ಹುಣಸೋಡು ಬ್ಲಾಸ್ಟ್ ಪ್ರಕರಣದ ತನಿಖೆ ಸಿಬಿಐಗೆ ವಹಿಸಲ್ಲ: ಆರ್.ಅಶೋಕ್
Team Udayavani, Jan 24, 2021, 3:04 PM IST
ಚಿಕ್ಕಮಗಳೂರು: ಶಿವಮೊಗ್ಗದ ಹುಣಸೋಡು ಕ್ವಾರೆಯಲ್ಲಿ ನಡೆದ ಸ್ಪೋಟ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಿಲ್ಲ. ರಾಜ್ಯದ ಪೊಲೀಸರು ಸಮರ್ಥರಿದ್ದಾರೆ, ಅವರೇ ತನಿಖೆ ಮಾಡುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಸ್ಫೋಟಕ ಸಾಮಗ್ರಿ ಖರೀದಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ರೂಪಿಸಲು ಸಿದ್ದತೆ ನಡೆಯುತ್ತಿದೆ. ಸ್ಫೋಟಕ ಸಾಮಾಗ್ರಿಗಳ ಶೇಖರಣೆಯ ಬಗ್ಗೆ ಪರಿಶೀಲಿಸಿ ಅನುಮತಿ ಕೊಡಬೇಕು. ಹುಣಸೋಡಿಗೆ ಸ್ಫೋಟಕ ಬಂದಿರುವುದು ಆಂಧ್ರದಿಂದ ಎಂಬ ಮಾಹಿತಿ ಇದೆ. ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಮಂಗಳೂರಿನಲ್ಲಿ ಸಿದ್ದವಾಗಲಿದೆ ಪ್ಲಾಸ್ಟಿಕ್ ಪಾರ್ಕ್: ಸಚಿವ ಡಿ ವಿ ಸದಾನಂದ ಗೌಡ
ಗಣಿಗಾರಿಕೆಗೆ ಬಂದಿದೆ ಸರಿ, ಆದರೆ ಬೇರೆ ಉದ್ದೇಶಕ್ಕಾಗಿದ್ದರೆ ದೊಡ್ಡ ಅನಾಹುತವಾಗುತ್ತಿತ್ತು. ಬೇರೆ ರಾಜ್ಯದಿಂದ ಯಾರು ಈ ಸ್ಪೋಟಕಗಳನ್ನು ಕೊಡುತ್ತಾರೆ, ಯಾರು ತರುತ್ತಾರೆ ಅದೂ ತನಿಖೆಯಾಗಬೇಕು. ಘಟನೆ ನಡೆದ ದಿನವೇ ಕಂದಾಯ ಇಲಾಖೆಯಿಂದ ವಿಪತ್ತು ನಿರ್ವಹಣಾ ತಂಡ ಕಳಿಸಿದ್ದೇವೆ ಎಂದರು.
ಖಾತೆ ಬದಲಾವಣೆ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಖಾತೆಯ ಕ್ಯಾತೆ ಈಗ ಮುಗಿದ ಅಧ್ಯಾಯ, ನೋ ಖಾತೆಯ ಕ್ಯಾತೆ ಎಂದರು.
ಇದನ್ನೂ ಓದಿ: ಆಲೂರು : ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬೈಕ್ ಸವಾರ ಪಾರು
ಎಲ್ಲರೂ ಸಿಎಂ ಜೊತೆಯೇ ಇದ್ದಾರೆ. ಗೋಪಾಲಯ್ಯ, ಎಂಟಿಬಿ ನಾಗರಾಜ್, ಸುಧಾಕರ್, ಶಂಕರ್ ಜೊತೆ ಮೊನ್ನೆಯೇ ಮಾತನಾಡಿದ್ದೇನೆ. ಎಲ್ಲರೂ ಸಮಾಧಾನವಾಗಿ, ಶಾಂತವಾಗಿದ್ದಾರೆ, ಯಾವುದೇ ಗೊಂದಲವಿಲ್ಲ ಎಂದು ಅಶೋಕ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್