ವಿದ್ಯಾರಣ್ಯಪುರ ಗ್ರಾಪಂನ ನೂತನ ಮಹಡಿ ಕಟ್ಟಡ ಉದ್ಘಾಟನೆ
Team Udayavani, Jun 7, 2020, 3:33 PM IST
ಶೃಂಗೇರಿ: ವಿದ್ಯಾರಣ್ಯಪುರ ಗ್ರಾಪಂ ಮೊದಲ ಮಹಡಿಯನ್ನು ಶಾಸಕ ಟಿ.ಡಿ. ರಾಜೇಗೌಡ ಉದ್ಘಾಟಿಸಿದರು.
ಶೃಂಗೇರಿ: ಗ್ರಾಪಂ ಕಟ್ಟಡದೊಂದಿಗೆ ಶಾಶ್ವತ ಆದಾಯ ತಂದುಕೊಡುವ ಮಹಡಿ ನಿರ್ಮಿಸಿ, ಸಾರ್ವಜನಿಕರಿಗೂ ಅನುಕೂಲ ಕಲ್ಪಿಸಲಾಗಿದೆ ಎಂದು ಶಾಸಕ ಟಿ.ಡಿ. ರಾಜೇಗೌಡ ಹೇಳಿದರು.
ಪಟ್ಟಣದ ಹೊರವಲಯದ ವಿದ್ಯಾರಣ್ಯಪುರ ಗ್ರಾಪಂನ ಮೊದಲ ಮಹಡಿಯ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಮಲೆನಾಡಿನಲ್ಲಿ ಆರ್ಸಿಸಿ ಕಟ್ಟಡ ಸೋರಿಕೆಯಾಗುವುದು ಸಾಮಾನ್ಯವಾಗಿದೆ. ಮೊದಲ ಮಹಡಿ ನಿರ್ಮಿಸಿ, ಸೋರಿಕೆಯನ್ನು ತಪ್ಪಿಸಿದಂತಾಗಿದೆ. ಕಟ್ಟಡವು ವಿಶಾಲವಾಗಿದ್ದು, ಕಚೇರಿ ಉಪಯೋಗಕ್ಕೆ ಅನುಕೂಲವಾಗಿದೆ ಎಂದರು.
ಗ್ರಾಪಂ ಅಧ್ಯಕ್ಷ ರಾಜೇಶ್ ಶೆಟ್ಟಿ ಮಾತನಾಡಿ, ಗ್ರಾಪಂ ಸ್ವಂತ ನಿಧಿ 13 ಲಕ್ಷ ರೂ. ವೆಚ್ಚದಲ್ಲಿ ಗ್ರಾಪಂ ಮೊದಲ ಮಹಡಿ ನಿರ್ಮಿಸಲಾಗಿದೆ. ಕಟ್ಟಡದ ಉದ್ಘಾಟನೆಯನ್ನು ಅದ್ಧೂರಿಯಾಗಿ ನಡೆಸಲು ಉದ್ದೇಶಿಸಲಾಗಿತ್ತಾದರೂ, ಕೋವಿಡ್ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳಗೊಳಿಸಲಾಗಿದೆ. ಗ್ರಾಪಂ ಸದಸ್ಯರ ಸಹಕಾರದಿಂದ ಉತ್ತಮ ಕಟ್ಟಡ ನಿರ್ಮಿಸಲಾಗಿದೆ ಎಂದರು. ತಾಪಂ ಸದಸ್ಯೆ ಶಿಲ್ಪಾ ಮಂಜುನಾಥ್, ಇಒ ಸುದೀಪ್, ಗ್ರಾಪಂ ಸದಸ್ಯರು, ಗ್ರಾಪಂ ಅಭಿವೃದ್ಧಿ ಅಧಿಕಾರಿ ಉಪೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ