ದೇವರ ಅನುಸಂಧಾನಕ್ಕೆ ಭಕ್ತಿ ಮಾರ್ಗ ಶ್ರೇಷ್ಠ

ಕಲಾವಿದ ಹರೀಶ್‌ ಡೋಂಗ್ರೆ ಅಭಿಮತಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರದಿಂದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮ

Team Udayavani, Mar 15, 2020, 4:55 PM IST

15-March-28

ಶೃಂಗೇರಿ: ದೇವರ ಜೊತೆಗೆ ಅನುಸಂಧಾನಕ್ಕೆ ಭಕ್ತಿ ಮಾರ್ಗ ಅತ್ಯಂತ ಉನ್ನತವಾದ ದಾರಿ. ಈ ಮಾರ್ಗದ ಹೆಗ್ಗಳಿಕೆ ದಾಸವರೇಣ್ಯರು ರಚಿಸಿದ ಹಾಡುಗಳಲ್ಲಿವೆ ಎಂದು ಕಲಾವಿದ, ಅರ್ಚಕ ಹರೀಶ್‌ ಡೋಂಗ್ರೆ ತಿಳಿಸಿದ್ದಾರೆ.

ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಕೇಂದ್ರ ಟ್ರಸ್ಟ್‌ ನೆಮ್ಮಾರು, ಹೊಸೂರು ಗ್ರಾಮದ ಅಬ್ಬಿಗುಂಡಿಯಲ್ಲಿ ಏರ್ಪಡಿಸಿದ್ದ ಬನದಲ್ಲಿ ದಾಸ ಗಾಯನ ಕಾರ್ಯಕ್ರಮವನ್ನು ತಾಳ ನುಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ದಾಸ ಪಂಥದ ಗೀತ ರಚನೆಗಳಲ್ಲಿ ಭಕ್ತಿಯ ಪರಾಕಾಷ್ಠೆ ಮಾತ್ರವಲ್ಲದೇ, ಬದುಕಿನ ಲೌಕಿಕತೆಗೂ ಕನ್ನಡಿಯಾಗಿದೆ. ಹೀಗೆ ಆಧ್ಯಾತ್ಮ ಮತ್ತು ಲೌಕಿಕತೆಯ ಸಮ್ಮಿಲನದ ಅಪರೂಪದ ಸಾಹಿತ್ಯ ಪ್ರಕಾರವಾಗಿದೆ. ಇದನ್ನು ಮಾಧುರ್ಯ ಪೂರ್ಣವಾಗಿ ಹಾಡಿದಾಗ ಭಕ್ತಿಯ ಮತ್ತು ಸಂಗೀತದ ವಾತಾವರಣ ಯುಕ್ತವಾಗಿ ಒಡಮೂಡಿ ಹೊಸದೊಂದು ಲೋಕವನ್ನು ಅನಾವರಣಗೊಳಿಸುತ್ತದೆ. ಅತ್ಯಂತ ದುರ್ಗಮ ತಾಣವಾದ ಅಬ್ಬಿಗುಂಡಿಯಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಶ್ರೀ ಭಾರತೀತೀರ್ಥ ಸಾಂಸ್ಕೃತಿಕ ಸಂಸ್ಥೆ ಮೇಲ್ಪಂಕ್ತಿಯಾಗಿದೆ. ಈ ಸಂಸ್ಥೆಯು ಬಹುತೇಕ ಕಾರ್ಯಕ್ರಮಗಳನ್ನು ಸಂಪೂರ್ಣ ಹಳ್ಳಿ ಇಲ್ಲವೇ ಕಾಡಿನ ಪ್ರದೇಶದಲ್ಲಿ ನಡೆಸುತ್ತಾ ಕಲಾ ಸಂಘಟನೆಗೆ ಹೊಸ ಭಾಷ್ಯ ಬರೆಯುತ್ತಿದೆ. ಸಂಸ್ಥೆಯ ಈ ರೀತಿಯ ಯಶಸ್ವೀ ಪರಿಕಲ್ಪನೆಯ ಹಿಂದೆ ನಾಡು ಕಂಡ ಶ್ರೇಷ್ಠ ಸಾಂಸ್ಕೃತಿಕ ಸಂಘಟಕ ರಮೇಶ್‌ ಬೇಗಾರ್‌ ಅವರ ಕನಸಿರುವುದು ಸ್ಪಷ್ಟವಾಗಿದೆ ಎಂದರು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಮೇಶ್‌ ಬೇಗಾರ್‌ ಮಾತನಾಡಿ, ಕಲೆ ಕಟ್ಟ ಕಡೆಯ ಗ್ರಾಮವನ್ನು ಮತ್ತು ಗ್ರಾಮಸ್ಥರನ್ನು ತಲುಪಬೇಕು ಎಂಬುದನ್ನು ಸಂಸ್ಥೆಯ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷವೂ ಸಂಸ್ಥೆ ನಕ್ಸಲ್‌ ಬಾತ್‌ ಸ್ಥಳ ಸೇರಿದಂತೆ ಬೇರೆ ಬೇರೆ ಪ್ರದೇಶದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಸಮಾಜದ ಎಲ್ಲಾ ಸ್ತರದ ಜನರನ್ನು ತಲುಪುತ್ತಿದೆ. ಕಾಲ್ನಡಿಗೆಯ ಸಂಚಾರ ಮಾತ್ರ ಇರುವ ದುರ್ಗಮ ತಾಣಗಳಲ್ಲಿಯೂ ಕಾರ್ಯಕ್ರಮ ಏರ್ಪಡಿಸಿದ ಹೆಗ್ಗಳಿಕೆ ನಮ್ಮ ಸಂಸ್ಥೆಗಿದೆ ಎಂದರು. ಸುಬ್ರಹ್ಮಣ್ಯ ಆಚಾರ್ಯ ನಿರೂಪಿಸಿ, ಕಕ್ಕರಣೆ ಮಹಾಬಲ ವಂದಿಸಿದರು.

ಜನಮನ ಗೆದ್ದ ದಾಸವಾಣಿ: ಉಡುಪಿಯ ನಾರಾಯಣ ಸರಳಾಯ ಮತ್ತು ಸಂಗಡಿಗರಿಂದ ದಾಸವಾಣಿ ಕಾರ್ಯಕ್ರಮ ಸೇರಿದ್ದ ಅಪಾರ ಸಂಖ್ಯೆಯ ಗ್ರಾಮಸ್ಥರನ್ನು ರಂಜಿಸಿತು. ಸರಳಾಯರು ವಂದಿಪೆ ನಿನಗೆ ಗಣನಾಥ ಎಂಬ ನಾಟರಾಗದ ಕೃತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮೋಹನ ರಾಗದಲ್ಲಿ ಪ್ರಸ್ತುತಪಡಿಸಿದ ಪಿಳ್ಳಂಗೋವಿ ಹಾಡು, ಕಾಪಿ ರಾಗದ ಆಡಿಸಿದಳ್‌ ಯಶೋಧೆ, ಮಧ್ಯಮಾವತಿ ರಾಗದ ಲಕ್ಷ್ಮೀ ಬಾರಮ್ಮ ಕೃತಿಗಳು ಪ್ರೇಕ್ಷಕರ ಮನ ಸೂರೆಗೊಂಡವು.

ಪಕ್ಕವಾದ್ಯದಲ್ಲಿ ಸುಹಾಸ್‌ ಹೆಬ್ಟಾರ್‌, ಪುತ್ತೂರು ಇವರು ತಬಲಾದಲ್ಲಿ, ಕೀ ಬೋರ್ಡ್‌ ನಲ್ಲಿ ಎಂ.ಕೆ. ಶ್ರೀನಿ  ಮತ್ತು ವಿಶೇಷ ಉಪಕರಣದಲ್ಲಿ ಸುಮಂತ್‌ ಹೆಬ್ಟಾರ್‌ ಸಹಕಾರ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ

1-sadasd

July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.