಿತ್ರ
ಶೃಂಗೇರಿ: ಕೋವಿಡ್ ಪರಿಣಾಮದಿಂದ ಬಂದ್ ಆಗಿದ್ದ ಬಸ್ ಸಂಚಾರ ಸರಕಾರ ಪುನಾರಂಭಿಸಿದ್ದರೂ, ಬಸ್ನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ತೀವ್ರ ಇಳಿಮುಖವಾಗಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ರಾಜ್ಯ ಸಾರಿಗೆ ಸಂಸ್ಥೆಯು ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಕೇಂದ್ರದಿಂದ ಪ್ರಾಯೋಗಿಕವಾಗಿ ಎರಡು ಬಸ್ಸನ್ನು ಶೃಂಗೇರಿಗೆ ಬಿಟ್ಟಿದೆ. ಚಿಕ್ಕಮಗಳೂರಿನಿಂದ 12 ಗಂಟೆಗೆ ಶೃಂಗೇರಿಗೆ ಹೊರಟಿದ್ದ ಬಸ್ ನಲ್ಲಿ ಕೇವಲ ಇಬ್ಬರು ಪ್ರಯಾಣಿಕರು ಇದ್ದು, ಸಂಜೆ ಪುನ: ಚಿಕ್ಕಮಗಳೂರಿಗೆ ತೆರಳುವಾಗ ಕೇವಲ ನಾಲ್ಕು ಮಂದಿ ಪ್ರಯಾಣಿಕರು ಈ ಬಸ್ಸನ್ನು ಬಳಸಿದ್ದಾರೆ.
ಇದೇ ರೀತಿ ಶಿವಮೊಗ್ಗದಿಂದ ಶೃಂಗೇರಿಗೆ ಬೆಳಗ್ಗೆ 8 ಗಂಟೆಗೆ ಹೊರಟಿದ್ದ ಬಸ್ನಲ್ಲಿ ಶೃಂಗೇರಿಗೆ ಯಾವುದೇ ಪ್ರಯಾಣಿಕರು ಇಲ್ಲದೇ ಹೋಗಿದ್ದರಿಂದ ಚಾಲಕ ಹಾಗೂ ನಿರ್ವಾಹಕ ಮಾತ್ರ ಬಂದಿದ್ದಾರೆ. ಸಂಜೆ ಪುನ: ಶಿವಮೊಗ್ಗಕ್ಕೆ ತೆರಳಬೇಕಾಗಿತ್ತು. ಆದರೆ, ಪ್ರಯಾಣಿಕರು ಇಲ್ಲದ ಕಾರಣ ಇದನ್ನು ಇಲ್ಲಿನ ಬಸ್ ನಿಲ್ದಾಣದಲ್ಲಿ ನಿಲುಗಡೆ ಮಾಡಲಾಗಿದೆ.
ಸಾರ್ವಜನಿಕರಿಗೆ ಬಸ್ ಸಂಚಾರ ಆರಂಭವಾಗಿರುವುದರ ಪೂರ್ಣ ಅರಿವು ಇಲ್ಲದಿರುವುದು ಒಂದೆಡೆಯಾದರೆ, ಬಸ್ ನಲ್ಲಿ ಪ್ರಯಣಿಸುವುದರಿಂದ ಸೋಂಕು ಹರಡಬಹುದೋ ಎನ್ನುವ ಒಳಗೊಳಗಿನ ಭಯದ ಕಾರಣ ಜನ ಪ್ರಯಾಣ ಮುಂದೂಡಿದ್ದಾರೆ. ಹಂತ ಹಂತವಾಗಿ ಬಸ್ ಬಳಕೆಯಲ್ಲಿ ಸ್ವಲ್ಪ ಸುಧಾರಣೆ ಆಗಬಹುದು ಎಂಬುದು ಸಾರಿಗೆ ನಿಯಂತ್ರಕರ ಅನಿಸಿಕೆಯಾಗಿದೆ.
ಈ ನಡುವೆ ಎರಡೂ ಜಿಲ್ಲೆಗಳಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಹಠಾತ್ ಹೆಚ್ಚಿರುವುದು ಬಸ್ ಪ್ರಯಾಣಕ್ಕೆ ಜನರಲ್ಲಿ ಹಿಂಜರಿಕೆ ಉಂಟು ಮಾಡಬಹುದು ಎಂದು ಡಿಪೋ ಕಾರ್ಯನಿರ್ವಾಹಕ ಶಿವಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.