ಕೋವಿಡ್ ತಡೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಿ: ಸಿದ್ದರಾಮಯ್ಯ ಸಲಹೆ
Team Udayavani, Dec 3, 2021, 1:49 PM IST
ಚಿಕ್ಕಮಗಳೂರು: ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರ ಸರಿಯಾದ ಸಿದ್ಧತೆಯನ್ನು ಮಾಡಿಕೊಂಡಿರಲಿಲ್ಲ. ಹೀಗಾಗಿ ತುಂಬಾ ಜನ ಸಾವನ್ನಪ್ಪಿದ್ದರು, ಈ ಬಾರಿ ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟೊತ್ತಿಗಾಗಲೇ ಸರ್ಕಾರ ಎರಡು ಡೋಸ್ ಮುಗಿಸಬೇಕಿತ್ತು. ಬೂಸ್ಟರ್ ವ್ಯಾಕ್ಸಿನೇಷನ್ ಮಾಡಿಸಲು ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದರು.
ಇಬ್ಬರಿಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಹರಡದಂತೆ ಕ್ರಮ ಕೈಗೊಳ್ಳಬೇಕು. ಅಂತಾರಾಷ್ಟ್ರೀಯ ವಿಮಾನಗಳನ್ನು ನಿಲ್ಲಿಸಬೇಕು. ವಿಮಾನ ನಿಲ್ದಾಣದಲ್ಲಿ ಸರಿಯಾದ ತಪಾಸಣೆಯಾಗಬೇಕು ಎಂದು ಅವರು ಒತ್ತಾಯಿಸಿದರು.
ಗೂಂಡಾಗಳನ್ನು ಕರೆಯಿಸಿ ಕಾಂಗ್ರೆಸ್ ನಿಂದ ಪ್ರಚಾರ ನಡೆಸಲಾಗುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ ಟಾಂಗ್ ನೀಡಿದ ಸಿದ್ದರಾಮಯ್ಯ, ಜಾರಕಿಹೊಳಿ ಅವರ ಪಕ್ಷದ ವಿರುದ್ಧವಾಗಿಯೇ ಅಭ್ಯರ್ಥಿ ನಿಲ್ಲಿಸಿಕೊಂಡಿದ್ದಾರೆ. ಈ ರೀತಿ ಹೇಳಿಕೆ ನೀಡಲು ಅವರಿಗೆ ಯಾವ ನೈತಿಕತೆ ಇದೆ? ಲಖನ್ ಜಾರಕಿಹೊಳಿಯನ್ನು ಚುನಾವಣೆಗೆ ನಿಲ್ಲಿಸಿರುವುದು ಯಾರು? ಬಿಜೆಪಿ ಅಧಿಕೃತ ಅಭ್ಯರ್ಥಿ ಇದ್ದರೂ ಅವರ ತಮ್ಮನನ್ನ ನಿಲ್ಲಿಸಿದ್ದಾರೆ ಎಂದು ತಿರುಗೇಟು ನೀಡಿದರು.
ಸಿಎಂ ಬದಲಾವಣೆ ಕುರಿತು ಈಶ್ವರಪ್ಪ ಬಾಯಿತಪ್ಪಿ ಸತ್ಯ ಹೇಳಿದ್ದಾರೆ. ಆಮೇಲೆ ಸರಿಪಡಿಸಿಕೊಳ್ಳಲು ಹೋಗುತ್ತಿದ್ದಾರೆ, ಆದರೆ ಜನರಿಗೆ ಗೊತ್ತಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ