Sringeri; ತುಂಗಾ ನದಿಯ ನಡುಗಡ್ಡೆಯಲ್ಲಿ ಸಿಲುಕಿದ ಇಬ್ಬರ ರಕ್ಷಣೆ
Team Udayavani, Sep 29, 2023, 8:21 PM IST
ಚಿಕ್ಕಮಗಳೂರು: ತುಂಗಾ ನದಿ ನಡು ಗಡ್ಡೆಯಲ್ಲಿ ಸಿಲುಕಿದ್ದ ಇಬ್ಬರನ್ನು ಅಗ್ನಿಶಾಮಕ ದಳದ ಸಿಬಂದಿಗಳು ರಕ್ಷಣೆ ಮಾಡಿ ಸುರಕ್ಷಿತವಾಗಿ ಕರೆತಂದಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ನಡೆದಿದೆ.
ತುಂಗಾ ನದಿಯಲ್ಲಿ ಸ್ನಾನ ಮಾಡಿದ ಇಬ್ಬರು ಬಟ್ಟೆ ಒಣಗಿಸಲು ನದಿ ಮಧ್ಯದ ಕಲ್ಲು ಬಂಡೆ ಮೇಲೆ ಉಳಿದಿದ್ದರು.
ತಾಲೂಕಿನ ಕೆರೆಕಟ್ಟೆ ಸುತ್ತಮುತ್ತ ಭಾಗದಲ್ಲಿ ಬಾರಿ ಮಳೆಯಾಗಿದ್ದು ತುಂಗಾ ನದಿ ನೀರಿನ ಮಟ್ಟ ಸ್ವಲ್ಪಮಟ್ಟಿಗೆ ಏರಿಕೆಯಾಗಿದೆ. ಇದರಿಂದ ಇಬ್ಬರು ನದಿಯ ನಡು ಗಡ್ಡೆಯಲ್ಲಿ ಸಿಲುಕಿದ್ದರು.
ನದಿಯ ನಡು ಗಡ್ಡೆಯಲ್ಲಿ ಇಬ್ಬರು ವ್ಯಕ್ತಿಗಳು ಸಿಲುಕಿರುವ ವಿಚಾರವನ್ನು ತಿಳಿಯರು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ನದಿಯ ನಡು ಗಡ್ಡೆಯಲ್ಲಿ ಸಿಲುಕಿದ್ದ ಇಬ್ಬರು ವ್ಯಕ್ತಿಯನ್ನು ಸುರಕ್ಷಿತವಾಗಿ ಕರೆತಂದಿದ್ದಾರೆ.
ಶೃಂಗೇರಿ ಯಲ್ಲಿ ತೋಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ಮೂಲದವರು ಇಬ್ಬರು ವ್ಯಕ್ತಿಗಳು ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ