ದೇವರ ಅನುಸಂಧಾನಕ್ಕೆ ಭಕ್ತಿ ಮಾರ್ಗ ಶ್ರೇಷ್ಠ
ಕಲಾವಿದ ಹರೀಶ್ ಡೋಂಗ್ರೆ ಅಭಿಮತಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರದಿಂದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮ
Team Udayavani, Mar 15, 2020, 4:55 PM IST
ಶೃಂಗೇರಿ: ದೇವರ ಜೊತೆಗೆ ಅನುಸಂಧಾನಕ್ಕೆ ಭಕ್ತಿ ಮಾರ್ಗ ಅತ್ಯಂತ ಉನ್ನತವಾದ ದಾರಿ. ಈ ಮಾರ್ಗದ ಹೆಗ್ಗಳಿಕೆ ದಾಸವರೇಣ್ಯರು ರಚಿಸಿದ ಹಾಡುಗಳಲ್ಲಿವೆ ಎಂದು ಕಲಾವಿದ, ಅರ್ಚಕ ಹರೀಶ್ ಡೋಂಗ್ರೆ ತಿಳಿಸಿದ್ದಾರೆ.
ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರ ಟ್ರಸ್ಟ್ ನೆಮ್ಮಾರು, ಹೊಸೂರು ಗ್ರಾಮದ ಅಬ್ಬಿಗುಂಡಿಯಲ್ಲಿ ಏರ್ಪಡಿಸಿದ್ದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮವನ್ನು ತಾಳ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ದಾಸ ಪಂಥದ ಗೀತ ರಚನೆಗಳಲ್ಲಿ ಭಕ್ತಿಯ ಪರಾಕಾಷ್ಠೆ ಮಾತ್ರವಲ್ಲದೇ, ಬದುಕಿನ ಲೌಕಿಕತೆಗೂ ಕನ್ನಡಿಯಾಗಿದೆ. ಹೀಗೆ ಆಧ್ಯಾತ್ಮ ಮತ್ತು ಲೌಕಿಕತೆಯ ಸಮ್ಮಿಲನದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ. ಇದನ್ನು ಮಾಧುರ್ಯ ಪೂರ್ಣವಾಗಿ ಹಾಡಿದಾಗ ಭಕ್ತಿಯ ಮತ್ತು ಸಂಗೀತದ ವಾತಾವರಣ ಯುಕ್ತವಾಗಿ ಒಡಮೂಡಿ ಹೊಸದೊಂದು ಲೋಕವನ್ನು ಅನಾವರಣಗೊಳಿಸುತ್ತದೆ. ಅತ್ಯಂತ ದುರ್ಗಮ ತಾಣವಾದ ಅಬ್ಬಿಗುಂಡಿಯಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಸಂಸ್ಥೆ ಮೇಲ್ಪಂಕ್ತಿಯಾಗಿದೆ. ಈ ಸಂಸ್ಥೆಯು ಬಹುತೇಕ ಕಾರ್ಯಕ್ರಮಗಳನ್ನು ಸಂಪೂರ್ಣ ಹಳ್ಳಿ ಇಲ್ಲವೇ ಕಾಡಿನ ಪ್ರದೇಶದಲ್ಲಿ ನಡೆಸುತ್ತಾ ಕಲಾ ಸಂಘಟನೆಗೆ ಹೊಸ ಭಾಷ್ಯ ಬರೆಯುತ್ತಿದೆ. ಸಂಸ್ಥೆಯ ಈ ರೀತಿಯ ಯಶಸ್ವೀ ಪರಿಕಲ್ಪನೆಯ ಹಿಂದೆ ನಾಡು ಕಂಡ ಶ್ರೇಷ್ಠ ಸಾಂಸ್ಕೃತಿಕ ಸಂಘಟಕ ರಮೇಶ್ ಬೇಗಾರ್ ಅವರ ಕನಸಿರುವುದು ಸ್ಪಷ್ಟವಾಗಿದೆ ಎಂದರು.
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಮೇಶ್ ಬೇಗಾರ್ ಮಾತನಾಡಿ, ಕಲೆ ಕಟ್ಟ ಕಡೆಯ ಗ್ರಾಮವನ್ನು ಮತ್ತು ಗ್ರಾಮಸ್ಥರನ್ನು ತಲುಪಬೇಕು ಎಂಬುದನ್ನು ಸಂಸ್ಥೆಯ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಸಂಸ್ಥೆ ನಕ್ಸಲ್ ಬಾತ್ ಸ್ಥಳ ಸೇರಿದಂತೆ ಬೇರೆ ಬೇರೆ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಸಮಾಜದ ಎಲ್ಲಾ ಸ್ತರದ ಜನರನ್ನು ತಲುಪುತ್ತಿದೆ. ಕಾಲ್ನಡಿಗೆಯ ಸಂಚಾರ ಮಾತ್ರ ಇರುವ ದುರ್ಗಮ ತಾಣಗಳಲ್ಲಿಯೂ ಕಾರ್ಯಕ್ರಮ ಏರ್ಪಡಿಸಿದ ಹೆಗ್ಗಳಿಕೆ ನಮ್ಮ ಸಂಸ್ಥೆಗಿದೆ ಎಂದರು. ಸುಬ್ರಹ್ಮಣ್ಯ ಆಚಾರ್ಯ ನಿರೂಪಿಸಿ, ಕಕ್ಕರಣೆ ಮಹಾಬಲ ವಂದಿಸಿದರು.
ಜನಮನ ಗೆದ್ದ ದಾಸವಾಣಿ: ಉಡುಪಿಯ ನಾರಾಯಣ ಸರಳಾಯ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಸೇರಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರನ್ನು ರಂಜಿಸಿತು. ಸರಳಾಯರು ವಂದಿಪೆ ನಿನಗೆ ಗಣನಾಥ ಎಂಬ ನಾಟರಾಗದ ಕೃತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮೋಹನ ರಾಗದಲ್ಲಿ ಪ್ರಸ್ತುತಪಡಿಸಿದ ಪಿಳ್ಳಂಗೋವಿ ಹಾಡು, ಕಾಪಿ ರಾಗದ ಆಡಿಸಿದಳ್ ಯಶೋಧೆ, ಮಧ್ಯಮಾವತಿ ರಾಗದ ಲಕ್ಷ್ಮೀ ಬಾರಮ್ಮ ಕೃತಿಗಳು ಪ್ರೇಕ್ಷಕರ ಮನ ಸೂರೆಗೊಂಡವು.
ಪಕ್ಕವಾದ್ಯದಲ್ಲಿ ಸುಹಾಸ್ ಹೆಬ್ಟಾರ್, ಪುತ್ತೂರು ಇವರು ತಬಲಾದಲ್ಲಿ, ಕೀ ಬೋರ್ಡ್ ನಲ್ಲಿ ಎಂ.ಕೆ. ಶ್ರೀನಿ ಮತ್ತು ವಿಶೇಷ ಉಪಕರಣದಲ್ಲಿ ಸುಮಂತ್ ಹೆಬ್ಟಾರ್ ಸಹಕಾರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ