ಮಸಗಲಿ ಭೂ ಒತ್ತುವರಿ ತೆರವು ನಿಲ್ಲಿಸಿ

ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್‌ ಆಗ್ರಹ

Team Udayavani, May 10, 2022, 5:07 PM IST

chik-magaluru

ಚಿಕ್ಕಮಗಳೂರು: ಮಸಗಲಿಯಲ್ಲಿ ಭೂಮಿಯನ್ನು ಕೃಷಿ ಮಾಡಿ ಕಾಫಿ ಬೆಳೆಯಲಾಗಿದೆ. ಅದನ್ನು ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗಿದ್ದು, ಕೂಡಲೇ ನಿಲ್ಲಿಸಬೇಕೆಂದು ಕೆಪಿಸಿಸಿ ವಕ್ತಾರ ಎಚ್‌. ಎಚ್‌. ದೇವರಾಜ್‌ ಆಗ್ರಹಿಸಿದರು.

ಸೋಮವಾರ ಈ ಸಂಬಂಧ ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ ಅವರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್‌ ಮುಖಂಡರು, ಗ್ರಾಮದಲ್ಲಿ ಸರ್ಕಾರ ನಾಗರಿಕ ಸೌಲಭ್ಯ ಕಲ್ಪಿಸಿದೆ. ಈಗ ಏಕಾಏಕಿ ತೆರವು ಕಾರ್ಯಕ್ಕೆ ಮುಂದಾಗಿರುವುದು ಸರಿಯಲ್ಲ. ನಮ್ಮ ಭೂಮಿಯನ್ನು ನಮಗೆ ಬಿಟ್ಟು ಕೊಡಬೇಕೆಂದು ಒತ್ತಾಯಿಸಿದರು.

ಸಾಗುವಳಿ ಭೂಮಿಯನ್ನು ತೆರವುಗೊಳಿಸಿದರೆ ಕುಟುಂಬಗಳು ಬೀದಿಗೆ ಬರಲಿದ್ದು, ಪರಿಸ್ಥಿತಿ ಗಂಭೀರವಾಗಲಿದೆ. ಅವರಿಗೆ ಬದಲಿ ಭೂಮಿ ನೀಡಿ, ನಾಗರಿಕ ಸೌಲಭ್ಯ ಕಲ್ಪಿಸುವ ತನಕ ತೆರವುಗೊಳಿಸಬಾರದು ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ಮಾತನಾಡಿ, ಪರಿಹಾರ ರೂಪದಲ್ಲಿ ನಿವೇಶನ ಮನೆ ನಿರ್ಮಿಸಿಕೊಡಬೇಕು. ಅಲ್ಲಿಯತನಕ ತೆರವುಗೊಳಿಸಬಾರದು. ಕಂದಾಯ ಮತ್ತು ಅರಣ್ಯ ಸಚಿವರು ಮತ್ತು ಮುಖ್ಯಮಂತ್ರಿಗಳು ತೆರವು ಕಾರ್ಯಕ್ಕೆ ಮುಂದಾಗಬಾರದೆಂದು ಮನವಿ ಮಾಡಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಡಾ| ಕೆ.ಪಿ. ಅಂಶುಮಂತ್‌ ಮಾತನಾಡಿ, ನಿಷೇಧಾಜ್ಞೆ ಜಾರಿಗೊಳಿಸಿ ತೆರವು ಕಾರ್ಯಕ್ಕೆ ಮುಂದಾಗಿರುವುದು ಸರಿಯಲ್ಲ. ಮಾನವೀಯತೆ ತೋರಬೇಕಿದೆ. ನಾಗರಿಕರ ರಕ್ಷಣೆ ಜಿಲ್ಲಾಡಳಿತದ ಜವಾಬ್ದಾರಿ. ಒತ್ತಾಯಪೂರ್ವಕವಾಗಿ ತೆರವು ಕಾರ್ಯಕ್ಕೆ ಮುಂದಾಗದೆ ಜನರನ್ನು ವಿಶ್ವಾಸಕ್ಕೆ ಪಡೆದುಕೊಳ್ಳಬೇಕಿದೆ ಎಂದು ಹೇಳಿದರು.

ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪ ಅವರು ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯ ತರುವ ಭರವಸೆ ನೀಡಿದರು. ಕಾಂಗ್ರೆಸ್‌ ಮುಖಂಡ ಬಿ.ಎಚ್. ಹರೀಶ್‌ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.