ಪೂಜಾ ಪರಿಕರ ವಿತರಣೆ
Team Udayavani, Jun 14, 2020, 3:40 PM IST
ಶೃಂಗೇರಿ: ಶ್ರೀಮಠದ ಪ್ರವಚನ ಮಂದಿರದಲ್ಲಿ ಸಂಕಷ್ಟದಲ್ಲಿರುವ ದೇವಾಲಯದ ಅರ್ಚಕರಿಗೆ ಪೂಜಾ ಕಿಟ್ ವಿತರಿಸಲಾಯಿತು
ಶೃಂಗೇರಿ: ಕೋವಿಡ್ ಹಿನ್ನೆಲೆಯಲ್ಲಿ ದೇವಸ್ಥಾನದ ನಿತ್ಯ ವಿಧಿಗಳನ್ನು ನಡೆಸುವುದು ಕಷ್ಟಕರವಾದ ಸಂದರ್ಭದಲ್ಲಿ ಶಂಕರ ಸುದ್ದಿವಾಹಿನಿ ಅರ್ಚಕರಿಗೆ ಪೂಜಾ ಪರಿಕರ ನೀಡಿ,ದೈನಂದಿನ ಪೂಜಾ ಕಾರ್ಯ ನಿಯಮಿತವಾಗಿ ನಡೆಯಲು ಸಹಕಾರ ನೀಡಿದೆ ಎಂದು ಶ್ರೀಮಠದ ಜಗದ್ಗುರುಗಳ ಆಪ್ತ ಸಹಾಯಕ ಶಂ.ನ.ಕೃಷ್ಣಮೂರ್ತಿ ಹೇಳಿದರು.
ಶ್ರೀಮಠದ ಪ್ರವಚನ ಮಂದಿರದಲ್ಲಿ ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ 22 ದೇವಸ್ಥಾನಗಳ ಅರ್ಚಕರಿಗೆ ಪೂಜಾ ಪರಿಕರದ ಕಿಟ್ ವಿತರಿಸಿ ಮಾತನಾಡಿದರು. ಕೋವಿಡ್ ವ್ಯಾಪಕವಾಗಿ ಹರಡಿದ್ದರಿಂದ ಎಲ್ಲಾ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಅದರಂತೆ ಅನೇಕ ದೇವಸ್ಥಾನಗಳಲ್ಲಿ ತ್ರಿಕಾಲ ಪೂಜೆ ನಡೆಯುತ್ತಿದ್ದರೆ, ಇನ್ನೂ ಕೆಲವು ದೇವಸ್ಥಾನಗಳಲ್ಲಿ ನಿತ್ಯಪೂಜೆ ನಡೆಯುತ್ತಿತ್ತು. ಭಕ್ತಾದಿಗಳಿಗೆ ದೇಗುಲಕ್ಕೆ ಅವಕಾಶವಿಲ್ಲದೇ ಇದ್ದುದರಿಂದ ದೇಗುಲಕ್ಕೆ ಬರುತ್ತಿದ್ದ ಆದಾಯ ಕಡಿತಗೊಂಡಿತ್ತು. ಇದರಿಂದ ಅನೇಕ ದೇವಸ್ಥಾನಗಳಲ್ಲಿ ಪೂಜಾ ವಿಧಿವಿಧಾನ ನಡೆಸುವುದು ಕಷ್ಟವಾಗಿತ್ತು. ಈ ಹಂತದಲ್ಲಿ ಅವರಿಗೆ ನೆರವು ನೀಡುತ್ತಿರುವುದು ಸಮಯೋಚಿತವಾಗಿದೆ ಎಂದರು.
ಶಂಕರ ಸುದ್ದಿವಾಹಿನಿಯ ಬಾಲಾಜಿ, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಜಿ.ಎಂ. ಸತೀಶ್, ಕಾರ್ಯದರ್ಶಿ ಬಿ.ಎಲ್.ರವಿಕುಮಾರ್, ಶೃಂಗೇರಿ ಸುಬ್ಬಣ್ಣ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು