ದೌರ್ಜನ್ಯ ತಡೆಗೆ ಹೋರಾಟ ಅಗತ್ಯ


Team Udayavani, Mar 3, 2020, 2:33 PM IST

Udayavani Kannada Newspaper

ಮೂಡಿಗೆರೆ: ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಸಚಿವೆ ಮೋಟಮ್ಮ ಅಭಿಪ್ರಾಯಪಟ್ಟರು.

ಪಟ್ಟಣದ ಹೊಯ್ಸಳ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಸ್ತೂರಿಬಾ ಕ್ರೀಡಾ ಯುವತಿ ಮಂಡಳಿ, ಆಶ್ರಯ ಸಾಮಾಜಿಕ ಸೇವಾ ಸಂಸ್ಥೆ, ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹಿಳೆಯರು ಪುರುಷರಿಗೆ ಸಮಾನವಾದ ಸಾಮರ್ಥ್ಯ ಹೊಂದಿದ್ದು, ಸಮಾಜದ ಎಲ್ಲಾ ರಂಗಗಳಲ್ಲಿ ಮುಂದಿದ್ದಾರೆ. ಆದರೆ ಸಾಮಾಜಿಕವಾಗಿ ಮಹಿಳೆಯರನ್ನು ಹಿಂದಿಕ್ಕಿ ಅಸಮಾನತೆ ಪ್ರದರ್ಶಿಸಲಾಗುತ್ತಿದೆ. ಮಹಿಳೆ ಕೌಟುಂಬಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡುತ್ತಲೇ ಬಂದಿದ್ದಾಳೆ. ಆದರೂ ಸಮಾಜದಲ್ಲಿ ಅವಳಿಗೆ ಸಿಗಬೇಕಾದ ಸ್ಥಾನಮಾನಗಳು ಸಿಗುತ್ತಿಲ್ಲ. ಸ್ವಾತಂತ್ರ್ಯ ಬಂದು ಏಳು ದಶಕಗಳು ಕಳೆದರೂ ಮಹಿಳೆಯರ ಮೇಲಿನ ದೌರ್ಜನ್ಯ ನಿಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಬಹುತೇಕ ಕಡೆಗಳಲ್ಲಿ ಇಂದಿಗೂ ಬಾಲ್ಯವಿವಾಹ, ಹೆಣ್ಣು ಮಗುವಿನ ಭ್ರೂಣ ಹತ್ಯೆಯಂತಹ ಶೋಷಣೆಗಳು ಚಾಲ್ತಿಯಲ್ಲಿವೆ. ಸರಕಾರಗಳು ಹೆಣ್ಣುಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳನ್ನು ಜಾರಿ ಮಾಡಿದ್ದರೂ ಸಹ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಕಡಿಮೆಯಾಗದಿರುವುದು ಕಳವಳಕಾರಿಯಾಗಿದೆ. ಸಾಮಾಜಿಕ ಮಟ್ಟದಲ್ಲಿ ಹೆಣ್ಣುಮಕ್ಕಳು ಧೈರ್ಯದಿಂದ ಮುಂದುವರೆದಲ್ಲಿ ಇಂತಹ ಘಟನೆಗಳನ್ನು ಹಿಮ್ಮೆಟ್ಟಬಹುದು. ಆದರೆ ಕೆಲವು ಕಡೆಗಳಲ್ಲಿ ಸ್ವಾತಂತ್ರ್ಯದ ನೆಪದಲ್ಲಿ ಕಾನೂನು ದುರ್ಬಳಕೆ ಪ್ರಕರಣಗಳು ಸ್ತ್ರೀಯರ ಮೇಲಿನ ಹಿಡಿತ ಹೆಚ್ಚು ಮಾಡಲು ಕಾರಣವಾಗಿವೆ. ಕಾನೂನುಗಳನ್ನು ತಮ್ಮ ರಕ್ಷಣೆಗೆ ಬಳಸಿಕೊಳ್ಳುವುದರ ಜೊತೆಗೆ ಸಮಾಜಕ್ಕೆ ಸಹಕಾರಿಯಾಗಿ ಬಳಕೆ ಮಾಡುವಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ ಅಧ್ಯಕ್ಷೆ ಟಿ.ಕಮಲಾಕ್ಷಮ್ಮ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ತಾಲೂಕಿನ ಪ್ರತೀ ಗ್ರಾಮದಲ್ಲಿ ಒಂದೊಂದು ಗ್ರಾಮವನ್ನು ಆಯ್ದುಕೊಂಡು ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಿಳಾ ಸಂಘಟನೆಗಳ ಕಾರ್ಯಕರ್ತರು ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಿಳೆಯರು ತಮ್ಮ ಕೀಳರಿಮೆಯನ್ನು ಬಿಟ್ಟು ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಸಮಾಜದ ಮುಂಚೂಣಿಗೆ ಬರಬೇಕೆಂದು ಸಲಹೆ ನೀಡಿದರು.

ಸಂಚಿ ಹೊನ್ನಮ್ಮ ಮಹಿಳಾ ಮಂಡಳಿ ಕಾರ್ಯದರ್ಶಿ ಪೂರ್ಣಿಮಾ, ನಿರ್ದೇಶಕರಾದ ಬಿಳಗುಳದ ಸುಧಾ ಮಂಜುನಾಥ್‌, ಎಚ್‌.ಟಿ.ವರಮಹಾಲಕ್ಷೀ¾, ಕಸಾಪ ಕಸಬಾ ಹೋಬಳಿ ಅಧ್ಯಕ್ಷೆ ಬಾನುಮತಿ, ಪ.ಪಂ. ಸದಸ್ಯ ಎಚ್‌ .ಪಿ.ರಮೇಶ್‌, ಕಿರಗುಂದ ಗ್ರಾ.ಪಂ. ಅಧ್ಯಕ್ಷೆ ವಿಂದ್ಯಾ ರಘು, ಅಂಬಾವತಿ, ಕಲ್ಯಾಣಿ, ಜಯಮ್ಮ, ಬಿಳಗುಳದ ಕಲ್ಯಾಣಿ, ದಿವ್ಯಾ, ಬೃಂದಾ, ಕಾಂಗ್ರೆಸ್‌ ವಕ್ತಾರ ಎಂ.ಎಸ್‌.ಅನಂತ್‌ ಮುಂತಾದವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweqwe

Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

420 ನಂಬರ್‌ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.