ಶೃಂಗೇರಿ ಉಭಯ ಜಗದ್ಗುರುಗಳ ಚಾತುರ್ಮಾಸ್ಯ ವ್ರತ ಸಮಾಪ್ತಿ
Team Udayavani, Sep 25, 2018, 6:55 AM IST
ಶೃಂಗೇರಿ: ಶೃಂಗೇರಿಯ ಶಾರದಾ ಪೀಠದ ಉಭಯ ಜಗದ್ಗುರುಗಳು ಭಾದ್ರಪದ ಹುಣ್ಣಿಮೆ ದಿನವಾದ ಸೋಮವಾರ
ಚಾತುರ್ಮಾಸ್ಯ ವ್ರತ ಸಮಾಪ್ತಿಗೊಳಿಸಿ ಸೀಮೋಲ್ಲಂಘನ ಮಾಡಿದರು.
ಜು.27ರಿಂದ ಮಠದ ಗುರುನಿವಾಸದಲ್ಲಿ ಈ ವರ್ಷದ ಚಾತುರ್ಮಾಸ್ಯ ವ್ರತ ಕೈಗೊಂಡಿದ್ದ ಉಭಯ ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು, ಸೆ.24ರಂದು ವ್ರತ ಸಂಪನ್ನಗೊಳಿಸಿ ಮಠಕ್ಕೆ ಆಗಮಿಸಿದರು.
ಬಳಿಕ, ಸುಬ್ರಮಣ್ಯ, ವಿದ್ಯಾಶಂಕರ, ತೋರಣಗಣಪತಿ, ಶಂಕರಾಚಾರ್ಯ ದೇಗುಲ, ಜನಾರ್ಧನ ಸ್ವಾಮಿ ದೇಗುಲಗಳಿಗೆ
ಭೇಟಿ ನೀಡಿ, ನಂತರ ಶಾರದಾ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕಾಲ್ನಡಿಗೆಯಲ್ಲಿ ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಛತ್ರಿ, ಚಾಮರ, ಆನೆ,ವಾದ್ಯಮೇಳ, ದೀವಿಟಿಗೆ ಸಹಿತ ಜಗದ್ಗುರುಗಳು ತೆರಳಿದರು. ಭಕ್ತಾದಿಗಳು ಶ್ರೀಗಳಿಗೆ ಫಲ, ಪುಷ್ಪ ಸಮರ್ಪಿಸಿದರು.
ಚಾತುರ್ಮಾಸ್ಯ ವ್ರತದ ಆರಂಭ ಹಾಗೂ ಸಮಾಪ್ತಿ ನಂತರ ಜಗದ್ಗುರುಗಳು ಬೆಟ್ಟದ ಮಲಹಾನಿಕರೇಶ್ವರ ಸ್ವಾಮಿ
ಸನ್ನಿಧಿಗೆ ತೆರಳುವುದು ಹಿಂದಿನಿಂದಲೂ ನಡೆದು ಬಂದ ಪದ್ಧತಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!